ಕೈಗಾರಿಕಾ ಅಭಿವೃದ್ಧಿ ಮತ್ತು ಹೂಡಿಕೆ ಉತ್ತೇಜನ ಯೋಜನೆಗೆ ಸಚಿವ ಸಂಪುಟ ಅನುಮೋದನೆ : ಗೋವಾ ಸಿಎಂ
Team Udayavani, Jul 21, 2022, 4:31 PM IST
ಪಣಜಿ: “ಕೈಗಾರಿಕೆ ಇಲಾಖೆಯ ಗೋವಾ ಕೈಗಾರಿಕಾ ಅಭಿವೃದ್ಧಿ ಮತ್ತು ಹೂಡಿಕೆ ಉತ್ತೇಜನ ಯೋಜನೆ 2022ಕ್ಕೆ” ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಮುಖ್ಯಮಂತ್ರಿ ಮಾಹಿತಿ ನೀಡಿದರು. ಪ್ರಮೋದ್ ಸಾವಂತ್ ಪಣಜಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಹೊಸ ನೀತಿಯ ಪ್ರಕಾರ, ಗೋಮಂತಕಿಯರಿಗೆ ಶೇ.60 ಪ್ರತಿಶತ ಮೀಸಲಾತಿ ಸೀಟುಗಳನ್ನು ಖಾಸಗಿ ಉದ್ಯೋಗಗಳಲ್ಲಿ ಇರಿಸಬೇಕಾಗುತ್ತದೆ ಎಂದು ಕೈಗಾರಿಕಾ ಸಚಿವ ಮಾವಿನ್ ಗುಡಿನ್ಹೋ ಈ ಸಮಯದಲ್ಲಿ ಮಾಹಿತಿ ನೀಡಿದರು.
ಪಣಜಿಯಲ್ಲಿ ಆಯೋಜಿಸಿದ್ದ ಸಚಿವ ಸಂಪುಟ ಸಭೆಯಲ್ಲಿ- 18 ಕಾನೂನು ತಿದ್ದುಪಡಿಗಳನ್ನು ಒಳಗೊಂಡಂತೆ 35 ಪ್ರಸ್ತಾವನೆಗಳನ್ನು ಅನುಮೋದಿಸಿತು. ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ರಾಜ್ಯದಲ್ಲಿ ಕೈಗಾರಿಕಾ ಅಭಿವೃದ್ಧಿಗಾಗಿ ಹೊಸ ಪಾರದರ್ಶಕ ಮತ್ತು ಹೂಡಿಕೆ ಉತ್ತೇಜಕ ಕೈಗಾರಿಕಾ ನೀತಿಯ ಅಗತ್ಯವಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಹೊಸ ನೀತಿಯನ್ನು ರೂಪಿಸಲಾಗಿದೆ. ‘ರಾಜ್ಯದಲ್ಲಿ ಹೊಸ ಕೈಗಾರಿಕೆ ನೀತಿ ಜಾರಿಯಾದ ನಂತರ ಮುಂದಿನ ಐದು ವರ್ಷಗಳಲ್ಲಿ 30 ಸಾವಿರ ಉದ್ಯೋಗಾವಕಾಶ ಲಭ್ಯವಾಗಲಿದ್ದು, ಸುಮಾರು 20 ಸಾವಿರ ಕೋಟಿ ರೂಪಾಯಿ ಬಂಡವಾಳ ಹೂಡಿಕೆ ಮಾಡುವ ಗುರಿ ಹೊಂದಲಾಗಿದೆ ಎಂದು ಮುಖ್ಯಮಂತ್ರಿ ಸಾವಂತ್ ಮಾಹಿತಿ ನೀಡಿದರು.
ಹೊಸ ನೀತಿಯ ಪ್ರಕಾರ, ಖಾಸಗಿ ಉದ್ಯೋಗಗಳಲ್ಲಿ ಸ್ಥಳೀಯರಿಗೆ 60 ರಷ್ಟು ಮೀಸಲಾತಿ ಸೀಟುಗಳನ್ನು ಮೀಸಲಿಡಲಾಗುತ್ತದೆ. ಈ ನೀತಿಯನ್ನು ಜಾರಿಗೆ ತರದ ಕೈಗಾರಿಕೆಗಳು ಸರ್ಕಾರದ ಯೋಜನೆಯ ಲಾಭವನ್ನು ಪಡೆಯಲು ಸಾಧ್ಯವಾಗುವುದಿಲ್ಲ. ಹೊಸ ನೀತಿಯ ಅಡಿಯಲ್ಲಿ, ಒಂದೇ ಅಪ್ಲಿಕೇಶನ್ನಲ್ಲಿ ಸಿಂಗಲ್ ವಿಂಡೋ ಮೂಲಕ ಕೈಗಾರಿಕೆಗಳಿಗೆ ಪರವಾನಗಿಗಳನ್ನು ನೀಡಲಾಗುತ್ತದೆ. ಒಂದು ತಿಂಗಳಲ್ಲಿ ಈ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಈ ನೀತಿಯನ್ನು ಗೋವಾ ಕೈಗಾರಿಕಾ ಅಭಿವೃದ್ಧಿ ನಿಗಮದ ಮೂಲಕ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿಗಳು ಮಾಹಿತಿ ನೀಡಿದರು.
ಇದನ್ನೂ ಓದಿ : ಶ್ರೀಲಂಕಾ ನೌಕಾಪಡೆಯಿಂದ 6 ಭಾರತೀಯ ಮೀನುಗಾರರ ಬಂಧನ
ಗೋವಾದಲ್ಲಿ ಪತ್ರಕರ್ತರ ಸಂರಕ್ಷಣಾ ಕಾಯ್ದೆಯ ಅನುಷ್ಠಾನಕ್ಕೆ…
ಹೊಸ ಕಾಯ್ದೆಯಲ್ಲಿ ಪತ್ರಕರ್ತರ ಸಂರಕ್ಷಣಾ ಕಾಯ್ದೆ ಅನುಷ್ಠಾನಕ್ಕೆ ಒತ್ತು ನೀಡಲಾಗುವುದು. ಈ ಕಾಯ್ದೆಗೆ ವಿಧಾನಸಭೆಯಲ್ಲಿ ಅನುಮೋದನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು. ಈ ಹೊಸ ಕಾನೂನಿನ ಪ್ರಕಾರ, ಪತ್ರಕರ್ತರ ಮೇಲೆ ಹಲ್ಲೆ ನಡೆಸುವವರನ್ನು ಜಾಮೀನು ರಹಿತವಾಗಿ ಬಂಧಿಸಲಾಗುತ್ತದೆ ಮತ್ತು ಮೂರು ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!