ಹೂಗುಚ್ಛಗಳ ಬದಲಾಗಿ ನನಗೆ ಪುಸ್ತಕಗಳನ್ನು ನೀಡಿ: ಹೇಮಂತ್ ಸೊರೇನ್
Team Udayavani, Dec 27, 2019, 7:30 PM IST
ರಾಂಚಿ: ಝಾರ್ಖಂಡ್ ರಾಜ್ಯದ ನಿಯೋಜಿತ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರು ತಮ್ಮನ್ನು ಭೆಟಿಯಾಗಲು ಬರುವವರಲ್ಲಿ ಒಂದು ವಿಶೇಷ ಮನವಿಯನ್ನು ಮಾಡಿಕೊಂಡಿದ್ದಾರೆ. ಅದೆಂದರೆ ತನ್ನ ಭೇಟಿಯ ಸಮಯದಲ್ಲಿ ತನಗೆ ಹೂಗುಚ್ಛವನ್ನು ನೀಡುವ ಬದಲು ಉತ್ತಮ ಪುಸ್ತಕ ಒಂದನ್ನು ನೀಡುವಂತೆ ಸೊರೇನ್ ಮನವಿ ಮಾಡಿಕೊಂಡಿದ್ದಾರೆ.
‘ನೀವು ನನಗೆ ಹೂಗುಚ್ಛಗಳನ್ನು ನೀಡಿದಲ್ಲಿ, ಅವುಗಳು ಆ ಬಳಿಕ ಮೂಲೆಯಲ್ಲೆಲ್ಲೋ ಬಿದ್ದು ಆ ಬಳಿಕ ಮುದುರಿ ಹಾಳಾಗುತ್ತದೆ ಮತ್ತು ನನಗೆ ಅವುಗಳನ್ನು ಜತನದಿಂದ ಕಾಪಾಡಿಕೊಳ್ಳಲೂ ಆಗುವುದಿಲ್ಲ, ಆದರೆ ಇದಕ್ಕೆ ಬದಲಾಗಿ ನೀವು ಪುಸ್ತಕ ಒಂದನ್ನು ನೀಡಿದರೆ ಅದು ನನ್ನ ತಿಳುವಳಿಕೆಯನ್ನು ಅರಳಿಸುತ್ತದೆ’ ಎಂಬರ್ಥದ ಹಿಂದಿ ಟ್ವೀಟ್ ಅನ್ನು ಸೊರೇನ್ ಅವರು ಮಾಡಿದ್ದಾರೆ.
ರಾಜ್ಯದಲ್ಲಿ ಅಧಿಕಾರದಲ್ಲಿ ಭಾರತೀಯ ಜನತಾ ಪಕ್ಷದ ಸರಕಾರವನ್ನು ವಿಧಾನಸಭೆ ಚುನಾವಣೆಯಲ್ಲಿ ಸೋಲಿಸಿದ ಹೇಮಂತ್ ಸೊರೇನ್ ನಾಯಕತ್ವದ ಜೆ.ಎಂ.ಎಂ., ಕಾಂಗ್ರೆಸ್, ಆರ್.ಜೆ.ಡಿ. ಮೈತ್ರಿಕೂಟ ಅಧಿಕಾರಕ್ಕೆ ಬಂದಿದೆ. ಮತ್ತು ಜೆ.ಎಂ.ಎಂ. ಪಕ್ಷದ ಹೇಮಂತ್ ಸೊರೇನ್ ಅವರು ರಾಜ್ಯದ ಏಳನೇ ಮುಖ್ಯಮಂತ್ರಿಯಾಗಿ ಡಿಸೆಂಬರ್ 29ರ ಆದಿತ್ಯವಾರದಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
साथियों,
मैं अभिभूत हूँ आप झारखंडवासियों के प्यार एवं सम्मान से।
पर मैं आप सबसे एक करबद्ध प्रार्थना करना चाहूँगा, कि कृपया कर मुझे फूलों के ‘बुके’ की जगह ज्ञान से भरे ‘बुक’ मतलब अपने पसंद की कोई भी किताब दें। मुझे बहुत बुरा लगता है की मैं आपके फूलों को सम्भाल नहीं पाता।
1/2 pic.twitter.com/RXVQ7aghXW— Hemant Soren (@HemantSorenJMM) December 27, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ