ಕೋವಿಡ್ ಹೊಡೆತಕ್ಕೆ ನಲುಗಿದ ಗೋವಾ ಪ್ರವಾಸೋದ್ಯಮ
Team Udayavani, May 9, 2021, 3:54 PM IST
ಪಣಜಿ: ಗೋವಾ ರಾಜ್ಯ ಸರ್ಕಾರಕ್ಕೆ ಪ್ರತಿವರ್ಷ ಗಣಿಗಾರಿಕೆಯಿಂದ ಮತ್ತು ಪ್ರವಾಸೋದ್ಯಮದಿಂದ ಕೋಟ್ಯಾಂತರ ರೂ ಆದಾಯ ಲಭಿಸುತ್ತದೆ. ಆದರೆ, ಪ್ರಸಕ್ತ ವರ್ಷ ಕೋವಿಡ್ ಮಹಾಮಾರಿಯಿಂದಾಗಿ ಪ್ರವಾಸೋದ್ಯಮ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಪ್ರಸಕ್ತ ವರ್ಷ ಸುಮಾರು ಶೇ 50 ಪ್ರವಾಸಿಗರು ಇಳಿಮುಖವಾಗಿದ್ದು, ವಿದೇಶಿ ಪ್ರವಾಸಿಗರ ಪತ್ತೆಯೇ ಇಲ್ಲ ಎಂಬಂತಾಗಿದೆ. ಸದ್ಯ ಗೋವಾ ರಾಜ್ಯದಲ್ಲಿ ನಿಷೇಧಾಜ್ಞೆ ಜಾರಿಗೊಂಡಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿನ ಪ್ರವಾಸಿ ತಾಣಗಳಂತೂ ಬಿಕೊ ಎನ್ನುತ್ತಿದೆ.
ಗೋವಾದ ಬೀಚ್ಗಳಲ್ಲಿ ಡಿಸೆಂಬರ್ 24 ರಿಂದ ಜನವರಿ 2 ರವರೆಗೆ ಹೆಚ್ಚಿನ ಸಂಖ್ಯೆಯಲ್ಲಿ ದೇಶಿಯ ಪ್ರವಾಸಿಗರು ಆಗಮಿಸುತ್ತಿದ್ದರು. ಈ ನಂತರ ಕರೋನಾ ಭೀತಿಯ ಹಿನ್ನೆಲೆಯಲ್ಲಿ ಗೋವಾಕ್ಕೆ ಆಗಮಿಸುವ ಪ್ರವಾಸಿಗರಲ್ಲಿ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ. ಸದ್ಯ ಗೋವಾದಲ್ಲಿ ಪ್ರವಾಸಿಗರು ಸಂಪೂರ್ಣ ಖಾಲಿಯಾಗಿದ್ದಾರೆ. ಗೋವಾದಲ್ಲಿ ಕರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆಯೇ ಮತ್ತು ವಿವಿಧ ರಾಜ್ಯಗಳಲ್ಲಿ ಕರೋನಾ ನಿರ್ಬಂಧ ಹೆಚ್ಚಾಗುತ್ತಿದ್ದಂತೆಯೇ ಗೋವಾಕ್ಕೆ ಆಗಮಿಸುವ ಪ್ರವಾಸಿಗರ ಸಂಖ್ಯೆಯಲ್ಲಿ ಭಾರಿ ಇಳಿಕೆಯಾಗಿದೆ. ಇದರಿಂದಾಗಿ ಪ್ರವಾಸೋದ್ಯಮ ಅವಲಂಭಿತ ಎಲ್ಲ ಉದ್ಯೋಗಗಳು ಸಂಪೂರ್ಣ ಬಂದ್ ಆಗಿದೆ.
ರಾಜ್ಯದಲ್ಲಿ ಪ್ರವಾಸೋದ್ಯಮ ಅವಲಂಭಿತ ಉದ್ಯೋಗಗಳಲ್ಲಿ ಕೆಲಸ ನಿರ್ವಹಿಸುವ ಕಾರ್ಮಿಕರು ಶೇ 80 ರಷ್ಟು ಹೊರ ರಾಜ್ಯದವರೇ ಆಗಿದ್ದರು. ಆದರೆ, ಗೋವಾದಲ್ಲಿ ಸದ್ಯ ಪ್ರವಾಸೋದ್ಯಮ ಅವಲಂಭಿತ ಉದ್ಯೋಗಗಳು ಬಂದ್ ಆಗಿರುವುದರಿಂದ ಹೊರರಾಜ್ಯದ ಕೂಲಿ ಕಾರ್ಮಿಕರಿಗೆ ಕೆಲಸವಿಲ್ಲದಂತಾಗಿದೆ.
ಎರಡು ವರ್ಷದ ಪ್ರವಾಸೋದ್ಯಮ ಸೀಜನ್ನಲ್ಲಿ ಭಾರಿ ನಷ್ಠ…!
ಪ್ರತಿ ವರ್ಷ ಗೋವಾ ರಾಜ್ಯದಲ್ಲಿ ಅಕ್ಟೊಬರ್ ನಿಂದ ಏಪ್ರಿಲ್ ವರೆಗೆ ಪ್ರವಾಸೋದ್ಯಮ ಸೀಜನ್ ಆಗಿರುವುದರಿಂದ ದೇಶ ವಿದೇಶಿಯ ಪ್ರವಾಸಿಗರು ಲಕ್ಷಾಂತರ ಸಂಖ್ಯೆಯಲ್ಲಿ ಆಗಮಿಸುತ್ತಿದ್ದರು. ಆದರೆ ಕಳೆದ ವರ್ಷ ಹಾಗೂ ಪ್ರಸಕ್ತ ವರ್ಷವೂ ಕೂಡ ಲಾಕ್ಡೌನ್ ಹಿನ್ನೆಲೆಯಲ್ಲಿ ಪ್ರವಾಸೋದ್ಯಮ ಅವಲಂಭಿತ ಉದ್ಯೋಗಗಳು ಭಾರಿ ನಷ್ಠ ಅನುಭವಿಸುವಂತಾಗಿದೆ. ಇಷ್ಟೇ ಅಲ್ಲದೆಯೇ ಹೆಚ್ಚಿನ ಸಂಖ್ಯೆಯಲ್ಲಿ ವಿವಿಧ ರಾಜ್ಯಗಳ ಕಾರ್ಮಿಕರು ಕೂಡ ಕೆಲಸ ಕಳೆದುಕೊಳ್ಳುವಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
MUST WATCH
ಹೊಸ ಸೇರ್ಪಡೆ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ