ಮೊಮ್ಮಗು ಬೇಕು ಅಥವಾ 5 ಕೋಟಿ ಬೇಕು!: ಮಗ-ಸೊಸೆಯ ವಿರುದ್ಧವೇ ನ್ಯಾಯಾಲಯದ ಮೆಟ್ಟಿಲೇರಿದ ತಾಯಿ
Team Udayavani, May 13, 2022, 6:51 AM IST
ಡೆಹ್ರಾಡೂನ್: “ವರ್ಷದೊಳಗೆ ನಮ್ಮ ಕೈಗೆ ಮೊಮ್ಮಗು ಕೊಡಿ. ಇಲ್ಲವಾದರೆ 5 ಕೋಟಿ ರೂ. ಪರಿಹಾರ ಕೊಡಿ’ ಹೀಗೆಂದು ಉತ್ತರಾಖಂಡದ ತಾಯಿಯೊಬ್ಬರು ತಮ್ಮ ಮಗ-ಸೊಸೆಯ ವಿರುದ್ಧವೇ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.
ಹರಿದ್ವಾರದ ಎ.ಕೆ.ಶ್ರೀವಾಸ್ತವ್ ಅವರ ಪತ್ನಿ ಈ ರೀತಿ ನ್ಯಾಯಾಲಯ ಮೆಟ್ಟಿ ಲೇರಿದವರು. “ಮಗ ನನ್ನು ಕಷ್ಟ ಪಟ್ಟು ಓದಿಸಿದ್ದೇವೆ. ವಿದೇಶದಲ್ಲಿ ತರಬೇತಿ ಕೊಡಿಸಿ ಪೈಲಟ್ ಮಾಡಿಸಿದ್ದೇವೆ. 2016ರಲ್ಲಿ ಮದುವೆ ಮಾಡಿಸಿ, ಅವರದ್ದೇ ಖರ್ಚಿನಲ್ಲಿ ಥೈಲೆಂಡ್ಗೆ ಹನಿಮೂನ್ ಕೂಡ ಕಳುಹಿಸಿಕೊಟ್ಟಿದ್ದೇವೆ. ಆದರೆ ಮದುವೆಯಾದ ಮೇಲೆ ಅವನು ಹೆಂಡತಿ ಮಾತಿನಂತೆ ಹೈದರಾಬಾದ್ಗೆ ಸ್ಥಳಾಂತರಗೊಂಡಿದ್ದಾನೆ.
ಅಲ್ಲಿಗೆ ಹೋದಾಗಿನಿಂದ ನಮ್ಮೊಂದಿಗೆ ಹೆಚ್ಚು ಸಂಪರ್ಕದಲ್ಲೂ ಇಲ್ಲ ಹಾಗೆಯೇ ಹೆಂಡತಿಯ ಮಾತಿನಂತೆಯೇ ನಡೆದುಕೊಳ್ಳುತ್ತಾನೆ. ನಾವು ಅವನಿಗಾಗಿ ನಮ್ಮೆಲ್ಲ ಆಸ್ತಿ ಕಳೆದುಕೊಂಡು ಆರ್ಥಿಕ ಸಂಕಷ್ಟದಲ್ಲಿದ್ದೇವೆ. ಈಗ ನಮಗೆ ವರ್ಷದೊಳಗೆ ಮೊಮ್ಮಗು ಬೇಕು ಇಲ್ಲವೇ ಮಗ ಸೊಸೆ ಇಬ್ಬರೂ ತಲಾ 2.5 ಕೋಟಿ ರೂ. ಪರಿಹಾರ ಕೊಡಬೇಕು’ ಎಂದು ಅವರು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
MUST WATCH
ಹೊಸ ಸೇರ್ಪಡೆ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು