ಕೋವಿಡ್ ನಿಂದ ಸಾವನ್ನಪ್ಪಿದ ವ್ಯಕ್ತಿಯ ಕುಟುಂಬಸ್ಥರಿಗೆ 2 ಲಕ್ಷ ರೂ. ಸಹಾಯಧನ ಘೋಷಿಸಿದ ಸರ್ಕಾರ
Team Udayavani, Jun 3, 2021, 6:53 PM IST
ಪಣಜಿ: ಕೋವಿಡ್ ನಿಂದ ಸಾವನ್ನಪ್ಪಿರುವ ವ್ಯಕ್ತಿಯ ಕುಟುಂಬಸ್ಥರಿಗೆ ಗೋವಾ ಸರ್ಕಾರದ ವತಿಯಿಂದ 2 ಲಕ್ಷ ರೂ ಸಹಾಯಧನ ನೀಡಲಾಗುತ್ತದೆ. ಇದರೊಂದಿಗೆ ಕೇಂದ್ರ ಸರ್ಕಾರ ಘೋಷಣೆ ಮಾಡಿರುವ ಸಹಾಯಧನ ಕೂಡ ಆ ಕುಟುಂಬಸ್ಥರಿಗೆ ಲಭಿಸಲಿದೆ ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮಾಹಿತಿ ನೀಡಿದರು.
ಪಣಜಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು- ಕರೋನಾದಿಂದ ಸಾವನ್ನಪ್ಪಿರುವ ವ್ಯಕ್ತಿಯ ಕುಟುಂಬಸ್ಥರಿಗೆ 4 ಲಕ್ಷ ರೂ ಸಹಾಯಧನ ನೀಡುವುದಾಗಿ ಘೋಷಿಸಿದ್ದು, ಈ ಹಣ ಆ ಕುಟುಂಬಸ್ಥರಿಗೆ ಲಭಿಸಲಿದೆ. ಇದರೊಂದಿಗೆ ಗೋವಾ ಸರ್ಕಾರ ಘೋಷಿಸಿರುವ 2 ಲಕ್ಷ ರೂ ಸಹಾಯಧನ ಕೂಡ ಲಭಿಸಲಿದೆ. ಕೇಂದ್ರ ಸರ್ಕಾರದ ಯೋಜನೆಗಳನ್ನು ರಾಜ್ಯದ ಜನತೆಗೆ ತಲುಪಿಸಲು ನಮ್ಮ ಸರ್ಕಾರ ಕಂಕಣಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಾವಂತ್ ವಿಶ್ವಾಸ ವ್ಯಕ್ತಪಡಿಸಿದರು.
ಇದನ್ನೂ ಓದಿ:ಲಾಕ್ಡೌನ್ಗೆ ತರಕಾರಿ ಬೆಳೆದ ರೈತ ಹೈರಾಣ : ಹೊಲದಲ್ಲೇ ಕೊಳೆಯುತ್ತಿವೆ ಬೆಳೆ
ಕರ್ಫ್ಯೂ ಜಾರಿಗೊಳಿಸಿರುವುದರಿಂದ ರಾಜ್ಯದಲ್ಲಿ ಕರೋನಾ ಸೋಂಕಿತರ ಸಂಖ್ಯೆ ಮತ್ತು ಸಾವಿನ ಪ್ರಮಾಣದಲ್ಲಿ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ. ರಾಜ್ಯದಲ್ಲಿ ಎಲ್ಲ ಸರ್ಕಾರಿ ಯೋಜನೆಗಳೂ ಚಾಲೂ ಇದೆ. ಯಾವುದೇ ಯೋಜನೆಯನ್ನೂ ಬಂದ್ ಮಾಡಿಲ್ಲ. ವಿರೋಧಿಗಳ ಆರೋಪ ಸಂಪೂರ್ಣ ಸುಳ್ಳು ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ನುಡಿದರು.