ಮಹದಾಯಿ ನದಿ ಉಕ್ಕಿ ಮನೆ ಕಳೆದುಕೊಂಡವರ ಅಳಲು ಕೇಳುವವರರಿಲ್ಲ?
Team Udayavani, Aug 29, 2021, 4:06 PM IST
ಪಣಜಿ: ಗೌರಿಗಣೇಶ ಹಬ್ಬ ಸಮೀಪಿಸುತ್ತಿದೆ. ಆದರೆ ಕಳೆದ ಕೆಲ ದಿನಗಳ ಹಿಂದೆ ಮಹದಾಯಿ ನದಿ ಉಕ್ಕಿ ಉಂಟಾದ ಪ್ರವಾಹದಲ್ಲಿ ಹಲವು ಮನೆಗಳು ನೆಲಸಮವಾಗಿದೆ. ಆದರೆ ಇದುವರೆಗೂ ಗೋವಾ ಸರ್ಕಾರ ಇವರಿಗೆ ಮನೆ ನಿರ್ಮಿಸಿಕೊಡುವ ಕೆಲಸ ಮಾಡಿಲ್ಲ. ಇದರಿಂದಾಗಿ ಪ್ರಸಕ್ತ ವರ್ಷ ನಾವು ಗಣೇಶನನ್ನು ಎಲ್ಲಿ ಪೂಜಿಸುವುದು ಎಂದು ಈ ಎಲ್ಲಾ ಕುಟುಂಬಸ್ಥರು ತಮ್ಮ ಅಳಲನ್ನು ತೋಡಿಕೊಳ್ಳುತ್ತಿದ್ದಾರೆ.
ಕಳೆದ ಕೆಲ ದಿನಗಳ ಹಿಂದೆ ಮಹದಾಯಿ ನದಿ ಉಕ್ಕಿ ಹರಿದ ಸಂದರ್ಭದಲ್ಲಿ ಗೋವಾ ರಾಜ್ಯದಲ್ಲಿ ನೂರಾರು ಮನೆಗಳಿಗೆ ಹಾನಿಯಾಗಿದೆ. ಹಲವರು ಮನೆ ಕಳೆದುಕೊಂಡು ಬೀದಿಗೆ ಬರುವಂತಾಗಿದೆ. ಆದರೆ ಸರ್ಕಾರ ಈ ನಿರಾಶ್ರಿತರಿಗೆ ಕೂಡಲೇ ಮನೆ ನಿರ್ಮಿಸಿಕೊಡುವ ಯಾವುದೇ ಪ್ರಯತ್ನ ಮಾಡಿಲ್ಲ. ಇದರಿಂದಾಗಿ ಇದೀಗ ಗೌರಿ ಗಣೇಶ ಹಬ್ಬಕ್ಕೆ ನಾವು ಗಣೇಶನನ್ನು ಎಲ್ಲಿ ಪೂಜಿಸುವುದು ಎಂದು ಪೊಂಡಾ ತಾಲೂಕಿನ ಗಾಂಜೆ ಗ್ರಾಮದ ಹಿರಿಯ ನಾಗರಿಕ ಮಹಾದೇವ ವಿಠ್ಠಲ ಫಡತೆ ರವರು ರಾಜ್ಯ ಸರ್ಕಾರವನ್ನು ಪ್ರಶ್ನಿಸುವ ಮೂಲಕ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.
ಇದನ್ನೂ ಓದಿ:ವಿಚ್ಛೇದನ ಹಂತಕ್ಕೆ ಬಂದು ತಲುಪಿದ ನಾಗಚೈತನ್ಯ-ಸಮಂತಾ ದಾಂಪತ್ಯ ?
ಪ್ರವಾಹದಲ್ಲಿ ಮನೆ ಕಳೆದುಕೊಂಡ ಹಲವು ಕುಟುಂಬಗಳ ಸ್ಥಿತಿ ಸದ್ಯ ಹೇಳತೀರದಂತಾಗಿದೆ, ಈಗಲಾದರೂ ಎಚ್ಚೆತ್ತು ಸರ್ಕಾರ ಈ ನಿರಾಶ್ರಿತ ಕುಟುಂಬಗಳಿಗೆ ಕೂಡಲೇ ಮನೆ ನಿರ್ಮಿಸಿಕೊಡುವ ಕೆಲಸ ಮಾಡಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
MUST WATCH
ಹೊಸ ಸೇರ್ಪಡೆ
O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…
Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ
Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ
Muddebihal: ನೇಹಾ ಕೊಲೆ ಖಂಡಿಸಿ ಪ್ರತಿಭಟನೆ: ಮುಸ್ಲಿಂ ಮುಖಂಡರು ಭಾಗಿ
Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?