ತಾಯಿಯಾಗಿರುವುದು ಆ ಬಾಲಕಿಗೆ ಗೊತ್ತಿಲ್ಲ !


Team Udayavani, Aug 18, 2017, 8:10 AM IST

girl-delivery.jpg

ಚಂಡೀಗಢ: ಆ ಕಂದಮ್ಮಳಿಗೆ ಇನ್ನೂ ಹತ್ತರ ಹರೆಯ. ಸಣ್ಣ ವಿಷಯಕ್ಕೂ ಹಠ ಮಾಡುವ ವಯಸ್ಸು. ಸರಿ, ತಪ್ಪುಗಳ ಬಗ್ಗೆ ಸ್ಪಷ್ಟವಾಗಿ ಗೊತ್ತಿಲ್ಲ. ಶಾಲೆಯಲ್ಲಿ ಹೇಳಿಕೊಡುವುದನ್ನು ಕಲಿಯುವುದು, ಓರಗೆಯ ಮಕ್ಕಳೊಂದಿಗೆ ಆಡುವುದೇ ಆಕೆಯ ಪ್ರಪಂಚ. ಈ ವಯಸ್ಸಿನಲ್ಲಿ ತಾಯ್ತನದ ಬಗ್ಗೆ ಪಾಪ ಆಕೆಗೇನು ಗೊತ್ತಿರಲು ಸಾಧ್ಯ? ಆದರೂ ಈ 10 ವರ್ಷದ ಬಾಲಕಿ ಈಗ ಒಂದು ಮಗುವಿನ ತಾಯಿ!

ಹೌದು, ಚಂಡೀಗಢದ 10ರ ಹರೆಯದ ಬಾಲಕಿ ಇಲ್ಲಿನ ಸರಕಾರಿ ಆಸ್ಪತ್ರೆಯೊಂದರಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಆದರೆ ತಾನು ತಾಯಿಯಾಗಿದ್ದೇನೆ, ತನ್ನ ಉದರದಿಂದ ಮಗುವೊಂದು ಹೊರಬಂದಿದೆ ಎಂಬುದು ಆಕೆಗೆ ಗೊತ್ತಿಲ್ಲ. “ಹೊಟ್ಟೆ ಕೆಟ್ಟು ಊದಿ ಕೊಂಡಿತ್ತು. ಅದರಲ್ಲೊಂದು ಕಲ್ಲಿದೆ. ಅದಕ್ಕೆ ಆಪರೇಷನ್‌ ಮಾಡಿ ಸರಿ ಮಾಡಿದ್ದಾರೆ’ ಎಂದು ಹೆತ್ತವರು ಹೇಳಿದ್ದನ್ನೇ ಆ ಮುಗೆœ ನಂಬಿದ್ದಾಳೆ.

ಘಟನೆ ನಡೆದಿರುವುದು ಚಂಡೀಗಢದಲ್ಲಿ. ಈಗ ಮಗುವಿಗೆ ಜನ್ಮ ನೀಡಿರುವ ಬಾಲಕಿಯ ಮೇಲೆ ಆಕೆಯ ಹತ್ತಿರದ ಸಂಬಂಧಿಯೇ ನಿರಂತರವಾಗಿ ಅತ್ಯಾಚಾರ ಎಸಗಿದ್ದ. ಆದರೆ ಆತ ಏನು ಮಾಡುತ್ತಿದ್ದಾನೆಂದು ಬಾಲಕಿಗೆ ಗೊತ್ತೇ ಇರಲಿಲ್ಲ. ಆದರೆ ಕಳೆದ ತಿಂಗಳು ಬಾಲಕಿಗೆ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ಕರೆದೊಯ್ದಾಗ ಆಕೆ ಗರ್ಭ ಧರಿಸಿದ ವಿಷಯ ಹೆತ್ತವರಿಗೆ ಗೊತ್ತಾಗಿದೆ. ಹಾಗೇ ಕಾಮುಕ ಚಿಕ್ಕಪ್ಪನ ಬಣ್ಣ ಕೂಡ ಬಯಲಾಗಿತ್ತು. ಕೂಡಲೆ ಹೆತ್ತವರು ಕೋರ್ಟ್‌ ಮೊರೆ ಹೋಗಿ, “ಅವಳೇ ಮಗು, ಅವಳಿಗೊಂದು ಮಗು ಬೇಕೇ? ತೆಗೆಸಲು ಅನುಮತಿ ಕೊಡಿ’ ಎಂದು ಕೋರಿದ್ದರು. ಆದರೆ ಬಾಲಕಿ ಗರ್ಭ ಧರಿಸಿ 32 ವಾರ (8 ತಿಂಗಳು)ಗಳಾಗಿವೆ. ಈಗ ಗರ್ಭಪಾತ ಮಾಡಿಸಿದರೆ ಆಕೆಯ ಪ್ರಾಣಕ್ಕೆ ಅಪಾಯವಾಗಬಹುದು ಎಂದು ಅಭಿಪ್ರಾಯಪಟ್ಟ ಸುಪ್ರೀಂ ಕೋರ್ಟ್‌ ಹೆತ್ತವರ ಮನವಿಯನ್ನು ತಿರಸ್ಕರಿಸಿತ್ತು.

ಮಗುವನ್ನು ದತ್ತು ನೀಡಿ: ಸರಕಾರಿ ಆಸ್ಪತ್ರೆಯೊಂದರಲ್ಲಿ ಬಾಲಕಿ ಗುರುವಾರ ಹೆಣ್ಣು ಮಗು ಒಂದಕ್ಕೆ ಜನ್ಮ ನೀಡಿದ್ದಾಳೆ. ಮಗು 2.2 ಕೆ.ಜಿ. ತೂಕವಿದ್ದು, ದೇವರ ದಯೆಯಿಂದ ಬಾಲಕಿ ಕೂಡ ಸುರಕ್ಷಿತವಾಗಿದ್ದಾಳೆ. ಆದರೆ ಮಗುವಿನ ತೂಕ ಕೊಂಚ ಕಡಿಮೆ ಇರುವುದರಿಂದ ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಆದರೆ ತಾನು ಮಗುವೊಂದಕ್ಕೆ ಜನ್ಮ ನೀಡಿರುವ ವಿಷಯ ಆ ಬಾಲಕಿಗೆ ಗೊತ್ತೇ ಇಲ್ಲ. ಆಕೆಗೆ ತೀವ್ರ ಹೆರಿಗೆ ನೋವು ಕಾಣಿಸಿಕೊಂಡಾಗ ಹೆತ್ತವರು ಹೊಟ್ಟೆಯಲ್ಲಿ ಕಲ್ಲಿದೆ. ಅದಕ್ಕೆ ಡಾಕ್ಟರ್‌ ಆಪರೇಷನ್‌ ಮಾಡ್ತಾರೆ ಎಂದು ಸುಳ್ಳು ಹೇಳಿ ಆಸ್ಪತ್ರೆಗೆ ಕರೆತಂದಿದ್ದು, ಹೆರಿಗೆ ಅನಂತರ ಮಗುವನ್ನು ಆಕೆಯಿಂದ ದೂರ ಇಡಲಾಗಿದೆ. ಕೆಲವು ಸಮಯದ ಅನಂತರ ಎಚ್ಚರಗೊಂಡ ಬಾಲಕಿ ತನ್ನ ಹೊಟ್ಟೆ ಸಣ್ಣದಾಗಿರುವುದು ಕಂಡು, ಹೊಟ್ಟೆ ಸಮಸ್ಯೆ ಪರಿಹಾರವಾಯ್ತು ಎಂದು ಖುಷಿಯಾಗಿದ್ದಾಳೆ! 

ಟಾಪ್ ನ್ಯೂಸ್

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Dina Bhavishya

ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

12-madikeri

Madikeri: ಅತ್ಯಾಚಾರಿಗೆ ಕಠಿಣ ಸಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

needs 400 seats to avoid Babri lock to Mandir: PM Modi

Loksabha; ಮಂದಿರಕ್ಕೆ ಬಾಬರಿ ಲಾಕ್‌ ಬೀಳದಿರಲು 400 ಸೀಟು ಬೇಕು: ಪ್ರಧಾನಿ ಮೋದಿ

Ram temple is of no use: SP leader Yadav controversy

Lucknow; ಕೆಲಸಕ್ಕೆ ಬಾರದ ರಾಮ ಮಂದಿರ: ಎಸ್ಪಿ ನಾಯಕ ಯಾದವ್‌ ವಿವಾದ

Patanjali case; Supreme directive to self-declare before advertisement

Patanjali case; ಜಾಹೀರಾತಿಗೆ ಮುನ್ನ ಸ್ವ ಘೋಷಣೆ ಮಾಡಲು ಸುಪ್ರೀಂ ಸೂಚನೆ

We will make crores of people millionaires: Rahul Gandhi

Election; ಕೋಟ್ಯಂತರ ಜನರನ್ನು ನಾವು ಲಕ್ಷಾಧಿಪತಿ ಮಾಡುತ್ತೇವೆ: ರಾಹುಲ್‌ ಗಾಂಧಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1——wqwqe

IPL ರಾಜಸ್ಥಾನ ವಿರುದ್ಧ ಗೆದ್ದ ಡೆಲ್ಲಿ ಪ್ಲೇಆಫ್ ಭರವಸೆ ಜೀವಂತ: ಆರ್ ಸಿಬಿಗೆ ಸವಾಲು

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.