ಗೋವಾ: ಕೊಲೆ, ಹೊಡೆದಾಟ, ದರೋಡೆಯಂತಹ ಘಟನೆ ಹೆಚ್ಚಳ
ಎರಡು ಬ್ಯಾಂಕ್ಗಳ ಎಟಿಎಂ ಲೂಟಿ ; ಸಚಿವರಿಂದ ಎಚ್ಚರಿಕೆ!
Team Udayavani, Sep 9, 2022, 9:55 PM IST
ಪಣಜಿ: ರಾಜ್ಯದಲ್ಲಿ ಅಪರಾಧ ಪ್ರಮಾಣ ವಿಪರೀತವಾಗಿ ಹೆಚ್ಚಿರುವುದರಿಂದ ಕಾನೂನು ಸುವ್ಯವಸ್ಥೆ ಸಮಸ್ಯೆ ತಲೆದೋರಿದೆ. ಕೊಲೆ, ಹೊಡೆದಾಟ, ದರೋಡೆಯಂತಹ ಘಟನೆಗಳಿಂದ ಗೋವಾ ತತ್ತರಿಸಿ ಹೋಗಿದ್ದು, ರಾಜ್ಯದ ಎಲ್ಲ ಕಡೆಗಳಲ್ಲಿ ಕಳ್ಳರ ಹಾವಳಿ ಹೆಚ್ಚಾಗಿದೆ. ರಾಜ್ಯದ ಸಾಂಸ್ಕ್ರತಿಕ ರಾಜಧಾನಿ ಎಂದೇ ಕರೆಸಿಕೊಳ್ಳುವ ಫೊಂಡಾ ನಗರದಲ್ಲಿಯೂ ಅಪರಾಧಗಳ ಪ್ರಮಾಣ ಎಳ್ಳಷ್ಟೂ ಕಡಿಮೆಯಾಗಿಲ್ಲ. ಪೊಲೀಸರು ಶತಪ್ರಯತ್ನ ನಡೆಸುತ್ತಿದ್ದರೂ ಕ್ರಿಮಿನಲ್ ಗಳು ಪೊಲೀಸರಿಂದ ನುಣುಚಿಕೊಳ್ಳುತ್ತಿರುವುದರಿಂದ ಕಳ್ಳರನ್ನು ಹಿಡಿಯುವುದು ಕಷ್ಟವಾಗುತ್ತಿದೆ.
ಕಳೆದ ಎರಡು ತಿಂಗಳ ಫೋಂಡಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆ ಅಪರಾಧ ಪ್ರಕರಣಗಳನ್ನು ಅವಲೋಕಿಸಿದರೆ, ಇತರ ಅಪರಾಧಗಳಿಗೆ ಹೋಲಿಸಿದರೆ ಕಳ್ಳತನದ ಸಂಖ್ಯೆಯಲ್ಲಿ ದೊಡ್ಡ ಹೆಚ್ಚಳ ಕಂಡುಬಂದಿದೆ. ಹದಿನೈದು ದಿನಗಳ ಹಿಂದೆ ಫೋಂಡಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಒಂದೇ ದಿನ ನಾಲ್ಕು ಕಳ್ಳತನ ನಡೆದಿತ್ತು. ಅದರಲ್ಲಿ ಖಂಡೋಲದ ಮಹಾಗಣಪತಿ ದೇವಸ್ಥಾನದಲ್ಲಿ ಹತ್ತರಿಂದ ಹನ್ನೆರಡು ಲಕ್ಷ ರೂ ಕಳ್ಳತನ, ಮತ್ತೊಂದೆಡೆ, ತಿಸ್ಕ-ಉಸ್ಗಾಂವ್ನಲ್ಲಿ ಕಳ್ಳರು ಎರಡು ಬ್ಯಾಂಕ್ಗಳ ಎಟಿಎಂಗಳನ್ನು ಮುರಿದು ಸುಮಾರು 10 ಲಕ್ಷ ರೂ ಲೂಟಿ ಮಾಡಿದ್ದಾರೆ. ಮೇಲಾಗಿ ಮಹಿಳೆಯ ಕೊರಳಲ್ಲಿದ್ದ ಚಿನ್ನಾಭರಣಗಳನ್ನು ಕದ್ದು ಪರಾರಿಯಾಗಿರುವ ಕಳ್ಳರನ್ನು ಹಿಡಿಯಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. .
ಸಚಿವರಿಂದ ಎಚ್ಚರಿಕೆ!
ಫೋಂಡಾ ಕ್ಷೇತ್ರದ ಶಾಸಕ ಹಾಗೂ ರಾಜ್ಯ ಕೃಷಿ ಸಚಿವ ರವಿ ನಾಯ್ಕ ಸುದ್ಧಿಗಾರರೊಂದಿಗೆ ಮಾತನಾಡಿ- ರಾಜ್ಯದಲ್ಲಿ ಪೊಲೀಸರ ಮೇಲೆ ಒತ್ತಡವಿದ್ದು, ಅಪರಾಧ ಪ್ರಮಾಣವೂ ಹೆಚ್ಚಾಗಿದೆ. ಅಪರಾಧ ತಡೆಯಲು ಪೊಲೀಸರು ತಮ್ಮ ಕೈಲಾದಷ್ಟು ಪ್ರಯತ್ನಿಸುತ್ತಿದ್ದಾರೆ, ಆದರೆ ನಾಗರಿಕರು ಸಹ ಸಹಕರಿಸಬೇಕು ಎಂದು ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!