ಹುಟ್ಟುಹಬ್ಬದಂದೇ ಸ್ನೇಹಿತನನ್ನು ಥಳಿಸಿ ಬಾಲಕಿಯನ್ನು ಅತ್ಯಾಚಾರವೆಸಗಿದ ನಾಲ್ವರು ದುರುಳರು
Team Udayavani, Dec 1, 2019, 8:10 AM IST
ತಮಿಳುನಾಡು: ಹುಟ್ಟು ಹಬ್ಬದ ಸಂಭ್ರಮಾಚರಣೆಯಲ್ಲಿರುವಾಗಲೇ ಸ್ನೇಹಿತನನ್ನು ಥಳಿಸಿ, ನಾಲ್ವರು ದುರುಳರು ಬಾಲಕಿಯೋರ್ವಳನ್ನು ಸಾಮೂಹಿಕವಾಗಿ ಅತ್ಯಾಚಾರವೆಸಗಿದ ಘಟನೆ ಕೊಯಂಬತ್ತೂರ್ ನಲ್ಲಿ ನಡೆದಿದೆ.
ನವೆಂಬರ್ 26 ರಂದು ಈ ಘಟನೆ ನಡೆದಿದ್ದು ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಾಲಕಿಯು ತನ್ನ ಹುಟ್ಟು ಹಬ್ಬವನ್ನು ಸ್ನೇಹಿತನೊಂದಿಗೆ ಪಾರ್ಕ್ ಒಂದರಲ್ಲಿ ಆಚರಿಸಿ ಮನೆಗೆ ಮರಳುತ್ತಿದ್ದಳು. ಈ ವೇಳೆ ನಾಲ್ವರು ದುರುಳರು ಸ್ನೇಹಿತನನ್ನು ಥಳಿಸಿ ಆಕೆಯನ್ನು ಏಕಾಂತ ಸ್ಥಳಕ್ಕೆ ಎಳೆದೊಯ್ದು ಲೈಂಗಿಕ ದೌರ್ಜನ್ಯವೆಸಗಿದ್ದಾರೆ. ಈ ವೇಳೆ ವಿಡಿಯೋ ರೆಕಾರ್ಡ್ ಕೂಡ ಮಾಡಿದ್ದು ದೂರು ದಾಖಲಿಸದಂತೆ ಆಕೆಗೆ ಬೆದರಿಕೆಯನ್ನೊಡ್ಡಿದ್ದರು.
ಸಂತ್ರಸ್ಥೆಯು ಮನೆಗೆ ಮರಳಿ ತನ್ನ ತಾಯಿಗೆ ವಿಷಯ ತಿಳಿಸಿದ್ದು ನಂತರ ಸ್ಥಳೀಯ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಶನಿವಾರ ನಾಲ್ವರನ್ನು ಬಂಧಿಸಿದ್ದು, ಆರೋಪಿಗಳನ್ನು ಕಾರ್ತಿಕೇಯನ್, ರಾಹುಲ್ , ಪ್ರಕಾಶ್. ನಾರಾಯಣಮೂರ್ತಿ ಎಂದು ಗುರುತಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
MUST WATCH
ಹೊಸ ಸೇರ್ಪಡೆ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ