“ರಾಷ್ಟ್ರೀಯ ಮಿಷನ್” ಗಾಗಿ “ಮಿಸ್ಡ್ ಕಾಲ್” ಅಭಿಯಾನ ಪ್ರಾರಂಭಿಸಿದ ಕೇಜ್ರಿವಾಲ್
ಉತ್ತಮ ಕಾರ್ಯನಿರ್ವಹಣೆಗೆ ಸಿಬಿಐ ದಾಳಿ ಬಹುಮಾನ...!
Team Udayavani, Aug 19, 2022, 1:54 PM IST
ನವದೆಹಲಿ: ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಉತ್ತಮ ಕಾರ್ಯವೈಖರಿಯಿಂದಾಗಿ ಜಾಗತಿಕ ಮಟ್ಟದಲ್ಲಿ ಮೆಚ್ಚುಗೆ ವ್ಯಕ್ತವಾದ ಕಾರಣಕ್ಕೆ ಅವರ ಮನೆ ಮೇಲೆ ಸಿಬಿಐ ದಾಳಿ ನಡೆಸಲಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶುಕ್ರವಾರ ಆಕ್ರೋಶದ ಹೇಳಿಕೆ ನೀಡಿದ್ದಾರೆ.
”ಮಿಸ್ಡ್ ಕಾಲ್” ಅಭಿಯಾನ
ಸಿಬಿಐ ದಾಳಿ ನಡೆಸಿದ ಕೆಲವೇ ಗಂಟೆಗಳ ನಂತರ ಎಎಪಿ ಮುಖ್ಯಸ್ಥ ಕೇಜ್ರಿವಾಲ್ “ರಾಷ್ಟ್ರೀಯ ಮಿಷನ್” ಗಾಗಿ “ಮಿಸ್ಡ್ ಕಾಲ್” ಅಭಿಯಾನವನ್ನು ಪ್ರಾರಂಭಿಸಿದ್ದು, ದೇಶದ 130 ಕೋಟಿ ಜನರನ್ನು “ಭಾರತವನ್ನು ವಿಶ್ವದ ಬಲಿಷ್ಠ ರಾಷ್ಟ್ರವನ್ನಾಗಿ ಮಾಡುವಂತೆ” ಒತ್ತಾಯಿಸಿದ್ದಾರೆ.
“ನಾನು ಇಂದು ಸಂಖ್ಯೆಯನ್ನು ನೀಡುತ್ತಿದ್ದೇನೆ, ಮಿಸ್ಡ್ ಕಾಲ್ ಸಂಖ್ಯೆ 9510001000. ಈ ಮಿಷನ್ಗೆ ಸೇರಲು ಬಯಸುವವರು, ಭಾರತವನ್ನು ವಿಶ್ವದ ನಂಬರ್ 1 ರಾಷ್ಟ್ರವಾಗಿ, ಅತ್ಯಂತ ಶಕ್ತಿಶಾಲಿ ರಾಷ್ಟ್ರವಾಗಿ ನೋಡಲು ಬಯಸುವವರು. ಅತ್ಯುತ್ತಮ ರಾಷ್ಟ್ರವು ಈ ಮಿಷನ್ಗೆ ಸೇರಿಕೊಳ್ಳಬೇಕು,” ಎಂದು ಕರೆ ನೀಡಿದ್ದಾರೆ.
ಈ ಹಿಂದೆ ಸಿಬಿಐ ದಾಳಿ ನಡೆದಿದ್ದು, ಈ ಬಾರಿಯೂ ಏನೂ ಆಗುವುದಿಲ್ಲ. ಸಿಬಿಐ ನಡೆ ಸ್ವಾಗತಾರ್ಹ. ಸಂಪೂರ್ಣ ಸಹಕಾರ ನೀಡಲಿದೆ. ಈ ಹಿಂದೆಯೂ ದಾಳಿ ಮತ್ತು ತನಿಖೆ ನಡೆದಿತ್ತು. ಏನೂ ಹೊರಬರಲಿಲ್ಲ. ಈಗ ಏನೂ ಹೊರಬರುವುದಿಲ್ಲ” ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.
ದೆಹಲಿ ಅಬಕಾರಿ ನೀತಿ 2021-22ಕ್ಕೆ ಸಂಬಂಧಿಸಿದಂತೆ ಸಿಬಿಐ ಶುಕ್ರವಾರ ಬೆಳಿಗ್ಗೆ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನಿವಾಸ ಸೇರಿದಂತೆ 10 ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆಸಿದೆ.
“ದೆಹಲಿಯ ಶಿಕ್ಷಣ ಮಾದರಿಯನ್ನು ಮೆಚ್ಚಿದ ದಿನ ಮತ್ತು ಮನೀಶ್ ಸಿಸೋಡಿಯಾ ಅವರ ಫೋಟೋ ಅಮೆರಿಕದ ಅತಿದೊಡ್ಡ ಪತ್ರಿಕೆ NYT ಯ ಮೊದಲ ಪುಟದಲ್ಲಿ ಕಾಣಿಸಿಕೊಂಡ ದಿನವೇ ಈ ದಾಳಿ ನಡೆದಿದೆ.
ಕಳೆದ ತಿಂಗಳು ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ ಅವರು ಅಕ್ರಮಗಳ ಕುರಿತು ಸಿಬಿಐ ತನಿಖೆಗೆ ಶಿಫಾರಸು ಮಾಡಿದ್ದರು. ಈ ಸಂಬಂಧ 11 ಅಬಕಾರಿ ಅಧಿಕಾರಿಗಳನ್ನು ಅಮಾನತುಗೊಳಿಸಿದ್ದರು.ನೀತಿಯಲ್ಲಿನ ಅಕ್ರಮಗಳ ಬಗ್ಗೆ ಸಿಬಿಐ ತನಿಖೆಗೆ ಸಿಸೋಡಿಯಾ ಕೂಡ ಒತ್ತಾಯಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
MUST WATCH
ಹೊಸ ಸೇರ್ಪಡೆ
Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ
Box office: ಈ ವಾರ ಬಾಲಿವುಡ್ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ