ಗೋವಾ ಮತ್ತೆ ಮಹಾ ತಗಾದೆ
Team Udayavani, Nov 5, 2019, 6:45 AM IST
ಪಣಜಿ: ಕಳಸ ಬಂಡೂರಿ ಕುಡಿಯುವ ನೀರಿನ ಯೋಜನೆಗೆ ಕೇಂದ್ರ ಪರಿಸರ ಇಲಾಖೆ ಅನುಮತಿ ನೀಡಿರುವುದನ್ನು ಅರಗಿಸಿಕೊಳ್ಳಲಾಗದ ಗೋವಾ ಸರಕಾರ ಕ್ಯಾತೆ ಮುಂದು ವರಿಸಿದೆ. ಈ ಸಂಬಂಧ ಗೋವಾ ಮುಖ್ಯಮಂತ್ರಿ ನೇತೃತ್ವದ ಸರ್ವ ಪಕ್ಷಗಳ ನಿಯೋಗವು ಕೇಂದ್ರ ಸಚಿವ ಪ್ರಕಾಶ್ ಜಾಬ್ಡೇಕರ್ ಅವರನ್ನು ಸೋಮವಾರ ಭೇಟಿ ಮಾಡಿ ಅನುಮತಿಯನ್ನು ಹಿಂಪಡೆಯುವಂತೆ ಮನವಿ ಸಲ್ಲಿಸಿದೆ.
ಭೇಟಿ ಬಳಿಕ ಪತ್ರಿಕಾ ಪ್ರಕಟನೆ ನೀಡಿರುವ ಗೋವಾ ಮುಖ್ಯ ಮಂತ್ರಿ ಪ್ರಮೋದ್ ಸಾವಂತ್, ಇನ್ನು 10 ದಿನಗಳೊಳಗೆ ಈ ಸಮಸ್ಯೆ ಯನ್ನು ಸರಿಪಡಿಸುವುದಾಗಿ ಜಾಬ್ಡೇಕರ್ ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ. ಈ ವೇಳೆ ಮಾತನಾಡಿರುವ ಗೋವಾ ವಿಪಕ್ಷದ ನಾಯಕ ದಿಗಂಬರ್ ಕಾಮತ್, ಮಹದಾಯಿ ನದಿ ವಿವಾದ ಕೋರ್ಟ್ನಲ್ಲಿದೆ. ಈ ವಿಚಾರದಲ್ಲಿ ಕೇಂದ್ರ ಸಚಿವರು ನಮಗೆ ನ್ಯಾಯ ಒದಗಿಸಬೇಕು. ಕೂಡಲೇ ಅನುಮತಿ ಪತ್ರವನ್ನು ಹಿಂದಕ್ಕೆ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್