ಶೆಹ್ಲಾ ಟ್ವೀಟ್ಗೆ ಗಡ್ಕರಿ ಆಕ್ರೋಶ
Team Udayavani, Jun 11, 2018, 5:08 PM IST
ಹೊಸದಿಲ್ಲಿ: ಪ್ರಧಾನಿ ಮೋದಿ ಅವರ ಹತ್ಯೆಗೆ ನಕ್ಸಲರು ಸಂಚು ರೂಪಿಸಿದ್ದಾರೆ ಎಂಬ ಸುದ್ದಿಗೆ ಸಂಬಂಧಿಸಿ ಜೆಎನ್ಯು ವಿದ್ಯಾರ್ಥಿ ನಾಯಕಿ ಶೆಹ್ಲಾ ರಶೀದ್ ಮಾಡಿದ್ದ ಟ್ವೀಟ್ವೊಂದು ಕೇಂದ್ರ ಸಚಿವ ಗಡ್ಕರಿ ಅವರ ಆಕ್ರೋಶಕ್ಕೆ ಕಾರಣವಾಗಿದೆ. ವಿವಾದಾತ್ಮಕ ಟ್ವೀಟ್ ಅನ್ನು ಗಂಭೀರವಾಗಿ ಪರಿಗಣಿಸಿರುವ ಸಚಿವ ಗಡ್ಕರಿ, ಶೆಹ್ಲಾ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಮೋದಿ ಹತ್ಯೆ ಸಂಚು ವಿಚಾರ ಬಹಿರಂಗಗೊಳ್ಳುತ್ತಲೇ ಟ್ವೀಟ್ ಮಾಡಿದ್ದ ಶೆಹ್ಲಾ ರಶೀದ್, “ಮೋದಿ ಅವರನ್ನು ಹತ್ಯೆಗೈಯ್ಯಲು ಆರೆಸ್ಸೆಸ್/ಗಡ್ಕರಿ ಅವರೇ ಯೋಜನೆ ರೂಪಿಸಿದಂತಿದೆ. ನಂತರ, ಯಾರೋ ಮುಸ್ಲಿಮರು ಅಥವಾ ಕಮ್ಯೂನಿಸ್ಟ್ಗಳ ಮೇಲೆ ಆರೋಪ ಹೊರಿಸಿ, ಮುಸ್ಲಿಮರ ಮೇಲೆ ಹಲ್ಲೆಮಾಡಿ ಕೊಲ್ಲುವ ಯೋಜನೆ ಇರಬಹುದು’ ಎಂದು ಬರೆದಿದ್ದರು. ಶೆಹ್ಲಾ ಅವರ ಟ್ವೀಟ್ಗೆ ಪ್ರತಿಯಾಗಿ ಸಚಿವ ಗಡ್ಕರಿ ಅವರೂ ಟ್ವೀಟ್ ಮಾಡಿದ್ದು, “ಪ್ರಧಾನಿ ಮೋದಿ ಹತ್ಯೆ ಸಂಚು ಕುರಿತು ನನ್ನ ವಿರುದ್ಧ ಅತ್ಯಂತ ಕೆಟ್ಟದಾಗಿ ಹೇಳಿಕೆ ನೀಡಿರುವ ಸಮಾಜದ್ರೋಹಿ ಶಕ್ತಿಗಳ ವಿರುದ್ಧ ನಾನು ಕಾನೂನು ಕ್ರಮ ಕೈಗೊಳ್ಳುತ್ತೇನೆ’ ಎಂದು ಶೆಹ್ಲಾರ ಹೆಸರೆತ್ತದೇ ಎಚ್ಚರಿಕೆ ನೀಡಿದ್ದಾರೆ. ಇದರಿಂದ ಎಚ್ಚೆತ್ತುಕೊಂಡ ಶೆಹ್ಲಾ, “ವಿಶ್ವದ ಅತಿದೊಡ್ಡ ಪಕ್ಷದ ನಾಯಕರೊಬ್ಬರು ಒಂದು ವ್ಯಂಗ್ಯಾತ್ಮಕ ಟ್ವೀಟ್ ಅನ್ನು ಗಂಭೀರವಾಗಿ ಪರಿಗಣಿಸಿದ್ದಾರೆ’ ಎಂದು ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ