ಗೋವಾ : ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೇಸ್ ಪ್ರತಿಭಟನೆ
Team Udayavani, Jun 11, 2021, 8:05 PM IST
ಪಣಜಿ: ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಭಾರತದ ಜನರಿಗೆ ಹೆಚ್ಚಿನ ಬೆಲೆಯಲ್ಲಿ ಪೆಟ್ರೋಲ್ ಮಾರುವ ಮೂಲಕ ಮೋಸ ಮತ್ತು ಲೂಟಿ ಮಾಡುತ್ತಿದೆ ಎಂದು ಗೋವಾ ಪ್ರದೇಶ ಕಾಂಗ್ರೇಸ್ ಸಮೀತಿ ಅಧ್ಯಕ್ಷ ಗಿರೀಶ್ ಚೋಡಣಕರ್ ಆರೋಪಿಸಿದ್ದಾರೆ.
ದೇಶಾದ್ಯಂತ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೇಸ್ ಪ್ರತಿಭಟನೆ ನಡೆಸುತ್ತಿರುವ ಒಂದು ಭಾಗವಾಗಿ ಪಣಜಿಯಲ್ಲಿ ಕಾಂಗ್ರೇಸ್ ಸಮೀತಿ ಆಯೋಜಿಸಿದ್ದ ಪ್ರತಿಭಟನೆಯ ಸಂದರ್ಭದಲ್ಲಿ ಅವರು ಮಾತನಾಡಿದರು.
ಇದನ್ನೂ ಓದಿ : ಮಮತಾ ಬ್ಯಾನರ್ಜಿ ನಮ್ಮ ನಾಯಕಿ; ಬಿಜೆಪಿ ತೊರೆದ ರಾಯ್ ಮತ್ತೆ ಟಿಎಂಸಿ ಸೇರ್ಪಡೆ
ಮೋದಿ ಸರ್ಕಾರವು ಪೆಟ್ರೋಲ್ ನಿಂದ ಹಣ ಸಂಗ್ರಿಸುತ್ತಿದೆ. ಪ್ರತಿ ಲೀಟರ್ ಗೆ 35.63 ರೂ ಇರುವ ಪೆಟ್ರೋಲ್ ಗೆ ಸರಕು, ಕಸ್ಟನ್,ಸುಂಕ,ಕೃಷಿ ಮೂಲ ಸೌಕರ್ಯ ಸೆಸ್, ರಸ್ತೆ ಮತ್ತು ಮೂ ಸೌಕರ್ಯ ಸೆಸ್, ರಾಜ್ಯ ವ್ಯಾಟ್ ಮತ್ತು ಇತರ ಶುಲ್ಕವನ್ನು ಮೋದಿ ಸರ್ಕಾರ ವಿಧಿಸುತ್ತಿದೆ. ಇದರಿಂದಾಗಿ 35.63 ರೂ ಇರುವ ಪೆಟ್ರೋಲ್ನ್ನು 93.80 ರೂಗೆ ಮತ್ತು 38.16 ರೂಗಳಿರುವ ಡೀಸೆಲ್ನ್ನು 91.50 ರೂಗಳಿಗೆ ಮಾರಾಟ ಮಾಡಲಾಗುತ್ತಿದೆ. ಇದು ಬಹಿರಂಗವಾಗಿ ನಡೆಯುತ್ತಿರುವ ಲೂಟಿಯಾಗಿದೆ. 2014 ರಿಂದ ಕೇಂದ್ರದಲ್ಲಿ ಪ್ರಧಾನಿ ಮೋದಿ ಸರ್ಕಾರ ಅಧಿಕಾರಕ್ಕೆ ಬಂದಾಗಿಂದ 22 ಲಕ್ಷ 70 ಸಾವಿರ ಕೋಟಿ ರೂ ದೇಶದ ಜನರಿಂದ ದೋಚಲಾಗಿದೆ ಎಂದು ಗಿರೀಶ್ ಚೋಡಣಕರ್ ಆರೋಪಿಸಿದರು.
ಈ ಸಂದರ್ಭದಲ್ಲಿ ಪ್ರತಿಪಕ್ಷದ ನಾಯಕ ದಿಗಂಬರ್ ಕಾಮತ್ ಸೇರಿದಂತೆ ರಾಜ್ಯ ಕಾಂಗ್ರೇಸ್ ನಾಯಕರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಇದನ್ನೂ ಓದಿ : ಆಂಬ್ಯುಲೆನ್ಸ್ ಓಡಿಸಿ ಗಮನ ಸೆಳೆದ ಖಾನಾಪುರ ಶಾಸಕಿ ಡಾ. ಅಂಜಲಿ ನಿಂಬಾಳ್ಕರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
MUST WATCH
ಹೊಸ ಸೇರ್ಪಡೆ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ