ಜಿ 23 ನಾಯಕರ ವಿರುದ್ಧ ಖರ್ಗೆ ಹೇಳಿಕೆಗೆ ಆಕ್ರೋಶ
Team Udayavani, Aug 24, 2021, 10:15 PM IST
ನವದೆಹಲಿ: “ಕೋವಿಡ್ ಅವಧಿಯಲ್ಲಿ ಕಾಂಗ್ರೆಸ್ನ “ಜಿ-23′ ನಾಯಕರು ನಾಪತ್ತೆಯಾಗಿದ್ದರು. ಅವರಿಗೆ ಎಲ್ಲವನ್ನೂ ಕೊಟ್ಟಿರುವ ಪಕ್ಷವನ್ನು ಅವರು ನಾಶ ಮಾಡಬಾರದು’ ಎಂಬ ರಾಜ್ಯಸಭೆಯ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಭಾರೀ ಆಕ್ಷೇಪ ವ್ಯಕ್ತವಾಗಿದೆ.
ಖರ್ಗೆಯವರ ಮಾತುಗಳ ಬಗ್ಗೆ “ಜಿ-23′ ಗುಂಪಿನಲ್ಲಿ ಗುರುತಿಸಿಕೊಂಡ ಕೆಲವು ನಾಯಕರು ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ದೂರು ನೀಡಿದ್ದಾರೆ.
“ಮಾತನಾಡುವ ಮುನ್ನ ನೀವು ನೀವು ಸ್ವಲ್ಪ ಯೋಚಿಸಬೇಕು. ನಾವು ರಚನಾತ್ಮಕ ಬದಲಾವಣೆಯನ್ನು ಬಯಸುತ್ತಿದ್ದೇವೆಯೇ ಹೊರತು ಪಕ್ಷದ ಏಳಿಗೆಗೆ ಅಡ್ಡಿಪಡಿಸುವವರಲ್ಲ ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಿ’ ಎಂದು ಜಿ23 ಬಣದಲ್ಲಿ ಗುರುತಿಸಿಕೊಂಡಿರುವ ಕಾಂಗ್ರೆಸ್ ಹಿರಿಯ ನಾಯಕ ಕಪಿಲ್ ಸಿಬಲ್ ಹೇಳಿದ್ದಾರೆ.
ಇದನ್ನೂ ಓದಿ:100 ಬಿಲಿಯನ್ ಡಾಲರ್ ಬಂಡವಾಳ ಗಳಿಸಿದ ಇನ್ಫೋಸಿಸ್
ತಿರುವನಂತಪುರ ಸಂಸದ ಶಶಿ ತರೂರ್ ಕೂಡ ಖರ್ಗೆಯವರ ಹೇಳಿಕೆ ದುರದೃಷ್ಟಕರ ಎಂದು ಬಣ್ಣಿಸಿದ್ದಾರೆ. ಖರ್ಗೆಯವರ ಬಗ್ಗೆ ಅಪಾರ ಗೌರವ ಇದೆ. ನಾವೆಲ್ಲರೂ ಪಕ್ಷವನ್ನು ಬಲಪಡಿಸುವ ಕಾರ್ಯದಲ್ಲಿಯೇ ನಿರತರಾಗಿದ್ದೇವೆ. ಈ ಮೂಲಕ ಬಿಜೆಪಿ ವಿರುದ್ಧ ಹೋರಾಡಬೇಕಾಗಿದೆ ಎಂದಿದ್ದಾರೆ.
ಸಂಸದ ಮನೀಶ್ ತಿವಾರಿ ಪ್ರತಿಕ್ರಿಯೆ ನೀಡಿ, “ಮಾಜಿ ಸಚಿವ ಕಪಿಲ್ ಸಿಬಲ್ ಮನೆಯಲ್ಲಿ ಆಯೋಜಿಸಲಾಗಿದ್ದ ಔತಣಕೂಟದಲ್ಲಿ ಪಕ್ಷದ ಬೆಳವಣಿಗೆ ಬಗ್ಗೆ ಚರ್ಚಿಸಲಾಗಿಲ್ಲ. ಸೋಂಕಿನ 1, 2ನೇ ಅವಧಿಯಲ್ಲಿ ನನ್ನ ಕ್ಷೇತ್ರದಲ್ಲಿ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ಕೆಲಸ ಮಾಡಿದ್ದೇನೆ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ
ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ