ಪಣಜಿ: ಪ್ರವಾಸಿಗರು ಪ್ರವಾಸೋದ್ಯಮ ಆನಂದಿಸುವುದರೊಂದಿಗೆ ಮುಂಜಾನೆ ಯೋಗ
Team Udayavani, Jan 23, 2023, 3:04 PM IST
ಪಣಜಿ: ದೇಶ-ವಿದೇಶಗಳಿಂದ ಪ್ರವಾಸಿಗರು ಗೋವಾದ ಕರಾವಳಿ ಪ್ರದೇಶಗಳಿಗೆ ಪ್ರವಾಸೋದ್ಯಮವನ್ನು ಆನಂದಿಸಲು ಬರುತ್ತಾರೆ. ಆದರೆ ಕೆಲವು ಪ್ರವಾಸಿಗರು ಪ್ರವಾಸೋದ್ಯಮವನ್ನು ಆನಂದಿಸುವುದರೊಂದಿಗೆ ತಮ್ಮ ಜೀವನ, ಆರೋಗ್ಯವನ್ನು ಆರೋಗ್ಯಕರ ಮತ್ತು ಮುಕ್ತವಾಗಿಡಲು ಕರಾವಳಿ ಪ್ರದೇಶಗಳಲ್ಲಿ ಮುಂಜಾನೆ ಯೋಗ ಮಾಡುವುದನ್ನು ಕಾಣಬಹುದು.
ಈ ದೃಶ್ಯ ಸದ್ಯ ಗೋವಾದ ಮಾಂದ್ರೆ ಕ್ಷೇತ್ರದ ಮೊರ್ಜಿ, ಅಶ್ವೆ, ಮಾಂದ್ರೆ, ಹರ್ಮಲ್ ಕರಾವಳಿ ಭಾಗಗಳಲ್ಲಿ ಕಂಡು ಬರುತ್ತಿದೆ. ‘ಯೋಗ’ ಭಾರತವು ಜಗತ್ತಿಗೆ ನೀಡಿದ ಕೊಡುಗೆಯಾಗಿದೆ. ಈ ಕುರಿತು ಮಾತನಾಡಿರುವ ರಷ್ಯಾದ ಪ್ರಜೆ ಟಿಟು ಅಲೆಕ್ಸಾಂಡರ್- ಸದಾ ಯೋಗ ಮಾಡಿ ನಿಮ್ಮ ಜೀವನವನ್ನು ಆರೋಗ್ಯಕರವಾಗಿ ಮತ್ತು ಸಂತೋಷದಿಂದ ಇಟ್ಟುಕೊಳ್ಳಿ. ಅಲ್ಲದೆ ವಿವಿಧ ರೋಗಗಳಿಂದ ದೂರವಿರಿ ಎಂದು ಹೇಳಿದ್ದಾರೆ.
ನಿಯಮಿತವಾಗಿ ಯೋಗಾಭ್ಯಾಸ ಮಾಡುವ ವ್ಯಕ್ತಿಯು ಸದೃಢವಾದ ದೇಹ ಮತ್ತು ಸಂತೋಷದ ಮನಸ್ಸನ್ನು ಹೊಂದಿರುತ್ತಾನೆ. ಯೋಗವು ನಮ್ಮ ದೇಹ, ಮನಸ್ಸು ಮತ್ತು ಆತ್ಮವನ್ನು ಒಟ್ಟಿಗೆ ಸಮತೋಲನಗೊಳಿಸುವ ವಿಜ್ಞಾನವಾಗಿದೆ. ಯೋಗವು ಪ್ರಾಚೀನ ಭಾರತದಲ್ಲಿ ಹುಟ್ಟಿಕೊಂಡ ಆಧ್ಯಾತ್ಮಿಕ ಮತ್ತು ಭೌತಿಕ ವಿಜ್ಞಾನವಾಗಿದೆ. ಪ್ರಪಂಚದಾದ್ಯಂತ ಯೋಗಕ್ಕೆ ಪ್ರಾಮುಖ್ಯತೆ ನೀಡಲಾಗಿದೆ. ಅದಕ್ಕಾಗಿಯೇ ಎಲ್ಲರೂ ಬೆಳಿಗ್ಗೆ ಯೋಗ, ಸೂರ್ಯ ನಮಸ್ಕಾರ ಮಾಡುವುದನ್ನು ಕಾಣಬಹುದು.
ಮಾಂದ್ರೆ ಕ್ಷೇತ್ರದ ಕರಾವಳಿ ಪ್ರದೇಶದಲ್ಲಿ ಪ್ರತಿದಿನ ಬೆಳಿಗ್ಗೆ ಜನರು ವಾಕ್ ಮಾಡಲು ಬರುತ್ತಾರೆ. ಕೆಲವರು ಓಡುತ್ತಿರುವುದನ್ನು ಕಂಡರೆ ಇನ್ನು ಕೆಲವರು ವಿವಿಧ ರೀತಿಯ ವ್ಯಾಯಾಮಗಳನ್ನು ಮಾಡುತ್ತಿರುವುದು ಕಂಡುಬರುತ್ತದೆ. ಗೋವಾಕ್ಕೆ ಬಂದ ವಿದೇಶಿ ಪ್ರವಾಸಿಗರು ಯೋಗದಲ್ಲಿ ಮಗ್ನರಾಗಿದ್ದಾರೆ. ಅವರು ಮರಳಿನ ಮೇಲೆ ಚಾಪೆ ಹಾಕಿಕೊಂಡು ಯೋಗ ಮಾಡುತ್ತಾರೆ. ನಿರ್ದಿಷ್ಟವಾಗಿ ಹೇಳುವುದಾದರೆ, ಈ ಪ್ರತಿಯೊಬ್ಬ ಪ್ರವಾಸಿಗರ ಆರೋಗ್ಯ ಮತ್ತು ದೈಹಿಕ ಸ್ಥಿತಿಯು ಬಲವಾಗಿರುವುದು ಕಂಡುಬರುತ್ತದೆ. ಮಹಿಳಾ ಪ್ರವಾಸಿಗರೂ ಯೋಗ ಮಾಡುವ ಮೂಲಕ ಆರೋಗ್ಯಕ್ಕೆ ಆದ್ಯತೆ ನೀಡುವುದು ಕಂಡುಬರುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ