ದೇವರನಾಡಿನ ರೋಡಿಗೆ ಗಾಜಾ ಸ್ಟ್ರೀಟ್‌ ನಾಮಕರಣ!


Team Udayavani, Jun 20, 2017, 10:15 AM IST

gaza.jpg

ತಿರುವನಂತಪುರ: ಕಾಸರಗೋಡು ಪುರಸಭೆಯ ತುರುತಿ ವಾರ್ಡಿನಲ್ಲಿರುವ ರಸ್ತೆಯೊಂದು ಈಗ ದೇಶದ ಗಮನ ಸೆಳೆದಿದೆ. ಇದಕ್ಕೆ ಕಾರಣ, ಈ ರಸ್ತೆಗೆ ಇತ್ತೀಚೆಗೆ “ಗಾಜಾ’ ಎಂದು ಮರು ನಾಮಕರಣ ಮಾಡಿರುವುದು. ಗಾಜಾ ಇಸ್ರೇಲ್‌ ಮತ್ತು ಈಜಿಪ್ಟ್ ನಡುವಿರುವ ಪ್ಯಾಲೆಸ್ತೀನ್‌ ಆಡಳಿತಕ್ಕೊಳಪಟ್ಟ ನಗರವಾಗಿದ್ದು, ಮೂರು ದೇಶಗಳ ನಡುವಿನ ವಿವಾದದ ಕೇಂದ್ರವಾಗಿದೆ. ಹೀಗಾಗಿ ಈ ಹೆಸರು ಎನ್‌ಐಎ ಮತ್ತು ಗುಪ್ತಚರ ಪಡೆಯ ಗಮನ ಸೆಳೆದಿದೆ.

ಐಸಿಸ್‌ ಉಗ್ರ ಸಂಘಟನೆಗೆ ಸೇರಿದ 21 ಮಂದಿಯ ಊರಾಗಿರುವ ಪಡನ್ನದ ಪಕ್ಕದಲ್ಲೇ ಇದೆ ತುರುತಿ. ಹೀಗಾಗಿ ರಸ್ತೆಯ ಹೆಸರು ಬದಲಾವಣೆಯ ಹಿಂದೆ ಮತಾಂಧ ಶಕ್ತಿಗಳ ಪಿತೂರಿ ಇರುವ ಅನುಮಾನ ಹುಟ್ಟಿಕೊಂಡಿದೆ. ತುರುತಿ ಜುಮಾ ಮಸೀದಿಗೆ ಹೋಗುವ ರಸ್ತೆಗೆ ಕಳೆದ ತಿಂಗಳು ಗಾಜಾ ಎಂದು ಹೆಸರಿಡಲಾಗಿದೆ ಹಾಗೂ ಜಿಲ್ಲಾ ಪಂಚಾಯತ್‌ ಅಧ್ಯಕ್ಷ
ಎಜಿಸಿ ಬಶೀರ್‌ ಅವರೇ ನಾಮಫ‌ಲಕವನ್ನು ಅನಾವರಣಗೊಳಿಸಿದ್ದಾರೆ ಎನ್ನುತ್ತಿವೆ ವರದಿಗಳು. ರಸ್ತೆ ನಾಮಫ‌ಲಕವನ್ನು ತಾವೇ ಅನಾವರಣ ಗೊಳಿಸಿರುವುದನ್ನು ಸ್ವತಃ ಬಶೀರ್‌ ಒಪ್ಪಿಕೊಂಡಿದ್ದಾರೆ.

ನಿಜವಾಗಿಯೂ, ನಾನು ಅನಾವರಣಗೊಳಿಸುವ ಅತಿಥಿಯಾಗಿರಲಿಲ್ಲ. ಆದರೆ ಕೊನೇ ಕ್ಷಣದಲ್ಲಿ ನನಗೆ ಆಹ್ವಾನ ಬಂದ ಕಾರಣ ಹೋಗಿದ್ದೆ ಎಂದು ಅವರು ಹೇಳಿದ್ದಾರೆ.

ಬಿಜೆಪಿ ಆಕ್ಷೇಪ: ರಸ್ತೆಗೆ ಗಾಜಾ ಎಂದು ಹೆಸರಿಟ್ಟಿರುವುದನ್ನು ಬಲವಾಗಿ ಆಕ್ಷೇಪಿಸಿರುವ ಬಿಜೆಪಿ, ಕಾಸರಗೋಡಿನ ವಿವಿಧ ಪ್ರದೇಶಗಳ ಹೆಸರನ್ನು ಬದಲಾಯಿಸುವ ಉದ್ದೇಶ ಪೂರ್ವಕ ಪ್ರಯತ್ನಗಳಾಗುತ್ತಿವೆ ಎಂದು ಆರೋಪಿಸಿದೆ.
ಪುರಸಭೆಯಲ್ಲಿ ಚರ್ಚೆಯಾಗಿ ಅಂಗೀಕಾರಗೊಳ್ಳದೆ ರಸ್ತೆ ಅಥವಾ ಬಡಾವಣೆಯ ಹೆಸರು ಬದಲಾಯಿಸುವಂತಿಲ್ಲ.
ಆದರೆ ಗಾಜಾ ಹೆಸರಿನ ಕುರಿತು ಯಾವುದೇ ಚರ್ಚೆಯಾಗಿಲ್ಲ. ಕೆಲವೊಮ್ಮೆ ಪುರಸಭೆಯಲ್ಲಿ ತಿರಸ್ಕೃತವಾಗುವ ಭೀತಿಯಲ್ಲಿ ವಿವಾದಾತ್ಮಕ ಹೆಸರುಗಳ ಪ್ರಸ್ತಾವ ಮಂಡಿಸದೆ ಹಾಗೆಯೇ ಇಟ್ಟು ಬಿಡುತ್ತಾರೆ ಎಂದು ಪುರಸಭೆಯ ವಿಪಕ್ಷ ನಾಯಕ ಪಿ. ರಮೇಶ್‌ ಹೇಳಿದ್ದಾರೆ. ಆದರೆ, ಮುಸ್ಲಿಂ ಲೀಗ್‌ ನಾಯಕರು, “ಇದು ಸ್ಥಳೀಯ ಯುವಕರು ಇಟ್ಟಿರುವ ಹೆಸರು. ಅದರ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳಬೇಕಿಲ್ಲ’ ಎನ್ನುವ ಮೂಲಕ ವಿವಾದದಿಂದ ಕೈತೊಳೆಯುವ ಪ್ರಯತ್ನ
ಮಾಡಿದ್ದಾರೆ.

ಐಸಿಸ್‌ ಉಗ್ರ ಸಂಘಟನೆಯು ಕಾಸರಗೋಡಿನಲ್ಲಿ ತಳವೂರುವ ಪ್ರಯತ್ನದಲ್ಲಿದ್ದು, ಮತೀಯ ಸೌಹಾರ್ದ ಕದಡುತ್ತಿದೆ. ಮತೀಯವಾದಿಗಳು ಸಮಾಜದಲ್ಲಿ ಒಡಕುಂಟು ಮಾಡುವ ಪ್ರಯತ್ನದಲ್ಲಿದ್ದಾರೆ. ಇದೇ ವೇಳೆ, ಕಾಸರಗೋಡಿನ ಪೊಲೀಸ್‌ ಅಧಿಕಾರಿಯೊಬ್ಬರು ಗಾಜಾ ಹೆಸರು ನಮ್ಮ ಗಮನಕ್ಕೆ ಬರದಿದ್ದರೂ ಕೇಂದ್ರೀಯ ಪಡೆಗಳು ಪತ್ತೆ ಹಚ್ಚಿವೆ ಎಂದಿದ್ದಾರೆ.

ಎಲ್ಲಿದೆ ತುರುತಿ?
ಕಾಸರಗೋಡು ನಗರ ಕೇಂದ್ರದಿಂದ ಸುಮಾರು 2.5 ಕಿ. ಮೀ. ದೂರದಲ್ಲಿದೆ ತುರುತಿ ವಾರ್ಡ್‌. ಅಣಂಗೂರಿನಿಂದ
ಬಲಕ್ಕೆ ತಿರುಗಿ ಹೋಗಬೇಕು.

ಟಾಪ್ ನ್ಯೂಸ್

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಯ ಸ್ಥಿತಿ ಹೇಗಾಗಿದೆ ನೋಡಿ…

Bhopal: ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಗೆ ಲಾಠಿ ರುಚಿ ತೋರಿಸಿದ ಪೊಲೀಸರು…

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.