ಕಾವೇರಿ ಮಡಿಲಿಗೆ ಗೋದಾವರಿ!


Team Udayavani, Nov 24, 2017, 6:00 AM IST

godavari.jpg

ಚೆನ್ನೈ: ಕಾವೇರಿ ನೀರಿಗಾಗಿ ಕರ್ನಾಟಕ ಮತ್ತು ತಮಿಳುನಾಡಿನ ಸಮಸ್ಯೆಯನ್ನು ನೀಗಿಸಲು ಕೇಂದ್ರ ಸರಕಾರ ಹೊಸದೊಂದು ಯೋಜನೆ ರೂಪಿಸಿದೆ.

ಕೇಂದ್ರ ಜಲ ಸಂಪನ್ಮೂಲ ಸಚಿವ ನಿತಿನ್‌ ಗಡ್ಕರಿ ಪ್ರಸ್ತಾವದಂತೆ ಈ ಯೋಜನೆ ಜಾರಿಗೆ ಬಂದಿದ್ದೇ ಆದಲ್ಲಿ, ಕರ್ನಾಟಕದ ರೈತರಿಗೆ ನೀಡುವ ನೀರನ್ನು ತಮಿಳುನಾಡಿಗೆ ಬಿಡಬೇಕಾದ ಪ್ರಮೇಯವೇ ಇರುವುದಿಲ್ಲ. ಜತೆಗೆ ತಮಿಳುನಾಡಿಗೆ ಕರ್ನಾಟಕದಿಂದ ನೀಡಲಾಗುವ ಕಾವೇರಿ ನೀರಿನ ಅಗತ್ಯ ಕಡಿಮೆಯಾಗಿ, ರಾಜ್ಯದಲ್ಲಿ ಕಾವೇರಿ ನೀರನ್ನು ಅವಲಂಬಿಸಿರುವ ಭಾಗಗಳಿಗೆ ಸಾಕಷ್ಟು ನೀರಿನ ಪೂರೈಕೆ ಸಾಧ್ಯವಾಗಲಿದೆ.

ಕೇಂದ್ರ ಜಲ ಸಂಪನ್ಮೂಲ ಸಚಿವಾಲಯ ರೂಪಿಸಿದ ಯೋಜನೆಯ ಪ್ರಕಾರ, ಗೋದಾವರಿ ನದಿಯ ಹೆಚ್ಚುವರಿ ನೀರನ್ನು ಕಾವೇರಿಗೆ ಹರಿಸಲಾಗುತ್ತದೆ. ಗೋದಾವರಿ ನದಿಯಲ್ಲಿ ಸದ್ಯ 3 ಸಾವಿರ ಟಿಎಂಸಿ ನೀರು ಸಮುದ್ರಕ್ಕೆ ಹರಿದು ಪೋಲಾಗುತ್ತಿದೆ. ಇದನ್ನು ಬಳಸಿಕೊಂಡರೆ ದಕ್ಷಿಣ ರಾಜ್ಯಗಳ ನೀರಿನ ಸಮಸ್ಯೆ ನಿವಾರಣೆ ಯಾಗಲಿದೆ. ಈ ಸಂಬಂಧ 2 ಯೋಜನೆಗಳ ಪ್ರಸ್ತಾವ ಸಚಿವಾಲಯದ ಮುಂದಿದೆ. ಈ ಸಂಬಂಧ ಮುಖ್ಯ ಮಂತ್ರಿಗಳ ಸಭೆ ನಡೆಸಿ ಎಲ್ಲ ರಾಜ್ಯಗಳೂ ಸಮ್ಮತಿಸಿದರೆ ಮುಂದುವರಿಯಲಾಗುವುದು. ಇದು ರಾಷ್ಟ್ರೀಯ ಯೋಜನೆಯಾಗಿದ್ದರಿಂದ ಕೇಂದ್ರ ಸರಕಾರವೇ ಜಾರಿ ಗೊಳಿಸಿ, ಶೇ. 90 ವೆಚ್ಚವನ್ನು ಭರಿಸಲಿದೆ. ಶೇ.10ರಷ್ಟನ್ನು ಮಾತ್ರ ರಾಜ್ಯ ಸರಕಾರಗಳು ಭರಿಸಬೇಕಾಗುತ್ತದೆ. ಈ ಯೋಜನೆ ಕರ್ನಾಟಕ, ತಮಿಳುನಾಡು, ಆಂಧ್ರ ಮತ್ತು ತೆಲಂಗಾಣಕ್ಕೆ ಅತ್ಯಂತ ಮಹತ್ವದ್ದಾಗಿರಲಿದೆ ಎಂದಿದ್ದಾರೆ ಸಚಿವ ನಿತಿನ್‌ ಗಡ್ಕರಿ.

ಎಲ್ಲಿಂದ ಎಲ್ಲಿಗೆ ನೀರು?: ಜಲ ಸಂಪನ್ಮೂಲ ಇಲಾಖೆಯು ಎರಡು ಯೋಜನೆಗಳನ್ನು ರೂಪಿಸಿದೆ. ಈ ಪೈಕಿ ಒಂದು ಯೋಜನೆಯಲ್ಲಿ ಗೋದಾವರಿ ನೀರನ್ನು ಕಾವೇರಿಗೆ ತರಲಾಗುತ್ತದೆ. ಗೋದಾವರಿ ನೀರನ್ನು ಆಂಧ್ರಪ್ರದೇಶದ ನಾಗಾರ್ಜುನ ಸಾಗರ ಅಣೆಕಟ್ಟೆಯ ಮೂಲಕ ಪೊಲ್ಲಾವರಂಗೆ ತಂದು ಕೃಷ್ಣಾ ನದಿಗೆ ಸಾಗಿಸಲಾಗುತ್ತದೆ. ಅಲ್ಲಿಂದ ನೀರು ಪೆನ್ನಾರ್‌ನಲ್ಲಿರುವ ಸೋಮಶಿಲೆ ಅಣೆಕಟ್ಟೆಗೆ ಬರುತ್ತದೆ. ಅನಂತರ ಇದನ್ನು ತಿರುಚಿರಾಪಳ್ಳಿ ಸಮೀಪದ ಗ್ರಾಂಡ್‌ ಅಣೆಕಟ್ಟಿನ ಮೂಲಕ ಕಾವೇರಿ ನದಿಗೆ ತಿರುಗಿಸಲಾಗುತ್ತದೆ.

ನಾಲೆಯಿಲ್ಲ , ಸ್ಟೀಲ್‌ ಪೈಪ್‌
ಸಾಂಪ್ರದಾಯಿಕ ನದಿ ತಿರುವು ಯೋಜನೆ ಯಂತೆ ಈ ಯೋಜನೆಯಲ್ಲಿ  ನಾಲೆಗಳ ಮೂಲಕ ನೀರು ಸಾಗಿಸುವುದಿಲ್ಲ. ಬದಲಿಗೆ ಸ್ಟೀಲ್‌ ಪೈಪ್‌ಗ್ಳನ್ನು ಬಳಸಲಾಗುತ್ತದೆ ಎಂದು ಗಡ್ಕರಿ ಹೇಳಿದ್ದಾರೆ. ಇದರಿಂದ ನೀರು ಪೋಲಾ ಗುವ ಪ್ರಮಾಣ ಕಡಿಮೆಯಾಗಲಿದೆ.

ಸಾವಿರ ಕಿ.ಮೀ. ಹರಿಯಲಿದೆ
ಈ ಯೋಜನೆ ಜಾರಿಯಾದರೆ ಮೂರು ಅಣೆಕಟ್ಟೆಗಳು ಸಂಪರ್ಕಗೊಳ್ಳಲಿವೆ. ಇವುಗಳನ್ನು ಸಂಪರ್ಕಿಸಲು ಸುಮಾರು ಸಾವಿರಕ್ಕೂ ಹೆಚ್ಚು  ಕಿ.ಮೀ. ಉದ್ದದ ಸ್ಟೀಲ್‌ ಪೈಪ್‌ಗ್ಳನ್ನು ಅಳವಡಿಸಬೇಕಾಗುತ್ತದೆ. ಗೋದಾವರಿಯ ನೀರು ತಿರುಚಿರಾಪಳ್ಳಿಯವರೆಗೆ ಸಾಗಲು ವಾರಗಳೇ ಬೇಕಾಗಬಹುದು.

ಟಾಪ್ ನ್ಯೂಸ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.