50 ಸಾವಿರ ಕೋಟಿಯ ಸುಸ್ತಿದಾರರ ಮೇಲೆ ಕಣ್ಣು


Team Udayavani, Mar 11, 2017, 3:45 AM IST

Vijay-Mallya-750.jpg

ನವದೆಹಲಿ: ಸ್ಟೇಟ್‌ ಬ್ಯಾಂಕ್‌ ಆಫ್ ಇಂಡಿಯಾ ಮತ್ತು ಸಾಲ ವಸೂಲಾತಿ ನ್ಯಾಯಾಧಿಕರಣವು ಉದ್ಯಮಿ ವಿಜಯ ಮಲ್ಯ ಅವರ ಹಿಂದೆ ಬಿದ್ದಿರು ವುದು ಎಲ್ಲರಿಗೂ ಗೊತ್ತೇ ಇದೆ. ಇದೀಗ, ಸಾಲವನ್ನು ಮರುಪಾವತಿ ಮಾಡಲು ಅರ್ಹರಾಗಿದ್ದರೂ, ಪಾವತಿಸದಂಥ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ಮತ್ತು ಬ್ಯಾಂಕುಗಳು ಚಿಂತನೆ ನಡೆಸಿವೆ.

ಅದರಂತೆ, ಸರ್ಕಾರವು 50 ಸಾವಿರ ಕೋಟಿ ರೂ. ಮೌಲ್ಯದ ಮರುಪಾವತಿಯಾಗದ ಸಾಲದ ಮೇಲೆ ಕಣ್ಣಿಟ್ಟಿದ್ದು, ಈ ಸುಸ್ತಿದಾರರ ಕುರಿತು ವಿವರಗಳನ್ನು ಸಂಗ್ರಹಿಸುತ್ತಿದೆ. ಸರ್ಕಾರವು ಸಿದ್ಧಪಡಿಸುತ್ತಿರುವ ಈ ಪ್ರಮುಖ ಸುಸ್ತಿದಾರರ ಪಟ್ಟಿಯಲ್ಲಿ ವಜೊÅà ದ್ಯಮಿಗಳು, ಮುಚ್ಚಿರುವ ಎರಡು ವೈಮಾನಿಕ ಕಂಪನಿಗಳು, ಕೇಂದ್ರ ಸರ್ಕಾರದ ಸರಕು ವ್ಯಾಪಾರ ಏಜೆನ್ಸಿ, ರಾಜ್ಯ ಸರ್ಕಾರಿ ಉತ್ತೇಜಿತ ಸಂವಹನ ಸಂಸ್ಥೆ, ಪ್ರಾದೇಶಿಕ ಕೈಗಾರಿಕಾ ಸಂಸ್ಥೆ, ದೇಶಾದ್ಯಂತ ಕಾರ್ಯಾಚರಿಸುತ್ತಿರುವ ಒಂದು ಮಾಧ್ಯಮ ಸಂಸ್ಥೆ, ಬಹು ರಾಜ್ಯ ಕೃಷಿ ಸಹಕಾರಿ ಸಂಸ್ಥೆ, ಗಣಿ ಕಂಪನಿಗಳು, ರಿಯಲ್‌ ಎಸ್ಟೇಟ್‌ ಡೆವಲಪರ್‌ಗಳು, ಗಾರ್ಮೆಂಟ್‌ ಬ್ರಾಂಡ್‌ಗಳು ಕೂಡ ಸೇರಿವೆ. ಸಾಮರ್ಥಯವಿದ್ದರೂ ಇವರು ಸಾಲ ಮರುಪಾವತಿ ಮಾಡಿಲ್ಲ. ಕೆಲವರು  ಸಾಲ ಪಡೆದ ಉದ್ದೇಶದ ಹೊರತಾಗಿ ಬೇರೆ ಕಾರಣಕ್ಕೆ ಸಾಲವನ್ನು ಬಳಸಿಕೊಂಡಿರುವುದು ಬೆಳಕಿಗೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಚಾರಣೆಗೂ ಮುನ್ನವೇ ತಪ್ಪಿತಸ್ಥನ ಪಟ್ಟವೇ?: ಮಲ್ಯ
ನವದೆಹಲಿ
: ನ್ಯಾಯಸಮ್ಮತ ವಿಚಾರಣೆಗೂ ಮೊದಲೇ ನನ್ನನ್ನು ತಪ್ಪಿತಸ್ಥನನ್ನಾಗಿ ಬಿಂಬಿಸಲಾಗುತ್ತಿದೆ ಎಂದು ಲಂಡನ್‌ನಲ್ಲಿ ನೆಲೆಸಿ
ರುವ ಉದ್ಯಮಿ   ವಿಜಯ್‌ ಮಲ್ಯ ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ. 

ಬ್ಯಾಂಕ್‌ಗಳಲ್ಲಿ ಸಾಲ ಪಡೆದು ಸುಸ್ತಿದಾರರಾಗಿ ಕೋರ್ಟ್‌ನಲ್ಲಿ ಪ್ರಕರಣ ಎದುರಿಸುತ್ತಿರುವ ವಿಜಯ್‌ ಮಲ್ಯ, ಈಗಾಗಲೇ ಬ್ಯಾಂಕ್‌, ಕೋರ್ಟ್‌ಗೆ ಸಲ್ಲಿಸಿರುವ ದಾಖಲೆಗಳನ್ನು ಸುಪ್ರೀಂ ಕೋರ್ಟ್‌ ಗುರುವಾರವಷ್ಟೇ ವಿಚಾರಣೆ ನಡೆಸಿತ್ತು. ಈ ವೇಳೆ ದಾಖಲೆಗಳಲ್ಲಿ ಸತ್ಯ ಎಷ್ಟು ಎಂದು ಮಲ್ಯರನ್ನು ಪ್ರಶ್ನಿಸಿತ್ತು. ಇದೇ ವೇಳೆ ಮಕ್ಕಳ ಹೆಸರಿಗೆ 40 ದಶಲಕ್ಷ ಡಾಲರ್‌ ಮೌಲ್ಯದ ಆಸ್ತಿ ವರ್ಗಾವಣೆ ಮಾಡಿದ್ದನ್ನೂ ಹಿಂಪಡೆಯುವಂತೆ ಬ್ಯಾಂಕ್‌ಗಳು ಮಾಡಿಕೊಂಡಿದ್ದ ಮನವಿಗೆ ಕೋರ್ಟ್‌ ಪ್ರಶ್ನಿಸಿತ್ತು. ಬಳಿಕ ವಿಚಾರಣೆ ತೀರ್ಪನ್ನು ಮುಂದೂಡಿತ್ತು. 

ಇದರ ಜತೆಗೆ ಬ್ಯಾಂಕ್‌ಗಳಿಗೆ 9 ಸಾವಿರ ಕೋಟಿ ರೂ. ವಂಚನೆ ಮಾಡಿರುವ ಆರೋಪಕ್ಕೆ ಗುರಿಯಾಗಿರುವ ಅವರು ಒಂದೇ ಬಾರಿಗೆ ಬಾಕಿ ಪಾವತಿ ಮಾಡುವ ಪ್ರಸ್ತಾಪವನ್ನು ಇರಿಸಿದ್ದಾರೆ. ಈ ಬಗ್ಗೆ ಮಾತುಕತೆಗೆ ಸಿದ್ಧನಿರುವುದಾಗಿಯೂ ಅವರು ಸರಣಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ. ಸುಪ್ರೀಂಕೋರ್ಟಲ್ಲಿ ಅಟಾರ್ನಿ ಜನರಲ್‌ ಮಾಡಿರುವ ಆರೋಪಗಳು ಎಷ್ಟು ಸರಿ ಎಂದೂ ಪ್ರಶ್ನಿಸಿದ್ದಾರೆ.

ಟಾಪ್ ನ್ಯೂಸ್

ಐಸಿಯುನಲ್ಲಿದ್ದ ತಂದೆಯ ಮುಂದೆಯೇ ನೆರವೇರಿತು ಮಗಳ ಮದುವೆ: ಭಾವುಕ ಕ್ಷಣದ ವಿಡಿಯೋ ವೈರಲ್

ಐಸಿಯುನಲ್ಲಿದ್ದ ತಂದೆಯ ಮುಂದೆಯೇ ನೆರವೇರಿತು ಮಗಳ ಮದುವೆ: ಭಾವುಕ ಕ್ಷಣದ ವಿಡಿಯೋ ವೈರಲ್

11

Siruguppa: ಸಾರ್ವಜನಿಕ ಗ್ರಂಥಾಲಯದಲ್ಲಿ ಶೌಚಕ್ಕಾಗಿ ಸಾಲುಗಟ್ಟಿ ನಿಂತಿರುವ ವಿದ್ಯಾರ್ಥಿನಿಯರು

Veerashaiva-Lingayat separate religion recognition protest back to fore: Eshwar Khandre

ವೀರಶೈವ- ಲಿಂಗಾಯತ ಪ್ರತ್ಯೇಕ ಧರ್ಮದ ಮಾನ್ಯತೆ ಹೋರಾಟ ಮತ್ತೆ ಮುನ್ನೆಲೆಗೆ: ಖಂಡ್ರೆ

13

Tollywood: ಚಿರಂಜೀವಿ ನಾಲ್ಕು ಹೊಸ ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ – ರಾಮ್‌ ಚರಣ್

Rahul Gandhi (3)

EVM ವಿಚಾರ; ಮಸ್ಕ್ ಹೇಳಿಕೆಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ : ಬಿಜೆಪಿ ಆಕ್ರೋಶ

9

ನಿಮಿರು ದೌರ್ಬಲ್ಯ ಚಿಕಿತ್ಸೆಯಲ್ಲಿ ಜೀವನ ವಿಧಾನ ಮತ್ತು ಆಹಾರ ಶೈಲಿ ಬದಲಾವಣೆಗಳು

12

ಕಾಯಲು ಇರುವವಳು: ಮೂಕ ಭಾಷೆ… ಮೌನ ಸಂದೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rahul Gandhi (3)

EVM ವಿಚಾರ; ಮಸ್ಕ್ ಹೇಳಿಕೆಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ : ಬಿಜೆಪಿ ಆಕ್ರೋಶ

1-aaaa

Bihar:ಗಂಗಾ ನದಿಯಲ್ಲಿ ಮುಳುಗಿದ 17 ಭಕ್ತರಿದ್ದ ದೋಣಿ,6 ಮಂದಿ ನಾಪತ್ತೆ

Rajeev Chandrasekhar hits back at Elon Musk

EVM ಸರಿಯಲ್ಲ ಎಂದ ಎಲಾನ್ ಮಸ್ಕ್ ಗೆ ರಾಜೀವ್ ಚಂದ್ರಶೇಖರ್ ತಿರುಗೇಟು

Amit Shah high level meeting on Jammu and Kashmir security

Security Review; ಜಮ್ಮು ಕಾಶ್ಮೀರದ ಭದ್ರತೆಯ ಬಗ್ಗೆ ಅಮಿತ್ ಶಾ ಉನ್ನತ ಮಟ್ಟದ ಸಭೆ

3

Jaipur: ಎಸಿ ಸ್ಪೋಟದಿಂದ ಬೆಂಕಿ; ಉಸಿರುಗಟ್ಟಿ ದಂಪತಿ ಮೃತ್ಯು

MUST WATCH

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

ಹೊಸ ಸೇರ್ಪಡೆ

ಐಸಿಯುನಲ್ಲಿದ್ದ ತಂದೆಯ ಮುಂದೆಯೇ ನೆರವೇರಿತು ಮಗಳ ಮದುವೆ: ಭಾವುಕ ಕ್ಷಣದ ವಿಡಿಯೋ ವೈರಲ್

ಐಸಿಯುನಲ್ಲಿದ್ದ ತಂದೆಯ ಮುಂದೆಯೇ ನೆರವೇರಿತು ಮಗಳ ಮದುವೆ: ಭಾವುಕ ಕ್ಷಣದ ವಿಡಿಯೋ ವೈರಲ್

Raakha Directed by Malavalli Saikrishna

ಸಂಬಂಧದ ಸುತ್ತ ರಾಖಾ; ಮಳವಳ್ಳಿ ಸಾಯಿಕೃಷ್ಣ ನಿರ್ದೇಶನ

11

Siruguppa: ಸಾರ್ವಜನಿಕ ಗ್ರಂಥಾಲಯದಲ್ಲಿ ಶೌಚಕ್ಕಾಗಿ ಸಾಲುಗಟ್ಟಿ ನಿಂತಿರುವ ವಿದ್ಯಾರ್ಥಿನಿಯರು

Veerashaiva-Lingayat separate religion recognition protest back to fore: Eshwar Khandre

ವೀರಶೈವ- ಲಿಂಗಾಯತ ಪ್ರತ್ಯೇಕ ಧರ್ಮದ ಮಾನ್ಯತೆ ಹೋರಾಟ ಮತ್ತೆ ಮುನ್ನೆಲೆಗೆ: ಖಂಡ್ರೆ

10-

Kandagal: ಗಬ್ಬೆದು ನಾರುತ್ತಿರುವ ಮಲೀನ ನೀರು; ನರಕಯಾತನೆ ಅನುಭವಿಸುತ್ತಿರುವ ನಿವಾಸಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.