ಜಮ್ಮು ಕಾಶ್ಮೀರ ಜನರ ಮೇಲೆ ಕ್ರೂರ ಕಾನೂನಿನ ಪ್ರಹಾರ : ರಾಹುಲ್ ಆರೋಪ


Team Udayavani, Aug 25, 2019, 8:42 PM IST

Rahul-Gandhi-726

ನವದೆಹಲಿ: ಕಳೆದ 20 ದಿನಗಳಿಂದ ಜಮ್ಮು ಕಾಶ್ಮೀರದ ನಾಗರಿಕರಿಗೆ ಕ್ರೂರ ಕಾನೂನು ಮತ್ತು ಅಮಾನವೀಯ ಬಲ ಪ್ರದರ್ಶನದ ನರಕ ದರ್ಶನವಾಗುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬಲವಾದ ಆರೋಪ ಮಾಡಿದ್ದಾರೆ.

ನಿನ್ನೆಯಷ್ಟೇ ವಿಪಕ್ಷ ನಾಯಕರೊಂದಿಗೆ ಜಮ್ಮು ಕಾಶ್ಮೀರದ ಪರಿಸ್ಥಿತಿ ಅವಲೋಕನಕ್ಕಾಗಿ ಭೇಟಿ ನೀಡುವ ಉದ್ದೇಶದಿಂದ ಜಮ್ಮುವಿಗೆ ತೆರಳಿ ಬಳಿಕ ಶ್ರೀನಗರ ವಿಮಾನ ನಿಲ್ದಾಣದಿಂದಲೇ ವಾಪಾಸಾಗಿದ್ದ ರಾಹುಲ್ ಗಾಂಧಿ ಅವರು ಕಾಶ್ಮೀರ ಪರಿಸ್ಥಿತಿಯ ಕುರಿತಾಗಿ ತಮ್ಮ ವ್ಯಾಖ್ಯಾನವನ್ನು ನೀಡಿದ್ದಾರೆ.

‘ನಿನ್ನೆ ಶ್ರೀನಗರಕ್ಕೆ ಬಂದಿಳಿದ ಸಂದರ್ಭದಲ್ಲಿ ವಿಪಕ್ಷಗಳ ನಾಯಕರಿಗೆ ಮತ್ತು ಪತ್ರರ್ತರಿಗೆ ಕಠಿಣ ಕಾನೂನು ಹೇರಿಕೆಯ ಮತ್ತು ಬಲಪ್ರದರ್ಶನದ ಮೂಲಕ ಎಲ್ಲರ ಹಕ್ಕುಗಳನ್ನು ದಮನಿಸಿರುವ ಸ್ಥಿತಿಯ ನೈಜ ದರ್ಶನವಾಯ್ತು’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು.

ಭಾರತ ಪಾಕಿಸ್ಥಾನ ಗಡಿ ಭಾಗದ ಮೂಲಕ ಭಯೋತ್ಪಾದಕರು ಕಣಿವೆ ಭಾಗದ ಶಾಂತಿ ಕದಡುವ ಅಪಾಯವಿರುವಂತಹ ಈ ಸಂದರ್ಭದಲ್ಲಿ ಭದ್ರತೆ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವುದೇ ನಮ್ಮ ಮೊದಲ ಆದ್ಯತೆಯಾಗಿದೆ ಎಂದು ಹೇಳುವ ಮೂಲಕ ಜಮ್ಮು ಮತ್ತು ಕಾಶ್ಮೀರದ ಪ್ರಧಾನ ಕಾರ್ಯದರ್ಶಿ ರೋಹಿತ್ ಕನ್ಸಾಲ್ ಅವರು ವಿಪಕ್ಷ ನಾಯಕರಿಗೆ ನೂತನ ಕೇಂದ್ರಾಡಳಿತ ಪ್ರದೇಶದ ವಾಸ್ತವ ಸ್ಥಿತಿ ಅವಲೋಕನಕ್ಕೆ ಅವಕಾಶ ಮಾಡಿಕೊಡದಿರುವ ಸ್ಥಳೀಯಾಡಳಿತದ ಕ್ರಮವನ್ನು ಸಮರ್ಥಿಸಿಕೊಂಡರು.

ಆಗಸ್ಟ್ 14ರಂದು ಕಾಶ್ಮೀರದ ನಾಯಕ ಶಾ ಫೈಸಲ್ ಅವರನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದುಕೊಂಡು ಶ್ರೀನಗರಕ್ಕೆ ಕಳುಹಿಸಿಕೊಡಲಾಗಿತ್ತು. ಫೈಸಲ್ ಅವರು ಅಮೆರಿಕಾದ ವಿಶ್ವವಿದ್ಯಾನಿಲಯ ಒಂದರಲ್ಲಿ ತನ್ನ ಅಧ್ಯಯನವನ್ನು ಪೂರ್ತಿಗೊಳಿಸಲು ತೆರಳುತ್ತಿದ್ದರು ಎಂದು ಹೇಳಲಾಗುತ್ತಿದೆ. ಇನ್ನು ರಾಜ್ಯಸಭೆಯಲ್ಲಿ ವಿಪಕ್ಷ ನಾಯಕರಾಗಿರುವ ಗುಲಾಂ ನಬಿ ಆಝಾದ್ ಅವರನ್ನು ಆಗಸ್ಟ್ 20ರಂದು ದೆಹಲಿಗೆ ಮರಳಿ ಕಳುಹಿಸುವ ಮುನ್ನ ಜಮ್ಮು ವಿಮಾನ ನಿಲ್ದಾಣದಲ್ಲಿ ಸುಮಾರು ಎರಡು ಗಂಟೆಗಳವರೆಗೆ ವಶಕ್ಕೆ ಪಡೆದುಕೊಳ್ಳಲಾಗಿತ್ತು.

ಜಮ್ಮು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಕೇಂದ್ರ ಸರಕಾರ ರದ್ದುಗೊಳಿಸಿದ ಬಳಿಕ ಆ ರಾಜ್ಯದಲ್ಲಿ ಹೇರಳ ಸೇನಾ ಪಡೆಯನ್ನು ನಿಯೋಜಿಸಲಾಗಿದೆ. ಅಂತರ್ಜಾಲ ಸೇರಿದಂತೆ ಸಂವಹನ ಸೇವೆಗಳನ್ನು ಸ್ಥಗಿತಗೊಳಿಸಲಾಗಿತ್ತು. ಮತ್ತು ಕೆಲ ದಿನಗಳ ಹಿಂದೆಯಷ್ಟೇ ಶಾಲೆಗಳು ಪುನರಾರಂಭಗೊಂಡಿದ್ದರೂ ತರಗತಿಗಳಲ್ಲಿ ಮಕ್ಕಳ ಹಾಜರಾತಿ ಕಡಿಮೆ ಇತ್ತು.

ಜಮ್ಮು ಕಾಶ್ಮೀರದಲ್ಲಿ ನಿಧಾನವಾಗಿ ಜನಜೀವನ ಸಹಜ ಸ್ಥಿತಿಗೆ ಮರಳುತ್ತಿರುವುದರಿಂದ ಯಾವುದೇ ರಾಜಕೀಯ ಪಕ್ಷದ ನಾಯಕರು ಸದ್ಯಕ್ಕೆ ಇಲ್ಲಿಗೆ ಭೇಟಿ ನೀಡದಂತೆ ಇಲ್ಲಿನ ಆಡಳಿತವು ಇತ್ತೀಚೆಗಷ್ಟೇ ಎಲ್ಲಾ ರಾಜಕೀಯ ಪಕ್ಷಗಳಿಗೆ ಮನವಿ ಮಾಡಿಕೊಂಡಿತ್ತು.

ಟಾಪ್ ನ್ಯೂಸ್

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

1-wwewqe

Lok Sabha ಅಖಾಡಕ್ಕೆ ಲಾಲು ಪ್ರಸಾದ್‌ ಪುತ್ರಿ ಡಾ| ರೋಹಿಣಿ ಹೆಜ್ಜೆ

RBI

Cyber ​​attack: ಭದ್ರತೆ ಹೆಚ್ಚಿಸಲು ಬ್ಯಾಂಕ್‌ಗಳಿಗೆ ಆರ್‌ಬಿಐ ಸೂಚನೆ

K-Kavitha

ED; ದಿಲ್ಲಿ ಲಿಕ್ಕರ್‌ ಕೇಸ್‌ ಡೀಲ್‌ಗೆ ಕೆಸಿಆರ್‌ ಪುತ್ರಿ ಕವಿತಾ ಸಂಚು

supreem

Himachal Pradesh; 6 ಕೈ ಶಾಸಕರ ಅನರ್ಹತೆ ಆದೇಶಕ್ಕೆ ತಡೆ ಇಲ್ಲ: ಸುಪ್ರೀಂ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.