ರಾಸಾಯನಿಕ ಕಾರ್ಖಾನೆಯಿಂದ ವಿಷಾನಿಲ ಸೋರಿಕೆ: 3 ಮಕ್ಕಳು ಸೇರಿದಂತೆ 7 ಜನರು ದುರ್ಮರಣ
Team Udayavani, Feb 6, 2020, 3:10 PM IST
ಉತ್ತರಪ್ರದೇಶ; ರಾಸಾಯಾನಿಕ ಕಾರ್ಖಾನೆಯಿಂದ ವಿಷಕಾರಿ ಅನಿಲ ಸೋರಿಕೆಯಾದ ಕಾರಣ ಮೂರು ಮಕ್ಕಳು ಸೇರಿದಂತೆ 7 ಜನರು ಸಾವನ್ನಪ್ಪಿದ ಘಟನೆ ಸಿತಾಪುರ್ ಜಿಲ್ಲೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಬಿಸ್ವಾನ್ ನ ರಾಸಾಯನಿಕ ಕಾರ್ಖಾನೆಯ ಪೈಪ್ಲೈನ್ನಿಂದ ಅನಿಲ ಸೋರಿಕೆಯಾಗಿದ್ದು, ಪರಿಣಾಮವಾಗಿ ಕಾರ್ಖಾನೆಯೊಳಗೆ ಮಲಗಿದ್ದವರು ಸಾವನ್ನಪ್ಪಿದ್ದಾರೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ ಎಂದು ವರದಿ ತಿಳಿಸಿದೆ.
ಸ್ಥಳೀಯರು ಅನಿಲ ಸೋರಿಕೆಯಾಗುತ್ತಿರುವ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದು , ಆದರೇ ತೀವ್ರತರವಾದ ವಾಸನೆಯಿಂದ ಕಾರ್ಖಾನೆಯೊಳಗೆ ತಕ್ಷಣ ಪ್ರವೇಶಿಸಲು ಸಾಧ್ಯವಾಗಲಿಲ್ಲ. ಕೂಡಲೇ ಪೊಲೀಸರು ಆಸುಪಾಸಿನಲ್ಲಿ ವಾಸಿಸುತ್ತಿದ್ದ ಜನರನ್ನು ತೆರವುಗೊಳಿಸಿದ್ದಾರೆ. ನಂತರ ಕಾರ್ಖಾನೆಯೊಳಗೆ ಇದ್ದ ಮೂರು ಮಕ್ಕಳು ಸೇರಿದಂತೆ 7 ಜನರ ಮೃತದೇಹಗಳನ್ನು ಹೊರ ತೆಗೆಯಲಾಯಿತು ಎಂದು ಸಿತಾಪುರ್ ಎಸ್’ಪಿ ಎಲ್ ಆರ್ ಕುಮಾರ್ ತಿಳಿಸಿದ್ದಾರೆ.
ಸ್ಥಳೀಯರ ಘಟನೆಯಲ್ಲಿ ಕೆಲವು ಪ್ರಾಣಿಗಳು ಸಾವನ್ನಪ್ಪಿವೆ ಎಂದು ತಿಳಿಸಿದ್ದಾರೆ. ಆದರೆ ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಉತ್ತರಪ್ರದೇಶ ಮುಖ್ಯಮಂತ್ರಿ ಘಟನೆಯ ಕುರಿತು ಸಂತಾಪ ಸೂಚಿಸಿದ್ದು , ಅಧಿಕಾರಿಗಳಿಗೆ ಸಮಗ್ರ ತನಿಖೆ ನಡೆಸುವಂತೆ ತಿಳಿಸಿದ್ದಾರೆ. ಮೃತರ ಕುಟುಂಬಗಳಿಗೆ 4 ಲಕ್ಷ ಪರಿಹಾರ ನೀಡುತ್ತೇವೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆಂದು ಸುದ್ದಿಸಂಸ್ಥೆ ಎಎನ್ ಐ ವರದಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ