4 ಲವರ್‌ಗಳ ನೆರವಿನಲ್ಲಿ ಪತಿಯ ಕೊಂದು 3 ತುಂಡು ಮಾಡಿದ ಗೋವಾ ಮಹಿಳೆ


Team Udayavani, May 10, 2018, 3:35 PM IST

Goa-murder-700.jpg

ಮಾರ್ಗೋವಾ/ಕ್ವೆಪೆ : ಕರ್ನಾಟಕದ ಬೈಲಹೊಂಗಲದ 38ರ ಹರೆಯದ ತನ್ನ ಪತಿ ಬಸವರಾಜ್‌ ಬಾರಿಕಿ ಎಂಬಾತನನ್ನು ಸ್ಕೆಚ್‌ ಹಾಕಿ ಕುಚೋರಿಂ ನಲ್ಲಿ ಫ್ಲಾಟ್‌ ಒಂದರಲ್ಲಿ ಕೊಲೆಗೈದ ಆರೋಪದ ಮೇಲೆ 30ರ ಹರೆಯದ ಕಲ್ಪನಾ ಬಾರಿಕಿ ಎಂಬ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.

ಪತಿಯನ್ನು ಕೊಂದ ಬಳಿಕ ಆತನ ಮೃತ ದೇಹವನ್ನು ಪತ್ನಿ ಕಲ್ಪನಾ ತನ್ನ ನಾಲ್ವರು ಲವ್ವರ್‌ ಗಳ ನೆರವಿನಲ್ಲಿ  ಮೂರು ತುಂಡು ಮಾಡಿ ಗೋಣಿ ಚೀಲದಲ್ಲಿ ಅವುಗಳನ್ನು ತುಂಬಿ ಗೋವಾ-ಕರ್ನಾಟಕ ಗಡಿಯಲ್ಲಿನ ಅನ್‌ಮೋಡ್‌ ಘಾಟ್‌ ಪ್ರದೇಶದ ಮೂರು ವಿಭಿನ್ನ ತಾಣಗಳಲ್ಲಿ  ಎಸೆದು ವಿಲೇವಾರಿ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. 

ಎಪ್ರಿಲ್‌ 1ರಂದು ನಡೆದ ಈ ಕೊಲೆ ಕೃತ್ಯದ ಪ್ರತ್ಯಕ್ಷದರ್ಶಿಯೋರ್ವ ಎರಡು ದಿನಗಳ ಹಿಂದಷ್ಟೇ  ಧೈರ್ಯವಹಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದ. ಇಲ್ಲದಿದ್ದರೆ ಈ ಕೊಲೆ ಕೃತ್ಯವು ಯಾರ ಗಮನಕ್ಕೂ ಬಾರದೇ ಮುಚ್ಚಿಹೋಗುವ ಎಲ್ಲ  ಸಾಧ್ಯತೆ ಇತ್ತು ಎನ್ನಲಾಗಿದೆ.

ಮೃತ ವ್ಯಕ್ತಿಯ ಕುಟುಂಬದ ಯಾವುದೇ ಸದಸ್ಯ ಗೋವೆಯಲ್ಲಿ ನೆಲೆಸಿಲ್ಲವಾದ್ದರಿಂದ ಮೃತ ವ್ಯಕ್ತಿ ಬಸವರಾಜ್‌ ಅದೃಶ್ಯವಾಗಿದ್ದುದು ಯಾರ ಗಮನಕ್ಕೂ ಬರುವ ಸಾಧ್ಯತೆ ಇರಲಿಲ್ಲ. ಹಾಗೆಯೇ ವ್ಯಕ್ತಿ ನಾಪತ್ತೆಯಾದ ಬಗ್ಗೆ ಪೊಲೀಸರಲ್ಲಿ ಯಾವುದೇ ದೂರು ಕೂಡ ದಾಖಲಾಗಿರಲಿಲ್ಲ.

ಬಸವರಾಜ್‌ ಕೊಲೆಯು ಸಂಪೂರ್ಣವಾಗಿ ಆತನ ಪತ್ನಿಯ ಅನೈತಿಕ ಸಂಬಂಧದ ಫ‌ಲಶ್ರುತಿಯಾಗಿದೆ ಎಂದು ದಕ್ಷಿಣ ಗೋವಾ ಎಸ್‌ಪಿ ಅರವಿಂದ ಗವಾಸ್‌ ಹೇಳಿದ್ದಾರೆ.

ಬಸವರಾಜ್‌ ಕೊಲೆಗೆ ಮತ್ತು ಆತನ ಮೃತ ದೇಹವನ್ನು ವಿಲೇವಾರಿ ಮಾಡಲು ನೆರವಾದ ಎಲ್ಲ  4 ಮಂದಿಯೊಂದಿಗೆ ಆತನ ಪತ್ನಿ ಕಲ್ಪನಾಗೆ ಅನೈತಿಕ ಸಂಬಂಧ ಇತ್ತು. ಇವರೆಲ್ಲರೂ ಜತೆಗೂಡಿ ಬಸವರಾಜ್‌ನನ್ನು ಮುಗಿಸಿ ಬಿಡುವ ಸ್ಕೆಚ್‌ ಹಾಕಿದ್ದರು. 

ಉತ್ತರ ಗೋವೆಯಲ್ಲಿ  ಟ್ಯಾಕ್ಸಿ ಚಾಲಕನಾಗಿ ದುಡಿಯುತ್ತಿದ್ದ ಬಸವರಾಜ್‌ ಹದಿನೈದು ದಿನಗಳಿಗೊಮ್ಮೆ  ಮನೆಗೆ ಬರುತ್ತಿದ್ದ. ಪತ್ನಿಗೆ ಅನೈತಿಕ ಸಂಬಂಧ ಇರುವ ಬಗ್ಗೆ ಶಂಕೆ ಹೊಂದಿದ್ದ ಆತ ಆಕೆಯೊಂದಿಗೆ ಆಗೀಗ ಎಂಬಂತೆ ಜಗಳ ತೆಗೆಯುತ್ತಿದ್ದ ಎಂದು ಕಲ್ಪನಾಳನ್ನು  ತನಿಖೆಗೆ ಗುರಿಪಡಿಸಿ ಮಾಹಿತಿ ಕಲೆ ಹಾಕಿರುವ ಗವಾಸ್‌ ಹೇಳಿದರು. 

ಪತಿ ಬಸವರಾಜ್‌ ಕೊಲೆಗೆ ನೆರವಾದ ಪತ್ನಿ ಕಲ್ಪನಾಳ ನಾಲ್ವರು ಸಹವರ್ತಿಗಳ ಪೈಕಿ ಮೂವರಾದ ರಾಜಸ್ಥಾನದ ಸುರೇಶ್‌ ಕುಮಾರ್‌, ಮಾರ್ಗೋವಾದ ಆಕ್ವೇಮ್‌ ನ ಪಂಕಜ್‌ ಪವಾರ್‌ ಮತ್ತು ಕುಚೋರಿಂ ಕಾಕೋಡ ದ ಅಬ್ದುಲ್‌ ಶೇಖ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನೊಬ್ಬನಿಗಾಗಿ ಶೋಧ ಕಾರ್ಯ ನಡೆದಿದೆ.

ಪತಿ ಬಸವರಾಜ್‌ ತನ್ನೊಂದಿಗೆ ಜಗಳ ತೆಗೆದ ಎಪ್ರಿಲ್‌ 1ರಂದು ಕಲ್ಪನಾ ಆತನನ್ನು ಕೊಲ್ಲುವ ಸ್ಕೆಚ್‌ ಹಾಕಲು ತನ್ನ ಐವರು ಸಹವರ್ತಿಗಳನ್ನು ತನ್ನ ಫ್ಲಾಟಿಗೆ ಕರೆಸಿಕೊಂಡು ಪ್ಲಾನ್‌ ಹಾಕಿದ್ದಳು. ಅಂತೆಯೇ ಕೊಲೆಗೀಡಾದ ಬಸವರಾಜ್‌ನ ಮೃತ ದೇಹವನ್ನು ಅವರು ಮೂರು ತುಂಡು ಮಾಡಿ ಗೋಣಿ ಚೀಲದಲ್ಲಿ ತುಂಬಿಸಿ, ಮೂರು ಪ್ರತ್ಯೇಕ ತಾಣಗಳಲ್ಲಿ ಎಸೆದು ವಿಲೇವಾರಿ ಮಾಡಿದರು. ಈ ಕೃತ್ಯಕ್ಕೆ ಬಳಸಲಾದ ವಾಹನವನ್ನು ಪೊಲೀಸರು ಇನ್ನಷ್ಟೇ ವಶಪಡಿಸಿಕೊಳ್ಳಬೇಕಿದೆ. 

ಟಾಪ್ ನ್ಯೂಸ್

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.