ಚಿನ್ನ ಕಳ್ಳ ಸಾಗಣೆ: ಸಿಂಗಾಪುರ ಏರ್ ಲೈನ್ಸ್ ಸಿಬಂದಿ ಅರೆಸ್ಟ್
Team Udayavani, Jan 24, 2018, 4:13 PM IST
ಹೊಸದಿಲ್ಲಿ : ಸುಮಾರು 31 ಲಕ್ಷ ರೂ. ಮೌಲ್ಯದ ಚಿನ್ನವನ್ನು ದೇಶದೊಳಗೆ ಕಳ್ಳ ಸಾಗಣೆ ಮಾಡಲು ತರಲೆತ್ನಿಸಿದ ಸಿಂಗಾಪುರ ಏರ್ ಲೈನ್ಸ್ ನ ಚಾಲಕ ಸಿಬಂದಿಯೋರ್ವರನ್ನು ಕಸ್ಟಮ್ಸ್ ಅಧಿಕಾರಿಗಳು ಇಂದು ಇಲ್ಲಿನ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದರು.
ಸಿಂಗಾಪುರದಿಂದ ಬಂದೊಡನೆಯೇ ಇಲ್ಲಿ ಆರೋಪಿಯನ್ನು ಬಂಧಿಸಲಾಗಿ ಆತನಿಂದ 1.04 ಕಿಲೋ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡರು. ಇದರ ಮಾರುಕಟ್ಟೆ ಮೌಲ್ಯ ಸುಮಾರು 31.25 ಲಕ್ಷ ರೂ. ಎಂದು ಕಸ್ಟಮ್ಸ್ ಹೇಳಿಕೆ ತಿಳಿಸಿದೆ.
ತಾನು ಚಿನ್ನ ಕಳ್ಳಸಾಗಣೆ ಮಾಡಿರುವುದು ಇದು ಎರಡನೇ ಸಲ; ಕಳೆದ ಸಲವೂ ಇಷ್ಟೇ ಪ್ರಮಾಣದ ಚಿನ್ನವನ್ನು ತಂದಿದ್ದೆ ಎಂದು ಆರೋಪಿಯು ಹೇಳಿರುವುದಾಗಿ ಕಸ್ಟಮ್ಸ್ ಅಧಿಕಾರಿ ತಿಳಿಸಿದ್ದಾರೆ. ಇವುಗಳ ಒಟ್ಟು ಮೌಲ್ಯ 62.5 ಲಕ್ಷ ರೂ.ಗಳೆಂದು ಅವರು ಹೇಳಿದರು.
ಚಿನ್ನ ಕಳ್ಳಸಾಗಣೆ ಮಾಡಿರುವ ಆರೋಪಕ್ಕೆ ಗುರಿಯಾಗಿರುವ ತನ್ನ ಚಾಲಕ ಸಿಬಂದಿಯ ತನಿಖೆಗೆ ತಾನು ಸಂಪೂರ್ಣ ಸಹಕಾರ ನೀಡುವುದಾಗಿ ಸಿಂಗಾಪುರ ಏರ್ ಲೈನ್ಸ್ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್