ಗೋವಾದಲ್ಲಿ ಸನ್ಬರ್ನ್ ಫೆಸ್ಟಿವಲ್ ಆಯೋಜನೆಗೆ ಅವಕಾಶವಿಲ್ಲ : ಸಚಿವ ಖಂವಟೆ
ಸರಕಾರದ ವತಿಯಿಂದಲೇ ಡಿಸೆಂಬರ್ 26 ರಿಂದ 31 ರ ವರೆಗೆ ಮ್ಯೂಸಿಕ್ ಫೆಸ್ಟಿವಲ್
Team Udayavani, May 25, 2022, 3:41 PM IST
ಪಣಜಿ: ಗೋವಾ ಸರಕಾರವು ತನ್ನ ಸ್ವಂತ ಮ್ಯೂಸಿಕ್ ಫೆಸ್ಟಿವಲ್ನ್ನು ಡಿಸೆಂಬರ್ 26 ರಿಂದ 31 ರ ವರೆಗೆ ಆಯೋಜಿಸಲು ಸಿದ್ಧತೆ ನಡೆಸಿದೆ. ಹೀಗಾಗಿ ಗೋವಾದಲ್ಲಿ ಸನ್ಬರ್ನ್ ಫೆಸ್ಟಿವಲ್ ಆಯೋಜನೆಗೆ ಅವಕಾಶವಿರುವುದಿಲ್ಲ ಎಂದು ಗೋವಾ ರಾಜ್ಯ ಪ್ರವಾಸೋದ್ಯಮ ಸಚಿವ ರೋಹನ್ ಖಂವಟೆ ಹೇಳಿದ್ದಾರೆ.
ಪ್ರತಿ ವರ್ಷ ಹಳೆಯ ವರ್ಷಕ್ಕೆ ವಿದಾಯ ಹೇಳಿ ಹೊಸ ವರ್ಷಕ್ಕೆ ಸ್ವಾಗತ ಕೋರಲು ರಾಜ್ಯದ ವಿವಿಧೆಡೆ ಸಂಗೀತೋತ್ಸವಗಳನ್ನು ಆಯೋಜಿಸಲಾಗಿದೆ. ಈ ಹಿಂದೆ ಸಾಕಷ್ಟು ವಿವಾದಕ್ಕೆ ಗುರಿಯಾಗಿದ್ದ ಸನ್ಬರ್ನ ಫೆಸ್ಟಿವಲ್ನ್ನು ಗೋವಾದಲ್ಲಿ ಮತ್ತೆ ಆಯೋಜಿಸುವ ಉದ್ದೇಶದಿಂದ ಸಂಸ್ಥೆ ಟಿಕೆಟ್ ಮಾರಾಟ ಆರಂಭಿಸಿದೆ.
ಈ ಕುರಿತಂತೆ ಪಣಜಿಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಸಚಿವ ರೋಹನ್ ಖಂವಟೆ, ಗೋವಾದಲ್ಲಿ ಸನ್ ಬರ್ನ್ ಫೆಸ್ಟಿವಲ್ ಆಯೋಜಿಸಲು ಇದುವರೆಗೂ ಯಾರೂ ಕೂಡ ಸನ್ಬರ್ನ್ ಆಯೋಜಕರು ಪರವಾನಗಿ ಪಡೆದುಕೊಳ್ಳಲು ಮುಂದೆ ಬಂದಿಲ್ಲ. ಗೋವಾ ರಾಜ್ಯ ಸರ್ಕಾರವು ಹೊಸ ವರ್ಷದ ಸಂಭ್ರಮಾಚರಣೆಯ ಸಂದರ್ಭದಲ್ಲಿ ಸರ್ಕಾರದ ವತಿಯಿಂದ ಮೂಜಿಕ್ ಫೆಸ್ಟಿವಲ್ ಆಯೋಜಿಸಲು ನಾವು ವಿಚಾರ ನಡೆಸುತ್ತಿದ್ದೇವೆ. ಸರ್ಕಾರದ ವತಿಯಿಂದ ಮ್ಯೂಜಿಕ್ ಫೆಸ್ಟಿವಲ್ ಆಯೋಜಿಸಿದರೆ ಸನ್ಬರ್ನ್ ಫೆಸ್ಟಿವಲ್ ಆಯೋಜನೆಗೆ ಸ್ಥಳಾವಕಾಶವಿರುವುದಿಲ್ಲ ಎಂದು ತಿಳಿಸಿದರು.
ರಾಜ್ಯ ಸರ್ಕಾರದ ವತಿಯಿಂದ ಹೊಸ ವರ್ಷ ಸಂಭ್ರಮಾಚರಣೆಯ ಸಂದರ್ಭದಲ್ಲಿ ಮ್ಯೂಜಿಕ್ ಫೆಸ್ಟಿವಲ್ ಆಯೋಜನೆಯಾದರೆ ಸನ್ ಬರ್ನ್
ನಂತಹ ಸಂಸ್ಥೆಗೆ ರಾಜ್ಯದಲ್ಲಿ ಮ್ಯೂಜಿಕ್ ಫೆಸ್ಟಿವಲ್ ಆಯೋಜನೆಗೆ ಅವಕಾಶವಿರುವುದಿಲ್ಲ. ಗೋವಾದಲ್ಲಿ ಯಾರೇ ಇಂತಹ ಫೆಸ್ಟಿವಲ್ ಆಯೋಜಿಸಲು ಬಯಸಿದರೆ ರಾಜ್ಯ ಪ್ರವಾಸೋದ್ಯಮ ಇಲಾಖೆಯ ಪೂರ್ವಾನುಮತಿ ಅಗತ್ಯವಾಗಿರುತ್ತದೆ ಎಂದು ಸಚಿವ ರೋಹನ್ ಖಂವಟೆ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ