ಮದುವೆಯಾದ 1 ವರ್ಷಕ್ಕೆ ಪತ್ನಿಯನ್ನು ಕೊಂದು ಅಪಘಾತ ಎಂದು ಬಿಂಬಿಸಿದ ಗೋವಾದ ಹೋಟೆಲ್ ಮ್ಯಾನೇಜರ್
Team Udayavani, Jan 21, 2024, 10:46 AM IST
ಪಣಜಿ: ಹೆಂಡತಿಯನ್ನು ಸಮುದ್ರದಲ್ಲಿ ಮುಳುಗಿಸಿ ಕೊಂಡು ಬಳಿಕ ಅಪಘಾತವೆಂದು ಬಿಂಬಿಸಿದ ದಕ್ಷಿಣ ಗೋವಾದ ಐಷಾರಾಮಿ ಹೋಟೆಲ್ನ ಮ್ಯಾನೇಜರ್ ನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಯನ್ನು ಗೌರವ್ ಕಟಿಯಾರ್ ಎಂದು ಗುರುತಿಸಲಾಗಿದೆ.
ಏನಿದು ಪ್ರಕರಣ: ಗೌರವ್ ಕಟಿಯಾರ್ ಅವರು ದಕ್ಷಿಣ ಗೋವಾದ ಕೊಲ್ವಾದಲ್ಲಿ ಮ್ಯಾರಿಯಟ್ ಇಂಟರ್ನ್ಯಾಷನಲ್ ನಿರ್ವಹಿಸುತ್ತಿರುವ ಐಷಾರಾಮಿ ಹೋಟೆಲ್ನಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದಾರೆ. ಲಕ್ನೋ ಮೂಲದ ಗೌರವ್ ಗೆ ಸುಮಾರು ಒಂದು ವರ್ಷದ ಹಿಂದೆ ದೀಕ್ಷಾ ಗಂಗ್ವಾರ್ ಅವರ ಜೊತೆ ವಿವಾಹವಾಗಿತ್ತು ಆದರೆ ಇದರ ನಡುವೆ ಗೌರವ್ ಗೆ ಬೇರೊಂದು ಮಹಿಳೆಯ ಜೊತೆ ಅಕ್ರಮ ಸಂಬಂಧ ಇತ್ತು ಎನ್ನಲಾಗಿದೆ ಆದರೆ ಮದುವೆಯ ಬಳಿಕ ಪತ್ನಿ ತನ್ನ ಸಂಬಂಧಕ್ಕೆ ಅಡ್ಡ ಬರುತ್ತಾಳೆ ಎಂದು ಭಾವಿಸಿ ಆಕೆಯ ಹತ್ಯೆಗೆ ಸಂಚು ರೂಪಿಸಿ ಅದರಂತೆ ಕಳೆದ ಶುಕ್ರವಾರ ಪತ್ನಿ ಜೊತೆ ಗೋವಾ ಸಮುದ್ರದಲ್ಲಿ ಈಜಾಡಲು ತೆರಳಿದ್ದಾರೆ ಈ ವೇಳೆ ಆಕೆಯನ್ನು ನೀರಿನಲ್ಲಿ ಮುಳುಗಿಸಿ ಕೊಲೆಗೈದು ಹಿಂತಿರುಗಿದ್ದಾನೆ.
ಇದನ್ನು ಕಂಡ ಅಲ್ಲಿನ ಸ್ಥಳೀಯರು ಬೀಚ್ ಗೆ ಹೋಗುವಾಗ ಜೊತೆಯಾಗಿ ಹೋಗಿದ್ದು ವಾಪಸ್ಸು ಬರುವಾಗ ಒಬ್ಬಂಟಿಯಾಗಿ ಹಿಂತಿರುತ್ತಿದ್ದನ್ನು ಕಂಡು ಅನುಮಾನಗೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಇದಾದ ಬಳಿಕ ಶುಕ್ರವಾರ ಸಂಜೆ ಪತ್ನಿ ದೀಕ್ಷಾ ಗಂಗ್ವಾರ್ ಮೃತದೇಹ ಸಮುದ್ರದಲ್ಲಿ ಪತ್ತೆಯಾಗಿತ್ತು. ಘಟನಾ ಸ್ಥಳಕ್ಕೆ ಬಂದ ಪೊಲೀಸರ ತನಿಖೆ ವೇಳೆ ದೀಕ್ಷಾ ಅವರ ಪತಿ ಮನೆಯಲ್ಲಿ ನನಗೆ ಗೊತ್ತಿಲ್ಲದ ವೇಳೆ ಆಕೆ ಸಮುದ್ರದಲ್ಲಿ ಈಜಾಡಲು ಹೋಗಿ ಅವಘಡ ಸಂಭವಿಸಿದೆ ಎಂದು ಹೇಳಿದ್ದಾನೆ ಆದರೆ ಇದನ್ನು ಅಲ್ಲಗಳೆದ ಅಲ್ಲಿನ ನಿವಾಸಿಗಳು ಇಬ್ಬರು ಜೊತೆಯಾಗಿ ಸಮುದ್ರಕ್ಕೆ ತೆರಳುವುದನ್ನು ನಾವು ನೋಡಿದ್ದೇವೆ ಎಂದು ಹೇಳಿದ್ದಾರೆ ಬಳಿಕ ಪತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ವೇಳೆ ಸತ್ಯ ಹೊರಬಿದ್ದಿದೆ.
ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಪತಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಇದನ್ನೂ ಓದಿ: Rashmika Mandanna: ಡೀಪ್ ಫೇಕ್ ಮಾಡಿದಾತನ ಬಂಧನ; ನಟಿ ರಶ್ಮಿಕಾ ಹೇಳಿದ್ದೇನು?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ರಾಯ್ಬರೇಲಿಯಿಂದ ರಾಹುಲ್, ಅಮೇಥಿಯಿಂದ ಕೆ.ಎಲ್. ಶರ್ಮ ಕಣಕ್ಕೆ
CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ
PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?
BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್
Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ
MUST WATCH
ಹೊಸ ಸೇರ್ಪಡೆ
Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್
Lok Sabha Election: ರಾಯ್ಬರೇಲಿಯಿಂದ ರಾಹುಲ್, ಅಮೇಥಿಯಿಂದ ಕೆ.ಎಲ್. ಶರ್ಮ ಕಣಕ್ಕೆ
Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!
Mumbai: 45 ದಿನದಲ್ಲಿ 300 ಐಸ್ಕ್ರೀಂ ಆರ್ಡರ್ ಮಾಡಿದ!
Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ