
ಗಾಂಧಿ ಸಿದ್ದಾಂತ ಕಡಿಮೆಯಾಗಿ, ಗೋಡ್ಸೆ ಸಿದ್ಧಾಂತವು ಪ್ರಬಲವಾಗುತ್ತಿದೆ: ಗಾಂಧಿ ಮರಿ ಮೊಮ್ಮಗ
Team Udayavani, Jan 31, 2022, 9:29 AM IST

ಜಲ್ನಾ (ಮಹಾರಾಷ್ಟ್ರ): ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಬೋಧನೆಗಳನ್ನು ಪಾಲಿಸುವವರ ಸಂಖ್ಯೆ ದೇಶದಲ್ಲಿ ಕಡಿಮೆಯಾಗುತ್ತಿದ್ದು, ಅವರ ಹಂತಕ ನಾಥೂರಾಂ ಗೋಡ್ಸೆಯ ಸಿದ್ಧಾಂತ ಪ್ರಬಲವಾಗುತ್ತಿದೆ ಎಂದು ಗಾಂಧೀಜಿ ಮರಿ ಮೊಮ್ಮಗ ತುಷಾರ್ ಗಾಂಧಿ ವಿಷಾದ ವ್ಯಕ್ತಪಡಿಸಿದರು.
75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಕೇಂದ್ರ ಸರ್ಕಾರ ‘ಆಜಾದಿ ಕಾ ಅಮೃತ್ ಮಹೋತ್ಸವ’ಆಚರಿಸುತ್ತಿದ್ದರೆ, ಸಮಾಜದಲ್ಲಿ ದ್ವೇಷದ ವಿಷ ಹರಡುತ್ತಿರುವುದು ಕಣ್ಣಿಗೆ ರಾಚುತ್ತಿದೆ ಎಂದರು.
ಇಲ್ಲಿನ ಜೆಇಎಸ್ ಕಾಲೇಜಿನ ಗಾಂಧಿ ಅಧ್ಯಯನ ಕೇಂದ್ರವು ಮಹಾತ್ಮಾ ಗಾಂಧೀಜಿಯವರ ಪುಣ್ಯತಿಥಿಯಂದು ಆಯೋಜಿಸಿದ್ದ ‘ಕರ್ ಕೆ ದೇಖೋ’ ಎಂಬ ವರ್ಚುವಲ್ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ಪ್ರಗತಿಪರ ಭಾರತ ಮತ್ತು ಅದರ ಶ್ರೀಮಂತ ಇತಿಹಾಸದ 75 ವರ್ಷಗಳ ವೈಭವವನ್ನು ಸ್ಮರಿಸಲು ಸರ್ಕಾರವು ‘ಆಜಾದಿ ಕಾ ಅಮೃತ್ ಮಹೋತ್ಸವ’ವನ್ನು ಆಚರಿಸುತ್ತಿದೆ, ಆದರೆ ಈಗ ‘ಅಮೃತ’ ದ್ವೇಷದ ವಿಷವಾಗಿ ಮಾರ್ಪಟ್ಟಿದೆ, ಆ ವಿಷ ಹೆಚ್ಚುತ್ತಿದೆ ಮತ್ತು ಹರಡುತ್ತಿದೆ” ಎಂದರು.
ಇದನ್ನೂ ಓದಿ:ನಕಲಿ ಎನ್ಆರ್ಐನಿಂದ ಪಂಗನಾಮ!; ದೆಹಲಿ ಯುವತಿಯಿಂದ ಹೊಸ ರೀತಿಯ ಮೋಸದ ಜಾಲ!
“ಮಹಾತ್ಮ ಗಾಂಧಿಯವರ ಬೋಧನೆಗಳು ಕ್ಷೀಣಿಸುತ್ತಿವೆ ಮತ್ತು ಅವರ ಹಂತಕ ನಾಥೂರಾಂ ಗೋಡ್ಸೆಯ ಸಿದ್ಧಾಂತವು ಅದರ ಮೇಲೆ ಪ್ರಾಬಲ್ಯ ಸಾಧಿಸುತ್ತಿದೆ. ಒಂದು ವರ್ಗದ ಜನರು ಇತಿಹಾಸವನ್ನು ವಿರೂಪಗೊಳಿಸುತ್ತಿದ್ದಾರೆ, ಅಲ್ಲದೆ ಇತಿಹಾಸವನ್ನು ತಮ್ಮದೇ ಆದ ರೀತಿಯಲ್ಲಿ ಪುನಃ ಬರೆಯುತ್ತಿದ್ದಾರೆ. ಆದರೆ ನಾವು ನೈಜ ಇತಿಹಾಸವನ್ನು ಮತ್ತೆ ತರಬೇಕಾಗಿದೆ. ಸಮಾಜದಲ್ಲಿನ ದ್ವೇಷ ಮತ್ತು ವಿಭಜನೆಯ ವಿರುದ್ಧ ಧ್ವನಿ ಎತ್ತಬೇಕು,’’ ಎಂದು ತುಷಾರ್ ಗಾಂಧಿ ಕರೆ ನೀಡಿದರು.
ನಾವು ಹಿಂಸೆ, ದ್ವೇಷ ಮತ್ತು ವಿಭಜನೆಯ ಸಂಸ್ಕೃತಿಯನ್ನು ಅಳವಡಿಸಿಕೊಂಡಿದ್ದೇವೆ. ನಾವು ಧರ್ಮ, ಜಾತಿ ಮತ್ತು ಪ್ರದೇಶದ ಆಧಾರದ ಮೇಲೆ ವಿಭಜನೆಯಾಗಿದ್ದೇವೆ. ನಮ್ಮ ವಿಭಜನೆಯೇ ನಮ್ಮ ಗುರುತು, ಮನಸ್ಥಿತಿ; ಮತ್ತು ಸಾಮಾಜಿಕ ವ್ಯವಸ್ಥೆಗಳು ವಿಭಜನೆಯನ್ನು ಆಧರಿಸಿವೆ ಎಂದು ಅವರು ಹೇಳಿದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣಾ ಕ್ಷೇತ್ರಕ್ಕೆ 5.94 ಲಕ್ಷ ಕೋಟಿ ರೂ.: ದೇಶೀಯವಾಗಿ ಶಸ್ತ್ರಾಸ್ತ್ರ ತಯಾರಿಕೆಗೆ ಒತ್ತು

‘ಮಿತ್ರ್ ಕಾಲ್’ ಬಜೆಟ್ ನಲ್ಲಿ ಭಾರತದ ಭವಿಷ್ಯವಿಲ್ಲ: ಪ್ರಧಾನಿಗೆ ರಾಹುಲ್ ಗಾಂಧಿ ಟಾಂಗ್

Union Budget 2023: 20 ಲಕ್ಷ ಕೋಟಿ ರೂಪಾಯಿ ಕೃಷಿ ಸಾಲದ ಗುರಿ-ಕೃಷಿ ಕ್ಷೇತ್ರಕ್ಕೆ ಡಿಜಿಟಲ್ ಸ್ಪರ್ಶ

ಆನ್ ಲೈನ್ ಕ್ಲಾಸ್ ನಡೆಯುತ್ತಿರುವಾಗಲೇ ಶಿಕ್ಷಕನ ಕತ್ತು ಹಿಸುಕಿ ಕೊಲೆಗೈದ ದುಷ್ಕರ್ಮಿಗಳು

ಜಮ್ಮು-ಕಾಶ್ಮೀರ: ಗುಲ್ಮಾರ್ಗ್ನಲ್ಲಿ ಭಾರೀ ಹಿಮಪಾತ; ಇಬ್ಬರು ವಿದೇಶಿ ಪ್ರವಾಸಿಗರು ಮೃತ್ಯು
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
ಹೊಸ ಸೇರ್ಪಡೆ

ಬೈಬಲ್ಗೆ ಬೆಂಕಿ ಹಚ್ಚಿ ಸಾಮಾಜಿಕ ಜಾಲ ತಾಣಗಳಲ್ಲಿ ಪ್ರಚಾರಗೈದ ಆರೋಪಿಯ ಬಂಧನ

ರಕ್ಷಣಾ ಕ್ಷೇತ್ರಕ್ಕೆ 5.94 ಲಕ್ಷ ಕೋಟಿ ರೂ.: ದೇಶೀಯವಾಗಿ ಶಸ್ತ್ರಾಸ್ತ್ರ ತಯಾರಿಕೆಗೆ ಒತ್ತು

ಗಂಗೊಳ್ಳಿ: ಸ್ಕೀಮ್ ಹೆಸರಿನಲ್ಲಿ ಗ್ರಾಹಕರಿಗೆ ಕೋಟ್ಯಂತರ ರೂ. ವಂಚನೆ

ದೇಶದ ಆರ್ಥಿಕ ಅಭಿವೃದ್ದಿಗೆ ಪೂರಕವಾದ ಬಜೆಟ್:ಗೃಹ ಸಚಿವ ಆರಗ ಜ್ಞಾನೇಂದ್ರ

‘ಮಿತ್ರ್ ಕಾಲ್’ ಬಜೆಟ್ ನಲ್ಲಿ ಭಾರತದ ಭವಿಷ್ಯವಿಲ್ಲ: ಪ್ರಧಾನಿಗೆ ರಾಹುಲ್ ಗಾಂಧಿ ಟಾಂಗ್