ಗಣಿಗಾರಿಕೆ ಪುನರಾರಂಭಗೊಳ್ಳಲು ಕೇಂದ್ರ ಸರ್ಕಾರ ಎಲ್ಲಾ ರೀತಿಯ ಸಹಕಾರ ನೀಡಲಿದೆ:ಶ್ರೀಪಾದ ನಾಯ್ಕ
Team Udayavani, Sep 1, 2021, 1:33 PM IST
ಪಣಜಿ: ಗೋವಾ ರಾಜ್ಯದಲ್ಲಿ ಗಣಿಗಾರಿಕೆ ಪುನರಾರಂಭಗೊಳ್ಳಬೇಕು. ಇದಕ್ಕೆ ಸರ್ವೋಚ್ಛ ನ್ಯಾಯಾಲಯದಲ್ಲಿರುವ ಪ್ರಕರಣ ಅತ್ಯರ್ಥವಾಗಬೇಕು ಅಥವಾ ಕೇಂದ್ರ ಸರ್ಕಾರ ಸ್ಥಾಪಿಸಲು ಮುಂದಾಗಿರುವ ಖನಿಜ ಮಹಾಮಂಡಳ ಸ್ಥಾಪನೆಯಾಗಬೇಕು, ಗಣಿಗಾರಿಕೆ ಪುನರಾರಂಭಗೊಳ್ಳಲು ಇವು ಎರಡೇ ಮಾರ್ಗವಿದೆ. ಗಣಿಗಾರಿಕೆ ಪುನರಾರಂಭಗೊಳ್ಳಲು ಕೇಂದ್ರ ಸರ್ಕಾರವು ಎಲ್ಲಾ ರೀತಿಯ ಸಹಕಾರ ನೀಡಲಿದೆ ಎಂದು ಕೇಂದ್ರ ಸಚಿವ ಶ್ರೀಪಾದ ನಾಯ್ಕ ವಿಶ್ವಾಸ ವ್ಯಕ್ತಪಡಿಸಿದರು.
ಪಣಜಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು- ಗಣಿಗಾರಿಕೆ ಸಮಸ್ಯೆ ಬಗೆಹರಿಸಲು ಕೇಂದ್ರ ಸರ್ಕಾರವು ಒಂದು ಸಚಿವ ಸಮೀತಿಯನ್ನು ಸ್ಥಾಪಿಸಿದೆ. ಇತ್ತೀಚೆಗಷ್ಟೇ ನಡೆದ ಈ ಸಮೀತಿಯ ಸಭೆಯಲ್ಲಿ ಕೇಂದ್ರ ಗೃಹಮಂತ್ರಿ ಅಮಿತ್ ಶಾ ಉಪಸ್ಥಿತರಿದ್ದರು ಎಂದು ಕೇಂದ್ರ ಸಚಿವ ಶ್ರೀಪಾದ ನಾಯ್ಕ ಮಾಹಿತಿ ನೀಡಿದರು.
ಗೋವಾದಲ್ಲಿ ಗಣಿಗಾರಿಕೆ ಪುನರಾರಂಭಿಸಲು ಗಣಿ ನಿಯಮ, ಖಾಯ್ದೆಯ ತಿದ್ಧುಪಡಿ ಮಾಡಬೇಕು ಎಂದು ಕೆಲವರು ಅಭಿಪ್ರಾಯಪಡುತ್ತಾರೆ. ಇದಕ್ಕಾಗಿ ಟೀಕೆಯನ್ನು ಮಾಡಲಾಗುತ್ತಿದೆ. ಯಾವುದೇ ಕಾಯ್ದೆಯನ್ನು ಒಂದು ರಾಜ್ಯಕ್ಕಾಗಿ ತಿದ್ದುಪಡಿ ಮಾಡಲಾಗುವುದಿಲ್ಲ. ಖಾಯ್ದೆ ತಿದ್ದುಪಡಿ ಮಾಡಿದರೆ ಇತರ ರಾಜ್ಯಗಳ ಗಣಿಗಾರಿಕೆ ಮೇಲೆ ಯಾವ ಪರಿಣಾಮವಾಗಲಿದೆ ಎಂಬುದನ್ನು ಕೂಡ ಕೇಂದ್ರ ಸರ್ಕಾರ ವಿಚಾರ ಮಾಡಬೇಕಾಗುತ್ತದೆ ಎಂದು ಕೇಂದ್ರ ಸಚಿವ ಶ್ರೀಪಾದ ನಾಯ್ಕ ನುಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ