ಕೋವಿಡ್ ಸೋಂಕು ಇಳಿಕೆ ಹಿನ್ನೆಲೆ: ಪ್ರವಾಸೋದ್ಯಮದತ್ತ ಒಲವು ತೋರಿದ ಸರ್ಕಾರ
Team Udayavani, Aug 15, 2021, 6:12 PM IST
ಪಣಜಿ: ಕೋವಿಡ್ ಸೋಂಕು ಇಳಿಕೆಯಾಗುತ್ತಿದ್ದಂತೆಯೇ ಗೋವಾ ರಾಜ್ಯ ಸರ್ಕಾರವು ರಾಜ್ಯದಲ್ಲಿ ಪ್ರವಾಸೋದ್ಯಮ ಮತ್ತು ಗಣಿಗಾರಿಕೆ ಆರಂಭಿಸಲು ಉತ್ಸುಕವಾಗಿದ್ದು, ಈ ನಿಟ್ಟಿನಲ್ಲಿ ದಿಟ್ಟ ಹೆಜ್ಜೆಯನ್ನಿಟ್ಟಿದೆ ಎಂದು ಗೋವಾ ರಾಜ್ಯಪಾಲರಾದ ಪಿ.ಎಸ್.ಶ್ರೀಧರನ್ ಪಿಳ್ಳೆ ನುಡಿದಿದ್ದಾರೆ.
75 ನೇಯ ಸ್ವಾತಂತ್ರ್ಯೋತ್ಸವದ ಅಂಗವಾಗಿ ರಾಜ್ಯದ ಜನತೆಗೆ ನೀಡಿರುವ ಸಂದೇಶದಲ್ಲಿ ರಾಜ್ಯಪಾಲರು- ಕಳೆದ ಒಂದು ವರ್ಷ ಕೋವಿಡ್ ಮಹಾಮಾರಿಯ ಸಂಕಷ್ಟ ಪರಿಸ್ಥಿತಿಯಲ್ಲೇ ಕಳೆದಿದ್ದೇವೆ. ಭಾರತ ದೇಶವು ಈ ಮಹಾಮಾರಿಯ ಮೊದಲ ಅಲೆಯನ್ನು ಧೈರ್ಯವಾಗಿ ಮತ್ತು ಯಶಸ್ವಿಯಾಗಿ ಎದುರಿಸಿದೆ. ಗೋವಾ ಸರ್ಕಾರವು ಕೂಡ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ನೇತೃತ್ವದಲ್ಲಿ ಕೋವಿಡ್ ಪರಿಸ್ಥಿತಿಯನ್ನು ಧೈರ್ಯದಿಂದ ಎದುರಿಸಿದೆ ಎಂದು ರಾಜ್ಯಪಾಲರು ನುಡಿದರು.
ಇದನ್ನೂ ಓದಿ:ಕಬಕ ಗ್ರಾ.ಪಂನಲ್ಲಿ ಗ್ರಾಮ ಸ್ವರಾಜ್ಯ ರಥ ಅಡ್ಡಿ – ಮೂವರು ವಶಕ್ಕೆ
ಗೋವಾದಲ್ಲಿ ಕೋವಿಡ್ ಲಸಿಕಾ ಕಾರ್ಯ ವೇಗವಾಗಿ ನಡೆಯುತ್ತಿದೆ. ಕೋವಿಡ್ ಎರಡೂ ಲಸಿಕೆ ಹಾಕಿಸಿಕೊಂಡವರು ಕೂಡ ಖಡ್ಡಾಯವಾಗಿ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಂಡು ಕೋವಿಡ್ ನಿಯಮಗಳನ್ನು ಪಾಲಿಸಲೇ ಬೇಕು ಎಂದು ರಾಜ್ಯಪಾಲರು ಅಭಿಪ್ರಾಯಪಟ್ಟರು.