ಗೋವಾ : ಅಂಬ್ಯುಲೆನ್ಸ್ ನಲ್ಲಿ ಕೋವಿಡ್ ಸೋಂಕಿತರ ಓಡಾಟ ; ಆತಂಕದಲ್ಲಿ ಚೆಕ್ಪೋಸ್ಟ್ ಪ್ರದೇಶ
Team Udayavani, May 3, 2021, 8:13 PM IST
ಸಾಂದರ್ಭಿಕ ಚಿತ್ರ
ಪಣಜಿ: ಗೋವಾದಿಂದ ಮಹಾರಾಷ್ಟ್ರದ ಅಹಮದ್ನಗರಕ್ಕೆ ಅಂಬ್ಯುಲೆನ್ಸ್ ನಲ್ಲಿ ಹೊರಟಿದ್ದ 4 ಜನರನ್ನು ಮಹಾರಾಷ್ಟ್ರ ಗಡಿಯಲ್ಲಿ ಥರ್ಮಲ್ ಗನ್ ತಪಾಸಣೆ ನಡೆಸಿದಾಗ ನಾಲ್ವರಲ್ಲೂ ಜ್ವರ ಕಾಣಿಸಿಕೊಂಡಿದ್ದು ಮಾತ್ರವಲ್ಲದೆಯೇ ಈ ನಾಲ್ವರೂ ಕೋವಿಡ್ ಸೋಂಕಿತರು ಎಂದು ದೃಢಪಟ್ಟ ನಂತರ ಈ ನಾಲ್ವರನ್ನೂ ಮಹಾರಾಷ್ಟ್ರಕ್ಕೆ ಪ್ರವೇಶಾವಕಾಶ ನೀಡದೆಯೇ ಗೋವಾಕ್ಕೆ ವಾಪಸ್ಸು ಕಳುಹಿಸಿದ ಘಟನೆ ನಡೆದಿದೆ.
ಈ ನಾಲ್ವರ ಆಕ್ಸಿಜನ್ ಪ್ರಮಾಣದಲ್ಲೂ ಕೊರತೆಯಿರುವುದು ಕಂಡುಬಂದಿದೆ. ತಪಾಸಣೆ ನಡೆಸಿದಾಗ ಈ ನಾಲ್ವರೂ ಕೋವಿಡ್ ಸೋಂಕಿತರು ಎಂಬುದು ಖಚಿತವಾದ ಹಿನ್ನೆಲೆಯಲ್ಲಿ ಇವರನ್ನು ಗೋವಾಕ್ಕೆ ವಾಪಸ್ಸು ಕಳುಹಿಸಿದ ಘಟನೆ ನಡೆದಿದೆ. ಈ ಘಟನೆಯಿಂದಾಗಿ ಗೋವಾ ಮಹಾರಾಷ್ಟ್ರ ಗಡಿ ಭಾಗದಲ್ಲಿ ಆತಂಕ ಮನೆಮಾಡಿದ್ದು ಚೆಕ್ಪೋಸ್ಟ್ ಪ್ರದೇಶವನ್ನು ಸ್ಯಾನಿಟೈಜೇಶನ್ ಮಾಡಲಾಗಿದೆ.
ಅಂಬ್ಯುಲೆನ್ಸ್ ನಲ್ಲಿ ಮಹಾರಾಷ್ಟ್ರಕ್ಕೆ ತೆರಳುತ್ತಿದ್ದ ನಾಲ್ಕೂ ಜನ ಕೋವಿಡ್ ಸೋಂಕಿತರು ಎಂದು ಖಚಿತವಾದ ನಂತರ ಸಾವಂತವಾಡಿ ತಹಶೀಲ್ದಾರ್ ರಾಜಾರಾಮ ಮಾತ್ರೆ ರವರಿಗೆ ಈ ಮಾಹಿತಿ ನೀಡಲಾಯಿತು. ಸ್ಥಳಕ್ಕೆ ಧಾವಿಸಿದ ಬಂದ ತಹಶೀಲ್ದಾರ್ ರವರು ಈ ನಾಲ್ಕೂ ಜನರನ್ನು ಗೋವಾದಲ್ಲಿರುವ ನಿಮ್ಮ ನಿವಾಸಕ್ಕೆ ತೆರಳುವಂತೆ ಸೂಚನೆ ನೀಡಲಾಯಿತು ಎಂಬ ಮಾಹಿತಿ ಲಭ್ಯವಾಗಿದೆ.
ಆದರೆ ಗೋವಾದಿಂದ 4 ಜನ ಕೋವಿಡ್ ಸೋಂಕಿತರನ್ನು ಕರೆದುಕೊಂಡು ಮಹಾರಾಷ್ಟ್ರಕ್ಕೆ ತೆರಳುತ್ತಿದ್ದ ಕಾರಣವೇನು ಎಂಬುದು ಮಾತ್ರ ಇದುವರೆಗೂ ತಿಳಿದುಬಂದಿಲ್ಲ. ಆದರೆ ಕೋವಿಡ್ ಸೋಂಕಿತರು ಅಂಬ್ಯುಲೆನ್ಸ್ ನಲ್ಲಿ ಓಡಾಟ ನಡೆಸಿರುವುದು ಆತಂಕ ಹೆಚ್ಚುವಂತೆ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
MUST WATCH
ಹೊಸ ಸೇರ್ಪಡೆ
Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ