ಕಾರು ಇರುವವರ ಗ್ಯಾಸ್‌ ಸಬ್ಸಿಡಿ ರದ್ದು?


Team Udayavani, Dec 7, 2017, 6:15 AM IST

LPG.jpg

ಹೊಸದಿಲ್ಲಿ: ನಿಮ್ಮಲ್ಲಿ ಕಾರು ಇದೆಯೇ? ಹಾಗಿದ್ದರೆ, ಅಡುಗೆ ಅನಿಲಕ್ಕೆ ಹೆಚ್ಚಿನ ಮೊತ್ತ ಪಾವತಿಸಲು ರೆಡಿಯಾಗಿ!
ಕಾರಿಗೂ ಗ್ಯಾಸಿಗೂ ಏನು ಸಂಬಂಧ ಎಂದು ಯೋಚಿಸುತ್ತಿದ್ದೀರಾ? ಸಂಬಂಧ ಇದೆ. ಕಾರು ಹೊಂದಿರುವ ಕುಟುಂಬಗಳ ಗ್ಯಾಸ್‌ ಸಬ್ಸಿಡಿ ರದ್ದು ಮಾಡಲು ಕೇಂದ್ರ ಸರಕಾರ ಚಿಂತನೆ ನಡೆಸಿದೆ.

ಈಗಾಗಲೇ ಫ‌ಲಾನುಭವಿಗಳ ಖಾತೆಗೆ ಸಬ್ಸಿಡಿ ನೇರ ವರ್ಗಾವಣೆ ಯೋಜನೆಯಿಂದಾಗಿ ಸುಮಾರು 3.60 ಕೋಟಿ ನಕಲಿ ಸಂಪರ್ಕಗಳು ಪತ್ತೆಯಾಗಿದ್ದು, ಅವುಗಳ ಸಂಪರ್ಕ ಕಡಿತಗೊಳಿಸಲಾಗಿದೆ. ಇದರಿಂದ ಸರಕಾರಕ್ಕೆ 30 ಸಾವಿರ ಕೋಟಿ ರೂ. ಉಳಿತಾಯವಾಗಿದೆ. ಈಗ ಸರಕಾರ, ಕಾರು ಇರುವ ಕುಟುಂಬಗಳ ಅಡುಗೆ ಅನಿಲ ಸಬ್ಸಿಡಿ ರದ್ದು ಮಾಡಲು ಮುಂದಾಗಿದೆ. 

ಆರ್‌ಟಿಒ ಮಾಹಿತಿ ಸಂಗ್ರಹ: ಈಗಾಗಲೇ ಕೆಲವು ಜಿಲ್ಲೆಗಳ ಪ್ರಾದೇಶಿಕ ಸಾರಿಗೆ ಕಚೇರಿ (ಆರ್‌ಟಿಒ)ಗಳಿಂದ ಆಯಾ ಪ್ರದೇಶಗಳ ಕಾರುಗಳ ನೋಂದಣಿ ವಿವರಗಳನ್ನು ಸರಕಾರ ಸಂಗ್ರಹಿಸಿದೆ. ಇದರಿಂದ ಸರಕಾರದ ಬೊಕ್ಕಸಕ್ಕೆ ಭಾರೀ ಉಳಿತಾಯ ಆಗಲಿದೆ. ಸದ್ಯ ದೇಶದಲ್ಲಿ ಎರಡು, ಮೂರು ಕಾರು ಹೊಂದಿರುವವರೂ ಗ್ಯಾಸ್‌ ಸಬ್ಸಿಡಿ ಪಡೆಯುತ್ತಿದ್ದಾರೆ.

ಇಂಥವರು ಸಬ್ಸಿಡಿ ರಹಿತ ಅಡುಗೆ ಅನಿಲ ಖರೀದಿ ಸಲು ಶಕ್ತರಾಗಿರುವ ಹಿನ್ನೆಲೆಯಲ್ಲಿ ಕಾರು ಮಾಲಕರನ್ನು ಎಲ್‌ಪಿಜಿ ಸಬ್ಸಿಡಿ ವ್ಯಾಪ್ತಿಯಿಂದ ಹೊರಗಿಡಲು ನಿರ್ಧರಿಸಲಾಗಿದೆ ಎಂದು “ದಿ ಬಿಸಿನೆಸ್‌ ಸ್ಟಾ éಂಡರ್ಡ್‌’ ವರದಿ ಮಾಡಿದೆ. ಕಳೆದ ವರ್ಷವಷ್ಟೇ ಸರಕಾರ, 10 ಲಕ್ಷ ರೂ.ಗಿಂತ ಅಧಿಕ ಆದಾಯ ಹೊಂದಿರುವವರನ್ನು ಎಲ್‌ಪಿಜಿ ಸಬ್ಸಿಡಿ ವ್ಯಾಪ್ತಿಯಿಂದ ಹೊರಗಿಟ್ಟಿತ್ತು.

ದೇಶದಲ್ಲಿ 25.11 ಕೋಟಿ ಎಲ್‌ಪಿಜಿ ಗ್ರಾಹಕರಿದ್ದಾರೆ. ಈಗ ಜಾಗತಿಕ ತೈಲ ದರ ಏರಿಕೆಯಾಗುತ್ತಿರುವ ಕಾರಣ, ಎಲ್‌ಪಿಜಿ ಸಬ್ಸಿಡಿ ಮೊತ್ತ ಪ್ರಸಕ್ತ ವರ್ಷ 15 ಸಾವಿರ ಕೋಟಿ ರೂ.ಗೆ ತಲುಪುವ ಸಾಧ್ಯತೆಯಿದೆ.

ಟಾಪ್ ನ್ಯೂಸ್

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

1-lorry

West Bengal;ಝಾರ್ಖಂಡ್‌ನಿಂದ ಬರುವ ವಾಹನಕ್ಕೆ ನಿಷೇಧ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-lorry

West Bengal;ಝಾರ್ಖಂಡ್‌ನಿಂದ ಬರುವ ವಾಹನಕ್ಕೆ ನಿಷೇಧ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

1-lorry

West Bengal;ಝಾರ್ಖಂಡ್‌ನಿಂದ ಬರುವ ವಾಹನಕ್ಕೆ ನಿಷೇಧ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.