ಅಕ್ಟೋಬರ್ 13 ರಿಂದ ಗೋವಾ-ಶಿರ್ಡಿ ಮಾರ್ಗಕ್ಕೆ ಕದಂಬ ಬಸ್ ಓಡಾಟ ಪುನರಾರಂಭ
Team Udayavani, Oct 11, 2021, 5:31 PM IST
ಪಣಜಿ: ಕೋವಿಡ್ ಮಹಾಮಾರಿಯ ಸಂದರ್ಭದಲ್ಲಿ ಬಂದ್ ಆಗಿದ್ದ ಗೋವಾ-ಶಿರ್ಡಿ ಕದಂಬ ಬಸ್ ಓಡಾಟ ಅಕ್ಟೋಬರ್ 13 ರಿಂದ ಪುನರಾರಂಭಗೊಳ್ಳಲಿದೆ. ಈ ಬಸ್ ಮಡಗಾಂವ-ಪಣಜಿ-ಪುಣೆ-ಶಿರ್ಡಿ ಮಾರ್ಗವಾಗಿ ಓಡಾಟ ನಡೆಸಲಿದೆ ಎಂದು ಗೋವಾ ಕದಂಬ ಮಹಾಮಂಡಳದ ಮುಖ್ಯ ವ್ಯವಸ್ಥಾಪಕ ಸಂಜಯ ಘಾಟೆ ಮಾಹಿತಿ ನೀಡಿದ್ದಾರೆ.
ಲಾಕ್ಡೌನ್ ಸಡಿಲಿಕೆಯ ನಂತರ ಕರ್ನಾಟಕದಿಂದ ಕೆಎಸ್ಆರ್ಟಿಸಿ ಬಸ್ ಗೋವಾಕ್ಕೆ ಓಡಾಟ ಆರಂಭಿಸಿದ ನಂತರ ಗೋವಾದಿಂದಲೂ ಕದಂಬ ಸಾರಿಗೆ ಬಸ್ಸುಗಳ ಕರ್ನಾಟಕಕ್ಕೆ ಓಡಾಟ ಆರಂಭಗೊಂಡಿತ್ತು. ಆದರೆ ಮಹಾರಾಷ್ಟ್ರದಲ್ಲಿ ಮತ್ತೆ ಕೋವಿಡ್ ಪ್ರಕರಣಗಳು ಹೆಚ್ಚುತ್ತಿದ್ದ ಹಿನ್ನೆಲೆಯಲ್ಲಿ ಕದಂಬ ಬಸ್ ಓಡಾಟ ಸ್ಥಗಿತಗೊಳಿಸಲಾಗಿತ್ತು. ಇದೀಗ ಗೋವಾದಿಂದ ಮಹಾರಾಷ್ಟ್ರಕ್ಕೂ ಕೂಡ ಕದಂಬ ಬಸ್ ಓಡಾಟ ಆರಂಭಿಸಲಾಗಿದೆ.
ಲಾಕ್ಡೌನ್ ಸಂದರ್ಭದಲ್ಲಿ ಬಂದ್ ಆಗಿದ್ದ ಅಂತರಾಜ್ಯ ಮಾರ್ಗಗಳ ಕದಂಬ ಬಸ್ ಓಡಾಟ ಇದೀಗ ಹಂತ ಹಂತವಾಗಿ ಪುನರಾರಂಭಗೊಳ್ಳುತ್ತಿದೆ. ಆದರೆ ಗೋವಾಕ್ಕೆ ಆಗಮಿಸಲು ಡಬಲ್ ಡೋಸ್ ವ್ಯಾಕ್ಸಿನ್ ಪಡೆದವರಿಗೆ ಅಥವಾ ಕೋವಿಡ್ ನೆಗೆಟಿವ್ ಪ್ರಮಾಣಪತ್ರ ಹೊಂದಿರುವವರಿಗೆ ಮಾತ್ರ ಪ್ರವೇಶಾವಕಾಶ ನೀಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ