ಶಾಲೆ ಹಾಜರಾತಿ ಹೆಚ್ಚಿಸಿದ್ದ ಲಕ್ಷ್ಮಿ ಇನ್ನಿಲ್ಲ
Team Udayavani, Sep 7, 2019, 10:29 PM IST
ಕರ್ನೂಲ್: ಮುಖ್ಯೋಪಾಧ್ಯಾಯರೂ ಸೇರಿ ಇಬ್ಬರೇ ಶಿಕ್ಷಕರಿರುವ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ವಂಗಲಂಪಲ್ಲಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಪ್ರತಿದಿನ ಅರ್ಧದಷ್ಟು ಹಾಜರಾತಿಯೂ ಇರಲಿಲ್ಲ. ಶಿಕ್ಷಕರು ಮಕ್ಕಳನ್ನು ಮನವೊಲಿಸಿ ಶಾಲೆಗೆ ಕರೆತರುವಲ್ಲಿ ಸೋತಿದ್ದರು. ಆದರೆ ಒಂದು ಮಂಗ ಈ ಶಾಲೆಯಲ್ಲಿ ಶೇ.100 ದಾಖಲಾತಿ ಇರುವಂತೆ ಮಾಡಿತ್ತು.
ಆ ಮಂಗ ಈಗ ನಾಯಿಗಳ ದಾಳಿಯಿಂದ ಮೃತಪಟ್ಟಿದ್ದು, ಶಾಲೆಯ ಎಲ್ಲಾ ಮಕ್ಕಳ ಕಣ್ಣೀರಿಗೆ ಕಾರಣವಾಗಿದೆ. ಪ್ರತಿದಿನವೂ ಶಾಲೆಗೆ ಬಂದು ವಿದ್ಯಾರ್ಥಿಗಳ ಜೊತೆ ಕುಳಿತುಕೊಳ್ಳುತ್ತಿದ್ದ ಈ ಕೋತಿಗೆ ಮಕ್ಕಳು ಪ್ರೀತಿಯಿಂದ ಲಕ್ಷ್ಮಿ ಎಂದು ಹೆಸರಿಟ್ಟಿದ್ದರು. ಮಕ್ಕಳ ಜೊತೆ ಪಾಠ ಕೇಳುವುದಲ್ಲದೇ, ಊಟವನ್ನೂ ಅವರೊಡನೆಯೇ ಮಾಡುತ್ತಿತ್ತು. ಶನಿವಾರ ಮಧ್ಯಾಹ್ನ ಲಕ್ಷ್ಮಿ ಶಾಲೆಯ ಆವರಣದಲ್ಲಿ ಬೀದಿ ನಾಯಿಗಳ ಹಾವಳಿಗೆ ಬಲಿಯಾಗಿದೆ ಎಂದು ಶಿಕ್ಷಕರು ದುಃಖದಿಂದ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
MUST WATCH
ಹೊಸ ಸೇರ್ಪಡೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್ಪೋಸ್ಟ್ಗಳಲ್ಲಿ ತಪಾಸಣೆ
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು