ಯುಪಿ:ನಮಸ್ಕಾರ ಸ್ವೀಕರಿಸದ ಜರ್ಮನ್ ಪ್ರಜೆಗೆ ಥಳಿತ
Team Udayavani, Nov 5, 2017, 10:13 AM IST
ಲಕ್ನೋ: ತಾನು ನೀಡಿದ ನಮಸ್ಕಾರಕ್ಕೆ ಪ್ರತಿ ನಮಸ್ಕಾರ ನೀಡಲಿಲ್ಲ ಎಂಬ ಕಾರಣಕ್ಕೆ ಜರ್ಮನ್ ಪ್ರಜೆಯೊಬ್ಬರಿಗೆ ಥಳಿಸಿದ ಘಟನೆ ಉತ್ತರ ಪ್ರದೇಶದ ಸೋನ್ಭದ್ರಾದ ರೈಲು ನಿಲ್ದಾಣದಲ್ಲಿ ನಡೆದಿದೆ.
ವರದಿಯಾದಂತೆ ಅಗೋರಿಗೆ ಪ್ರಯಾಣಿಸಲು ರೈಲಿಗಾಗಿ ಕಾಯುತ್ತಿದ್ದ ಬರ್ಲಿನ್ ಮೂಲದ ಹೋಲ್ಗರ್ ಎರಿಕ್ ಎನ್ನುವ ವ್ಯಕ್ತಿಗೆ ಅಮನ್ ಕುಮಾರ್ ಎಂಬ ಎಲೆಕ್ಟ್ರೀಷಿಯನ್ ನಮಸ್ಕಾರ ನೀಡಿ ಸ್ವಾಗತ ಕೋರಿದ್ದು, ಅದಕ್ಕೆ ಎರಿಕ್ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲಎನ್ನಲಾಗಿದ್ದು, ಇದರಿಂದ ಕುಪಿತನಾದ ಅಮನ್ ಎರಿಕ್ರನ್ನು ನೆಲಕ್ಕೆ ಬೀಳಿಸಿ ಹಿಗ್ಗಾಮುಗ್ಗಾ ಥಳಿಸಿರುವುದಾಗಿ ದೂರಿನಲ್ಲಿ ಹೇಳಿಕೊಳ್ಳಲಾಗಿದೆ.
ಘಟನೆ ನಡೆದ ತಕ್ಷಣ ಆರೋಪಿ ಅಮನ್ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿ ತನಿಖೆ ಮುಂದುವರಿಸಿದ್ದಾರೆ.
ಆದರೆ ದೂರನ್ನು ನಿರಾಕರಿಸಿರುವಆರೋಪಿ ಅಮನ್ ‘ನಾನು ಮುಗ್ಧ, ಎರಿಕ್ಗೆ ವೆಲ್ಕಮ್ ಟು ಇಂಡಿಯಾ ಎಂದು ಸ್ವಾಗತಕೋರಿದ್ದು ಅದಕ್ಕೆ ಆತ ಉದ್ಧಟತನ ತೋರಿ ನನಗೆ ಹೊಡೆದು, ಉಗಿದಿದ್ದಾನೆ’ ಎಂದು ಪೊಲೀಸರ ಬಳಿ ಹೇಳಿಕೊಂಡಿದ್ದಾರೆ.
ಆಗ್ರಾದಲ್ಲಿ ಸ್ವಿಟ್ಜರ್ಲ್ಯಾಂಡ್ ಮೂಲದ ಪ್ರೇಮಿಗಳ ಮೇಲೆ ನಡೆದ ಗುಂಪು ದಾಳಿಯ ಬೆನ್ನಲ್ಲೇ ವಿದೇಶಿ ವ್ಯಕ್ತಿಯ ಮೇಲೆ ಹಲ್ಲೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್ ಬಿಜೆಪಿಗೆ
Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!
RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ
Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ
ಬಿಲ್ ಗೇಟ್ಸ್ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ
MUST WATCH
ಹೊಸ ಸೇರ್ಪಡೆ
Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್ ಬಿಜೆಪಿಗೆ
Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ
Kalaburagi; ಶೋಕಿಗಾಗಿ ನಕಲಿ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು
ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ
Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!