ಎಲ್ಲರೂ ಕಡ್ಡಾಯವಾಗಿ ಎರಡು ಕೋವಿಡ್ ಡೋಸ್ ಲಸಿಕೆಯನ್ನು ಪಡೆದುಕೊಳ್ಳಿ : ಸಿಎಂ ಪ್ರಮೋದ್ ಸಾವಂತ್
Team Udayavani, Dec 8, 2021, 5:18 PM IST
ಪಣಜಿ: ರಾಜ್ಯದಲ್ಲಿ ಕೊರೊನಾ ಭೀತಿ ಕಡಿಮೆಯಾಗಿದ್ದರೂ ಕೂಡ ಮತ್ತೊಂದೆಡೆಗೆ ಕೊರೊನಾ ರೂಪಾಂತರಿ ಓಮೆಕ್ರಾನ್ ಭೀತಿ ಎದುರಾಗಿದೆ. ರಷ್ಯಾದಿಂದ ದೆಹಲಿಗೆ ಆಗಮಿಸಿ, ಗೋವಾಕ್ಕೆ ಬಂದಿದ್ದ ವ್ಯಕ್ತಿಯಲ್ಲಿ ಓಮೆಕ್ರಾನ್ ಶಂಕೆ ಕಂಡುಬಂದಿದೆ. ಇವರನ್ನು ನಾವು ಓಮೆಕ್ರಾನ್ ರೋಗಿ ಎಂದು ಕರೆಯಲು ಸಾಧ್ಯವಿಲ್ಲ, ತಪಾಸಣಾ ವರದಿ ಇನ್ನೂ ಬರಬೇಕಾಗಿದೆ ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಪ್ರತಿಕ್ರಿಯೆ ನೀಡಿದರು.
ಪಣಜಿಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಗೋವಾದಲ್ಲಿ ಪತ್ತೆಯಾಗಿರುವ ಓಮೆಕ್ರಾನ್ ಶಂಕಿತರನ್ನು ಪ್ರತ್ಯೇಕವಾಗಿ ಕ್ವಾರಂಟೈನ್ ಮಾಡಲಾಗಿದೆ. ರಾಜ್ಯದಲ್ಲಿ ಎಲ್ಲರೂ ಕಡ್ಡಾಯವಾಗಿ ಕೋವಿಡ್ ಎರಡೂ ಡೋಸ್ ಲಸಿಕೆ ಪಡೆದುಕೊಳ್ಳಲು ಈ ಮೂಲಕ ನಾನು ಮನವಿ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮನವಿ ಮಾಡಿದರು.
ಗೋವಾದಲ್ಲಿ ಲಾಕ್ಡೌನ್…! : ಗೋವಾದಲ್ಲಿ ಗುರುವಾರದಿಂದ ಸೋಮವಾರದ ವರೆಗೆ ಸಂಪೂರ್ಣ ಲಾಕ್ಡೌನ್ ಜಾರಿಗೊಳಿಸಲಾಗಿದೆ ಎಂಬ ಸುಳ್ಳು ಸುದ್ಧಿಯು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ರಾಜ್ಯಕ್ಕೆ ಆಗಮಿಸಿರುವ ಪ್ರವಾಸಿಗರನ್ನು ಮತ್ತು ರಾಜ್ಯದ ಜನತೆಯನ್ನು ಬೆಚ್ಚಿ ಬೀಳಿಸುವಂತೆ ಮಾಡಿದೆ. ಈ ಸುದ್ಧಿಯು ನೆರೆಯ ರಾಜ್ಯ ಕರ್ನಾಟಕ ಮತ್ತು ಮಹಾರಾಷ್ಟ್ರಗಳಲ್ಲಿಯೂ ಚರ್ಚೆಗೆ ಕಾರಣವಾಗಿದೆ.
ಆರಂಭದಲ್ಲಿ ಜನತೆ ಲಾಕ್ಡೌನ್ ಸುದ್ಧಿ ನಿಜ ಎಂದು ನಂಬಿದ್ದರೂ ಕೂಡ ನಂತರ ಮಾಧ್ಯಮಗಳಲ್ಲಿ ಈ ಕುರಿತು ಅಧಿಕೃತ ಸುದ್ಧಿ ಪ್ರಕಟವಾಗುತ್ತಿದ್ದಂತೆ ಜನತೆ ನಿಟ್ಟುಸಿರು ಬಿಡುವಂತಾಗಿದೆ.
ಲಾಕ್ಡೌನ್ ಅಗತ್ಯವಿಲ್ಲ-ಸಿಎಂ ಸಾವಂತ್:
ಗೋವಾ ರಾಜ್ಯದಲ್ಲಿ ಓಮೆಕ್ರಾನ್ ರೂಪಾಂತರಿ ಸೋಂಕು ಶಂಕಿತರು 5 ಜನ ಪತ್ತೆಯಾಗಿದ್ದರೂ ಕೂಡ ರಾಜ್ಯದಲ್ಲಿ ಕರೋನಾ ಸ್ಥಿತಿ ನಿಯಂತ್ರಣದಲ್ಲಿದೆ. ಇದರಿಂದಾಗಿ ಸದ್ಯಕ್ಕಂತೂ ರಾಜ್ಯದಲ್ಲಿ ಲಾಕ್ಡೌನ್ ಅಗತ್ಯವಿಲ್ಲ. ಈ ಐದು ಜನರ ತಪಾಸಣಾ ವರದಿ ಬರಬೇಕಾಗಿದೆ ಎಂದು ಮುಖ್ಯಮತ್ರಿ ಪ್ರಮೋದ ಸಾವಂತ್ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Patanjali Ads case:ಖುದ್ದು ಹಾಜರಾಗಿ- ಬಾಬಾ ರಾಮ್ ದೇವ್, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್
Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್ ಗೆ RLJP ಮುಖಂಡ ಪರಾಸ್ ರಾಜೀನಾಮೆ
ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು
ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ
MUST WATCH
ಹೊಸ ಸೇರ್ಪಡೆ
ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ
Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ
ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ