Covid ಔಷಧ ಅನಧಿಕೃತ ದಾಸ್ತಾನು, ಗೌತಮ್ ಗಂಭೀರ್ ಫೌಂಡೇಶನ್ ದೋಷಿ: ಹೈಕೋರ್ಟ್
ಹೈಕೋರ್ಟ್ ಡ್ರಗ್ ಕಂಟ್ರೋಲ್ ರ್ ಗೆ ಸೂಚಿಸಿದ್ದು, ಜುಲೈ 29ರಂದು ಮುಂದಿನ ವಿಚಾರಣೆ ನಡೆಯಲಿದೆ ಎಂದು ತಿಳಿಸಿದೆ.
Team Udayavani, Jun 3, 2021, 3:17 PM IST
ನವದೆಹಲಿ:ಕೋವಿಡ್ 19 ಸೋಂಕಿತರಿಗೆ ಬಳಕೆ ಮಾಡುವ ತುರ್ತು ಔಷಧಿಗಳ ಅನಧಿಕೃತ ದಾಸ್ತಾನು, ವಿತರಣೆಗೆ ಸಂಬಂಧಿಸಿದಂತೆ ಗೌತಮ್ ಗಂಭೀರ್ ಫೌಂಡೇಶನ್ ದೋಷಿಯಾಗಿರುವುದಾಗಿ ದೆಹಲಿಯ ಔಷಧ ನಿಯಂತ್ರಕ ಮಂಡಳಿ ಪತ್ತೆಹಚ್ಚಿದೆ ಎಂದು ದೆಹಲಿ ಹೈಕೋರ್ಟ್ ಗುರುವಾರ(ಜೂನ್ 03) ಮಾಹಿತಿ ನೀಡಿರುವುದಾಗಿ ವರದಿಯೊಂದು ತಿಳಿಸಿದೆ.
ಇದನ್ನೂ ಓದಿ;ಕಾಂಗ್ರೆಸ್ ಮಾತು ಕೇಳಿದರೆ ಜೀವ ಹೋಗುತ್ತವೆ,ಬಿಜೆಪಿ ಮಾತು ಕೇಳಿದರೆ ಜೀವ ಉಳಿಯುತ್ತದೆ: ರಾಮುಲು
ವಿಳಂಬ ಮಾಡದೇ ಗೌತಮ್ ಗಂಭೀರ್ ಫೌಂಡೇಶನ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ದೆಹಲಿ ಸರ್ಕಾರದ ಡ್ರಗ್ ಕಂಟ್ರೋಲರ್ ಕೋರ್ಟ್ ಗೆ ವರದಿಯನ್ನು ಸಲ್ಲಿಸಿದೆ. ಕೋವಿಡ್ ಚಿಕಿತ್ಸೆಯಲ್ಲಿ ಬಳಕೆ ಮಾಡುತ್ತಿದ್ದ ಫ್ಯಾಬಿಫ್ಲೂ ಮಾತ್ರೆಗಳನ್ನು ಗಂಭೀರ್ ಫೌಂಡೇಶನ್ ಸಂಸ್ಥೆ ಸಂಗ್ರಹಿಸಿ ವಿತರಣೆ ಮಾಡಿತ್ತು ಎಂದು ವರದಿ ತಿಳಿಸಿದೆ.
ಗೌತಮ್ ಗಂಭೀರ್ ಫೌಂಡೇಶನ್ ಕೋವಿಡ್ 19 ತುರ್ತು ಔಷಧಗಳನ್ನು ಸಂಗ್ರಹ ಮಾಡಿರುವ ವಿಚಾರದಲ್ಲಿ ದೋಷಿ ಎಂದು ಪತ್ತೆಯಾಗಿದೆ. ಅಲ್ಲದೇ ಇಂತಹ ಪ್ರಕರಣಗಳು ಕಂಡು ಬಂದರೆ ಮಾಹಿತಿ ನೀಡುವಂತೆ ಇತರ ಔಷಧ ವಿತರಕರಿಗೂ ಸೂಚನೆ ನೀಡಲಾಗಿದೆ ಎಂದು ಹೇಳಿದೆ.
ಶಾಸಕ ಪ್ರವೀಣ್ ಕುಮಾರ್ ಕೂಡಾ ಡ್ರಗ್ಸ್ ಮತ್ತು ಕಾಸ್ಮೆಟಿಕ್ಸ್ ಕಾಯ್ದೆಯಡಿ ಅಪರಾಧಿಯಾಗಿದ್ದಾರೆ ಎಂದು ನ್ಯಾಯಾಲಯಕ್ಕೆ ತಿಳಿಸಲಾಗಿದೆ. ಇನ್ನು ಆರು ವಾರಗಳಲ್ಲಿ ಈ ಪ್ರಕರಣದ ಸ್ಥಿತಿಗತಿ ಬಗ್ಗೆ ವರದಿ ನೀಡುವಂತೆ ದೆಹಲಿ ಹೈಕೋರ್ಟ್ ಡ್ರಗ್ ಕಂಟ್ರೋಲ್ ರ್ ಗೆ ಸೂಚಿಸಿದ್ದು, ಜುಲೈ 29ರಂದು ಮುಂದಿನ ವಿಚಾರಣೆ ನಡೆಯಲಿದೆ ಎಂದು ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು
MUST WATCH
ಹೊಸ ಸೇರ್ಪಡೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ