ಗೋವಾ-ಬೆಳಗಾವಿ ಮಾರ್ಗಕ್ಕೆ ಎಲೆಕ್ಟ್ರಿಕ್ ಬಸ್ ಆರಂಭಿಸಲು ಕರ್ನಾಟಕದಲ್ಲಿ ರಸ್ತೆ ಹದಗೆಟ್ಟಿದೆ
Team Udayavani, Oct 21, 2022, 3:40 PM IST
ಪಣಜಿ: ಕರ್ನಾಟಕ ರಾಜ್ಯದಲ್ಲಿ ರಸ್ತೆಗಳು ಹದಗೆಟ್ಟಿರುವ ಬಗ್ಗೆ ಕರ್ನಾಟಕ ರಾಜ್ಯದ ಜನತೆ ಮಾತ್ರವಲ್ಲದೆಯೇ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಕೂಡ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಭಾಗದ ರಸ್ತೆ ಹದಗೆಟ್ಟಿರುವ ಬಗ್ಗೆ ಮುಖ್ಯಮಂತ್ರಿ ಸಾವಂತ್ ಬೇಸರ ವ್ಯಕ್ತಪಡಿಸಿದ್ದು, ಗೋವಾ-ಬೆಳಗಾವಿ ಮಾರ್ಗಕ್ಕೆ ಗೋವಾ ಕದಂಬ ಸಾರಿಗೆಯ ಎಲೆಕ್ಟ್ರಿಕ್ ಬಸ್ ಓಡಾಟ ಆರಂಭಿಸಲು ಕರ್ನಾಟಕದಲ್ಲಿ ರಸ್ತೆ ಹದಗೆಟ್ಟಿದೆ ಎಂದು ಮುಖ್ಯಮಂತ್ರಿ ಸಾವಂತ್ ಹೇಳಿದ್ದಾರೆ.
ಪಣಜಿಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದ ರಸ್ತೆಗಳು ಸಂಪೂರ್ಣ ಹಾಳಾಗಿದೆ. ಈ ಸಮಸ್ಯೆಯನ್ನು ಈಗಾಗಲೇ ಕರ್ನಾಟಕ ಮುಖ್ಯಮಂತ್ರಿ ಬೊಮ್ಮಾಯಿ ಅವರ ಗಮನಕ್ಕೆ ತರಲಾಗಿದೆ. ಮಳೆಗಾಲದ ನಂತರ ರಸ್ತೆ ದುರಸ್ತಿ ಕಾರ್ಯ ಆರಂಭಿಸಲಾಗುವುದು ಎಂದು ಬೊಮ್ಮಾಯಿ ಭರವಸೆ ನೀಡಿದ್ದಾರೆ. ಗೋವಾ ರಾಜ್ಯ ಸರ್ಕಾರವು ಇಂಧನ ವಾಹನಗಳ ಬದಲು ಎಲೆಕ್ಟ್ರಿಕ್ ಬಸ್ ಓಡಾಟ ಆರಂಭಿಸಲು ಮುಂದಾಗಿರುವ ಬಗ್ಗೆ ಕರ್ನಾಟಕ ಮುಖ್ಯಮಂತ್ರಿ ಬೊಮ್ಮಾಯಿ ಶ್ಲಾಘನೆ ವ್ಯಕ್ತ ಪಡಿಸಿದ್ದಾರೆ ಎಂದು ಮುಖ್ಯಮಂತ್ರಿ ಸಾವಂತ್ ಹೇಳಿದರು.
ಗೋವಾದಿಂದ ರಾಯಚೂರು, ಬೆಳಗಾವಿ ಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿಯೂ ಎಲೆಕ್ಟ್ರಿಕ್ ಬಸ್ ಓಡಾಟ ಆರಂಭಿಸಲು ರಸ್ತೆ ಯೋಗ್ಯವಾಗಿಲ್ಲ ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ಅಭಿಪ್ರಾಯಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ