ಮಹದಾಯಿ ತೀರ ವಾಸಿಗಳ ಬದುಕಿಗೆ ಆಸರೆಯಾಗಿ : ಸರ್ಕಾರಕ್ಕೆ ಆಗ್ರಹ
Team Udayavani, Aug 1, 2021, 4:37 PM IST
ಪಣಜಿ : ಜುಲೈ 23 ರಂದು ಧಾರಾಕಾರ ಮಳೆಗೆ ಗೋವಾದಲ್ಲಿ ಮಹದಾಯಿ ನದಿಗೆ ಮಹಾಪುರ ಬಂದು ನದಿ ದಡದಲ್ಲಿದ್ದ ಸಾವಿರಾರು ಮನೆಗಳಿಗೆ ಹಾನಿಯಾಗಿದೆ. ಈ ಘಟನೆಯಲ್ಲಿ ಭಾರಿ ಪ್ರಮಾಣದ ಹಾನಿಯುಂಟಾಗಿರುವುದು ಮಾತ್ರವಲ್ಲದೆಯೇ ಹಲವು ಕುಟುಂಬಗಳು ಮನೆ ಕಳೆದುಕೊಂಡು ಬೀದಿಗೆ ಬಂದಿವೆ.
ಇದನ್ನೂ ಓದಿ : ಫ್ರೆಂಡ್ ಶಿಪ್ ಡೇ ವಿಡಿಯೋ ಪೋಸ್ಟ್ ಮಾಡಿದ ಯುವಿ: ಧೋನಿ, ಕೊಹ್ಲಿಗಿಲ್ಲ ಜಾಗ!
ಮಹದಾಯಿ ನದಿ ತೀರದಲ್ಲಿರುವ ಸೋನಾಳೆ, ಉಜಗಾಂವ, ಖಾಂಡೆಪಾರ್ ಊರುಗಳಿಗೆ ಹೆಚ್ಚಿನ ಪರಿಣಾಮವುಂಟಾಗಿದೆ. ಈ ಭಾಗದಲ್ಲಿ ಹಲವು ಮನೆಗಳು ಪ್ರವಾಹದಲ್ಲಿ ಕೊಚ್ಚಿಹೋಗಿದೆ. ಇದರಿಂದಾಗಿ ಈ ಭಾಗದಲ್ಲಿ ವಾಸಿಸುತ್ತಿದ್ದ ಹಲವು ಬಡ ಕುಟುಂಬಳಿಗೆ ಆಸರೆ ಇಲ್ಲದಂತಾಗಿದೆ.
ಈ ಬಗ್ಗೆ ಪ್ರತಿಕ್ರಿಯಿಸಿದ ವಾಳಪೈ ಭಾಗದ ಸಾಮಾಜಿಕ ಹೋರಾಟಗಾರ ದೇವೇಂದ್ರ ಗಾವಕರ್, ಪ್ರವಾಹದಲ್ಲಿ ಮನೆ ಕಳೆದುಕೊಂಡವರಿಗೆ 2 ಲಕ್ಷ ರೂ ಆರ್ಥಿಕ ಸಹಾಯ ನೀಡುವುದಾಗಿ ಸರ್ಕಾರ ಘೋಷಿಸಿದೆ. ಆದರೆ ಈ ಸಹಾಯಧನ ತೀರಾ ಕಡಿಮೆ ಎಂದು ಅಭಿಪ್ರಾಯಪಟ್ಟಿದ್ದಲ್ಲದೇ, ಸರ್ಕಾರವು ಮನೆ ಕಳೆದುಕೊಂಡವರಿಗೆ ಕೂಡಲೆ ಮನೆ ನಿರ್ಮಿಸಿ ಕೊಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಸದ್ಯ ಸಿಮೆಂಟ್, ರೇತಿ, ಮತ್ತು ಕಟ್ಟಡ ಕಾರ್ಮಿಕರ ವೇತನ ತೀರಾ ಹೆಚ್ಚಳವಾಗಿದೆ. ಇಂತಹ ಸಂದರ್ಭದಲ್ಲಿ 2 ಲಕ್ಷ ರೂ ಆರ್ಥಿಕ ಸಹಾಯ ತೀರಾ ಕಡಿಮೆ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ : ಮೀನು, ಕೋಳಿಗಿಂತ ಹೆಚ್ಚು ಗೋಮಾಂಸವನ್ನು ತಿನ್ನಬೇಕು ಎಂದ ಬಿಜೆಪಿ ಸಚಿವ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್