ಪ್ರತಿಮೆ ವೆಚ್ಚ ಕೊಡಿ :ಮಾಯಾವತಿಗೆ ಸುಪ್ರೀಂಕೋರ್ಟ್
Team Udayavani, Feb 8, 2019, 11:16 PM IST
ನವದೆಹಲಿ: ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿದ್ದ ವೇಳೆ ತಮ್ಮ ಹೆಸರಲ್ಲಿ ಸ್ಮಾರಕ ನಿರ್ಮಿಸಿದ ಬಿಎಸ್ಪಿ ಮಾಯಾವತಿ 2,600 ಕೋಟಿ ರೂ. ಮೊತ್ತ ವಾಪಸ್ ಮಾಡಬೇಕು ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ.
ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ನ್ಯಾಯಪೀಠ ಈ ಶುಕ್ರವಾರ ಈ ಆದೇಶ ನೀಡಿದೆ. ಮುಂದಿನ 2007 ಮತ್ತು 2012ರ ನಡುವೆ ಮುಖ್ಯಮಂತ್ರಿಯಾಗಿದ್ದ ಮಾಯಾವತಿ ನೋಯ್ಡಾ, ಲಕ್ನೊಗಳಲ್ಲಿ ಈ ಸ್ಮಾರಕಗಳನ್ನು ನಿರ್ಮಿಸಿದ್ದರು. ಜತೆಗೆ ಪಕ್ಷದ ಸಂಸ್ಥಾಪಕ ಕಾನ್ಶೀರಾಂ, ಬಿಎಸ್ಪಿ ಚಿಹ್ನೆ ಆನೆಯನ್ನು ಒಳಗೊಂಡ ಪ್ರತಿಮೆಗಳನ್ನೂ ನಿರ್ಮಿಸಿದ್ದರು.
ಅದನ್ನು ಪ್ರಶ್ನಿಸಿ ನ್ಯಾಯವಾದಿಯೊಬ್ಬರು 2009ರಲ್ಲಿ ಮೊಕದ್ದಮೆ ಹೂಡಿದ್ದರು. ಅದನ್ನು ವಿಚಾರಣೆ ನಡೆಸಿದ ನ್ಯಾಯಪೀಠ ಈ ಆದೇಶ ನೀಡಿದೆ.
‘ಸಾರ್ವಜನಿಕರ ಹಣದಿಂದ ಈ ಪ್ರತಿಮೆ, ಸ್ಮಾರಕಗಳನ್ನು ನಿರ್ಮಿಸಲಾಗಿದೆ. ಹೀಗಾಗಿ ಅವರು ಅದನ್ನು ವಾಪಸ್ ಮಾಡಬೇಕು’ ಎಂದು ಹೇಳಿ, ಏ.2ರಂದು ಮುಂದಿನ ವಿಚಾರಣೆ ನಿಗದಿ ಮಾಡಿದೆ.
ತೇಜಸ್ವಿಗೆ ದಂಡ: ಮತ್ತೂಂದು ಪ್ರಕರಣದಲ್ಲಿ ಬಿಹಾರ ಮಾಜಿ ಡಿಸಿಎಂ ತೇಜಸ್ವಿ ಯಾದವ್ಗೆ ಸುಪ್ರೀಂಕೋರ್ಟ್ 50 ಸಾವಿರ ರೂ.ದಂಡ ವಿಧಿಸಿದ್ದಲ್ಲದೆ, ಅವರು ವಾಸ್ತವ್ಯ ಹೂಡಿರುವ ಸರ್ಕಾರಿ ಬಂಗಲೆಯನ್ನು ತೆರವುಗೊಳಿಸುವಂತೆ ಸೂಚನೆ ನೀಡಿದೆ. ಈ ಬಗ್ಗೆ ಪಾಟ್ನಾ ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ