ವಿಧಾನಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಉತ್ಪಲ್ ಪರ್ರಿಕರ್
Team Udayavani, Jan 27, 2022, 4:27 PM IST
ಪಣಜಿ: ಪ್ರಸಕ್ತ ಗೋವಾ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ಫರ್ಧಿಸಲು ಪಣಜಿ ಕ್ಷೇತ್ರದಿಂದ ಉತ್ಪಲ್ ಪರ್ರಿಕರ್ ಗುರುವಾರ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ.
ನಾಮಪತ್ರ ಸಲ್ಲಿಸಿದ ನಂತರ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ನಾನು ಪಣಜಿ ಕ್ಷೇತ್ರದಲ್ಲಿ ಪ್ರಸಕ್ತ ವಿಧಾನಸಭಾ ಚುನಾವಣೆಯಲ್ಲಿ ಪಕ್ಷೇತರನಾಗಿ ಚುನಾವಣೆ ಎದುರಿಸಲಿದ್ದೇನೆ. ನನ್ನ ತಂದೆ ಮನೋಹರ್ ಪರ್ರಿಕರ್ ರವರಿಗೆ ಪಣಜಿಯ ಜನತೆ ಇಷ್ಟು ವರ್ಷಗಳ ಕಾಲ ಬಹುಮತ ನೀಡಿ ಆಯ್ಕೆ ಮಾಡಿದ್ದರು, ಕಾರಣ ಅವರಲ್ಲಿ ಕೆಲವು ಮೌಲ್ಯಗಳಿದ್ದವು. ನನ್ನಲ್ಲಿಯೂ ಕೆಲ ಮೌಲ್ಯಗಳಿವೆ. ಪಣಜಿ ಜನತೆ ನನ್ನೊಂದಿಗಿದ್ದಾರೆ ಎಂಬ ವಿಶ್ವಾಸ ನನಗಿದೆ ಎಂದು ಉತ್ಪಲ್ ಪರಿಕ್ಕರ್ ನುಡಿದರು.
ಉತ್ಪಲ್ ಪರ್ರಿಕ ರ್ ಬೆಳಿಗ್ಗೆ ಪಣಜಿಯ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ನಂತರ ನಾಮಪತ್ರ ಸಲ್ಲಿಸಿದರು.
ಪಣಜಿ ಕ್ಷೇತ್ರದಿಂದ ಬಿಜೆಪಿಯಿಂದ ಸ್ಫರ್ಧಿಸಲು ಉತ್ಪಲ್ ಪರ್ರಿಕರ್ ಉತ್ಸುಕರಾಗಿದ್ದರು. ಆದರೆ ಬಿಜೆಪಿಯು ಪಣಜಿ ಕ್ಷೇತ್ರದ ಹಾಲಿ ಶಾಸಕ ಬಾಬೂಶ್ ಮೊನ್ಸೆರಾತ್ ರವರಿಗೆ ಟಿಕೆಟ್ ನೀಡಿದ್ದರಿಂದ ಉತ್ಪಲ್ ಪರ್ರಿಕರ್ ಇದೇ ಕ್ಷೇತ್ರದಿಂದ ಪಕ್ಷೇತರರಾಗಿ ಕಣಕ್ಕಿಳಿದಿದ್ದಾರೆ. ಮಾಜಿ ಮುಖ್ಯಮಂತ್ರಿ ಹಾಗೂ ದೇಶದ ಮಾಜಿ ರಕ್ಷಣಾ ಸಚಿವ ಮನೋಹರ್ ಪರ್ರಿಕರ್ ಪುತ್ರನಿಗೆ ಬಿಜೆಪಿ ಟಿಕೇಟ್ ನೀಡದಿರುವುದು ಮಾತ್ರ ರಾಜ್ಯಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿದೆ. ವಿವಿಧ ರಾಜಕೀಯ ಪಕ್ಷಗಳಂತೂ ಇದೇ ವಿಷಯವನ್ನು ತಮ್ಮ ಅಸ್ತ್ರವಾಗಿಸಿಕೊಂಡಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ