ಬಾಟಲಿಗೆ ಸತ್ತ ಸೊಳ್ಳೆಗಳನ್ನು ತುಂಬಿ ಕೋರ್ಟ್ಗೆ ಹಾಜರಾದ!
ಕೈದಿಯ ಸೊಳ್ಳೆ ಪರದೆ ಬೇಡಿಕೆ ತಿರಸ್ಕರಿಸಿದ ನ್ಯಾಯಾಲಯ
Team Udayavani, Nov 5, 2022, 7:15 AM IST
ಮುಂಬೈ: ತಾವಿರುವ ಜೈಲು ಕೊಠಡಿಯ ದುಸ್ಥಿತಿಯನ್ನು ತಿಳಿಸುವ ಸಲುವಾಗಿ ವಿಚಾರಣಾಧೀನ ಗ್ಯಾಂಗ್ಸ್ಟರ್ವೊಬ್ಬ ಬಾಟಲಿ ತುಂಬ ಸತ್ತ ಸೊಳ್ಳೆಗಳನ್ನು ತುಂಬಿಸಿ ಕೋರ್ಟ್ಗೆ ತಂದಿದ್ದಾನೆ!
ಜೈಲಿನ ಸೆಲ್ನಲ್ಲಿ ಸೊಳ್ಳೆ ಕಾಟ ವಿಪರೀತವಾಗಿದೆ. ಅದಕ್ಕೆ ಈ ಬಾಟಲಿಯಲ್ಲಿರುವ ಸೊಳ್ಳೆಗಳೇ ಸಾಕ್ಷಿ. ದಯವಿಟ್ಟು, ನಮಗೆ ಸೊಳ್ಳೆ ಪರದೆಯ ವ್ಯವಸ್ಥೆ ಕಲ್ಪಿಸಿ ಎಂದು ಗ್ಯಾಂಗ್ಸ್ಟರ್ ಎಜಾಝ್ ಕೋರ್ಟ್ಗೆ ಮನವಿ ಮಾಡಿದ್ದಾನೆ. ಆದರೆ, ಮುಂಬೈನ ಸೆಷನ್ಸ್ ನ್ಯಾಯಾಲಯವು ಈತನ ಅರ್ಜಿಯನ್ನು ವಜಾ ಮಾಡಿದೆ.
ಭೂಗತ ಪಾತಕಿ ದಾವೂದ್ ಇಬ್ರಾಹಿಂನ ಮಾಜಿ ಸಹಚರ ಎಜಾಝ್ ಮೇಲೆ ಹಲವು ಕ್ರಿಮಿನಲ್ ಕೇಸುಗಳು ದಾಖಲಾಗಿವೆ. 2020ರ ಜನವರಿಯಿಂದ ಆತ ತಲೋಜಾ ಜೈಲಿನಲ್ಲಿದ್ದಾನೆ. ಇತ್ತೀಚೆಗಷ್ಟೇ ಆತ ಕೈದಿಗಳಿಗೆ ಸೊಳ್ಳೆ ಪರದೆ ಬಳಸಲು ಅವಕಾಶ ಕಲ್ಪಿಸುವಂತೆ ಕೋರಿ ಕೋರ್ಟ್ ಮೊರೆಹೋಗಿದ್ದ.
ಗುರುವಾರ ವಿಚಾರಣೆ ವೇಳೆ, ಸತ್ತ ಸೊಳ್ಳೆಗಳನ್ನು ಪ್ಲಾಸ್ಟಿಕ್ ಬಾಟಲಿಯೊಳಗೆ ತುಂಬಿಸಿ ಕೋರ್ಟ್ಗೆ ತಂದಿದ್ದ. ಎಲ್ಲ ಕೈದಿಗಳು ಪ್ರತಿದಿನ ಸೊಳ್ಳೆ ಕಾಟ ಎದುರಿಸುತ್ತಿದ್ದಾರೆ. ನಮಗೆ ಸೊಳ್ಳೆ ಪರದೆ ಬಳಸಲು ಅವಕಾಶ ಕೊಡಿ ಎಂದು ಕೇಳಿಕೊಂಡಿದ್ದ.
ಆದರೆ, ಭದ್ರತಾ ಕಾರಣಗಳಿಂದಾಗಿ ಅನುಮತಿ ನೀಡಲಾಗದು ಎಂದು ಜೈಲಿನ ಅಧಿಕಾರಿಗಳು ಹೇಳಿದ ಕಾರಣ, ಕೋರ್ಟ್ ಆತನ ಮನವಿಯನ್ನು ತಿರಸ್ಕರಿಸಿತು. ಎಜಾಝ್ ಮಾತ್ರವಲ್ಲದೇ, ಇನ್ನೂ ಅನೇಕ ಕೈದಿಗಳು ಇದೇ ಮಾದರಿಯ ಅರ್ಜಿಗಳನ್ನು ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ