ಮಣ್ಣು ತಿಂದು ಹಸಿವು ನೀಗಿಸಿಕೊಂಡ ಮಕ್ಕಳು ; ದೇವರ ಸ್ವಂತ ನಾಡಲ್ಲಿ ಇದೆಂತ ಬೀಭತ್ಸ!


Team Udayavani, Dec 3, 2019, 10:35 PM IST

Kerala-Mannu-3-12

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ತಿರುವನಂತಪುರಂ: ಬಡತನದ ಕಾರಣದಿಂದ ಕೇರಳದ ಕುಟುಂಬವೊಂದರ ನಾಲ್ಕು ಮಕ್ಕಳು ತಮ್ಮ ಹಸಿವನ್ನು ನೀಗಿಸಿಕೊಳ್ಳಲು ಮಣ್ಣು ತಿಂದ ಘಟನೆ ತಿರುವನಂತಪುರಂನಲ್ಲಿ ನಡೆದಿದೆ. ಇಲ್ಲಿನ ಸರಕಾರಿ ಕಾರ್ಯಾಲಯ ವ್ಯಾಪ್ತಿಯಿಂದ ಕೇವಲ ಒಂದು ಕಿ.ಮೀ ದೂರದಲ್ಲಿರುವ ಉಪ್ಲಮೂಡು ಸೇತುವೆಯ ಪಕ್ಕದಲ್ಲಿ ಟೆಂಟ್ ಕಟ್ಟಿಕೊಂಡು ವಾಸವಾಗಿರುವ ಶ್ರೀ ದೇವಿ ಎಂಬ ಮಹಿಳೆ ತನ್ನ ಮಕ್ಕಳ ಹಸಿವನ್ನು ನೀಗಿಸಲಾಗದ ನತದೃಷ್ಟೆ ತಾಯಿಯಾಗಿದ್ದಾಳೆ.

ಶ್ರೀದೇವಿಗೆ ಏಳು ಮತ್ತು ಐದು ವರ್ಷ ವಯಸ್ಸಿನ ಇಬ್ಬರು ಗಂಡು ಮಕ್ಕಳು ಮತ್ತು ನಾಲ್ಕು ಮತ್ತು ಎರಡು ವರ್ಷದ ಹೆಣ್ಣುಮಕ್ಕಳಿದ್ದಾರೆ. ಇದೂ ಸಾಲದೆಂಬಂತೆ ಎರಡು ನವಜಾತ ಶಿಶುಗಳೂ ಶ್ರೀದೇವಿಗಿದ್ದಾರೆ. ಈ ಆರು ಮಕ್ಕಳು ಇದೀಗ ನಾಗರಿಕ ಸಮಾಜದ ಮಾನವೀಯ ಪ್ರಜ್ಞೆಗೇ ಸವಾಲಾಗಿದ್ದಾವೆ.

ಈಕೆಯ ಪತಿ ಕೂಲಿ ಕಾರ್ಮಿಕನಾಗಿದ್ದು, ದುಡಿದ ಹಣವನ್ನೆಲ್ಲಾ ತನ್ನ ದುಶ್ಚಟಗಳಿಗೆ ಸುರಿಯುತ್ತಿದ್ದಾನೆ. ತನ್ನ ಗಂಡನ ದುಶ್ಚಟ ಮತ್ತು ಬೇಜವಾಬ್ದಾರಿತನದಿಂದ ಬೇಸತ್ತ ಶ್ರೀದೇವಿ ನೇರವಾಗಿ ಸ್ಥಳೀಯ ಅಧಿಕಾರಿಗಳಿಗೆ ಪತ್ರ ಬರೆದು ತನ್ನ ಮಕ್ಕಳು ತಮ್ಮ ಹಸಿವನ್ನು ನಿವಾರಿಸಿಕೊಳ್ಳಲು ನೆಲದ ಕೊಳಕು ಮಣ್ಣನ್ನು ತಿನ್ನುತ್ತಿದ್ದಾರೆ ಎಂಬ ಆಘಾತಕಾರಿ ವಿಷಯವನ್ನು ಬಹಿರಂಗಪಡಿಸಿದ್ದಾಳೆ.

ಈ ಘಟನೆ ಬೆಳಕಿಗೆ ಬರುತ್ತಿದಂತೆ ಮಕ್ಕಳ ಕಲ್ಯಾಣ ಸಮಿತಿ (ಸಿಡಬ್ಲ್ಯುಸಿ) ಎಚ್ಚೆತ್ತುಕೊಂಡಿದ್ದು, ಆ ನಾಲ್ಕು ಮಕ್ಕಳನ್ನು ವಸತಿ ಕೇಂದ್ರಕ್ಕೆ ಕಳುಹಿಸಿಕೊಟ್ಟಿದೆ. ಮತ್ತು ತಾಯಿ ಹಾಗೂ ಆಕೆಯ ಇನ್ನೆರಡು ನವಜಾತ ಶಿಶುಗಳನ್ನು ಸರಕಾರ ನಡೆಸುತ್ತಿರುವ ಆಶ್ರಯ ಕೇಂದ್ರಕ್ಕೆ ಸೇರಿಸಲಾಗಿದೆ.

ಇದೀಗ ಈ ಹೃದಯವಿದ್ರಾವಕ ಘಟನೆ ಮಾಧ್ಯಮಗಳ ಮೂಲಕ ಬೆಳಕಿಗೆ ಬರುತ್ತಿದ್ದಂತೆಯೇ ರಾಜ್ಯದೆಲ್ಲೆಡೆಯಿಂದ ಈ ಬಡ ಕುಟುಂಬಕ್ಕೆ ನೆರವು ಹರಿದು ಬರಲಾರಂಭಿಸಿದೆ ಮತ್ತು ಹಲವಾರು ಸಂಘಟನೆಗಳು ಈ ಕುಟುಂಬಕ್ಕೆ ನೆರವಾಗುವ ಭರವಸೆಯನ್ನು ನೀಡಿವೆ.

ತಿರುವನಂತಪುರಂ ಮೇಯರ್ ಕೆ. ಶ್ರೀಕುಮಾರ್ ಅವರು ಈ ಮಕ್ಕಳ ತಾಯಿಗೆ ಕಾರ್ಪೊರೇಷನ್ ಕಛೇರಿಯಲ್ಲಿ ಕೆಲಸ ಕೊಡಿಸುವ ಮೂಲಕ ಕುಟುಂಬದ ಆದಾಯಕ್ಕೊಂದು ಶಾಶ್ವತ ವ್ಯವಸ್ಥೆ ಕಲ್ಪಿಸಿದ್ದಾರೆ. ಇಷ್ಟು ಮಾತ್ರವಲ್ಲದೇ ಈ ಕುಟುಂಬಕ್ಕೆ ಸೂಕ್ತ ನೆಲೆಯನ್ನು ಒದಗಿಸುವ ನಿಟ್ಟಿನಲ್ಲಿ ಲೈಫ್ ಮಿಷನ್ ನಡಿಯಲ್ಲಿ ನಿರ್ಗತಿಕರಿಗೆ ಸರಕಾರ ಕಟ್ಟಿಸಿರುವ ಅಪಾರ್ಟ್ ಮೆಂಟ್ ಒಂದರಲ್ಲಿ ಮನೆಯೊಂದನ್ನು ನೀಡುವುದಾಗಿ ಶ್ರೀಕುಮಾರ್ ಅವರು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.

ಆದರೆ ಈ ತನ್ನ ಪತ್ನಿ ಶ್ರೀದೇವಿಯ ಆರೋಪವನ್ನು ಆಕೆಯ ಪತಿ ನಿರಾಕರಿಸಿದ್ದು, ತಾನು ದಿನಗೂಲಿ ನೌಕರನಾಗಿದ್ದು ತನಗೆ ಸಾಧ್ಯವಾದಷ್ಟು ಮಟ್ಟಿಗೆ ತನ್ನ ಮಕ್ಕಳನ್ನು ನೋಡಿಕೊಳ್ಳುತ್ತಿರುವುದಾಗಿ ಆತ ಹೇಳಿದ್ದಾನೆ.

ಇನ್ನು ಈ ಘಟನೆಯ ಕುರಿತಾಗಿ ಪ್ರತಿಕ್ರಿಯಿಸಿದ ರಾಜ್ಯದ ಆರೋಗ್ಯ ಸಚಿವೆ ಕೆ.ಕೆ. ಶೈಲಜಾ ಅವರು ನಾಲ್ಕು ಮಕ್ಕಳು ಇದೀಗ ಸರಕಾರದ ರಕ್ಷಣೆಯಲ್ಲಿರುವುದರಿಂದ ಆ ಮಕ್ಕಳ ಶಿಕ್ಷಣದ ಜವಾಬ್ದಾರಿಯನ್ನು ಸರಕಾರವೇ ವಹಿಸಿಕೊಳ್ಳಲಿದೆ ಎಂದು ಭರವಸೆ ನೀಡಿದ್ದಾರೆ.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.