ಎನ್ಎಂಸಿ ವಿಧೇಯಕಕ್ಕೆ ಕೇಂದ್ರ ಸಂಪುಟ ಒಪ್ಪಿಗೆ
Team Udayavani, Jul 18, 2019, 5:32 AM IST
ಹೊಸದಿಲ್ಲಿ: ಬಹು ನಿರೀಕ್ಷಿತ ರಾಷ್ಟ್ರೀಯ ವೈದ್ಯಕೀಯ ಆಯೋಗ ವಿಧೇಯಕಕ್ಕೆ ಪ್ರಧಾನಿ ನರೇಂದ್ರ ನೇತೃತ್ವದ ಸಂಪುಟ ಸಭೆ ಬುಧವಾರ ಅನುಮೋದನೆ ನೀಡಿದೆ. ಹಾಲಿ ನಡೆಯುವ ಮುಂಗಾರು ಅಧಿವೇಶನದಲ್ಲಿಯೇ ಅದನ್ನು ಮಂಡಿಸಿ ಅನುಮೋದನೆ ಪಡೆದುಕೊಳ್ಳುವ ಇರಾದೆಯಲ್ಲಿದೆ ಸರಕಾರ.
ತಿದ್ದುಪಡಿ ವಿಧೇಯಕದಲ್ಲಿ ಎಂಬಿಬಿಎಸ್ನ ಅಂತಿಮ ವರ್ಷದ ಪರೀಕ್ಷೆಯನ್ನೇ ವೈದ್ಯ ಸ್ನಾತಕೋತ್ತರ ಕೋರ್ಸ್ಗಳಿಗೆ ಪ್ರವೇಶ ಪರೀಕ್ಷೆಗಳನ್ನಾಗಿ ಪರಿವರ್ತಿಸುವ ಪ್ರಸ್ತಾವನೆ ಸೂಚಿಸಲಾಗಿದೆ. ಜತೆಗೆ ಹಾಲಿ ಇರುವ ಭಾರತೀಯ ವೈದ್ಯಕೀಯ ಮಂಡಳಿ ಸ್ಥಾನದಲ್ಲಿ ರಾಷ್ಟ್ರೀಯ ವೈದ್ಯಕೀಯ ಆಯೋಗ ರಚನೆಯಾಗಲಿದೆ. ವೈದ್ಯ ಪ್ರವೇಶ ಪರೀಕ್ಷೆ ಮತ್ತು ಅಂತಿಮ ಹಂತದ ಪರೀಕ್ಷೆ ಏಮ್ಸ್, ರಾಷ್ಟ್ರೀಯ ಮಟ್ಟದ ಶಿಕ್ಷಣ ಸಂಸ್ಥೆಗಳು ಸೇರಿದಂತೆ ಎಲ್ಲ ಪ್ರಮುಖ ಸಂಸ್ಥೆಗಳಿಗೂ ಅನ್ವಯ ವಾಗಲಿದೆ. ಇದೇ ವೇಳೆ ದಿವಾಳಿ ಕಾಯ್ದೆಗೆ ಏಳು ತಿದ್ದುಪಡಿಗೆ ಸಂಪುಟ ಸಭೆ ಸಮ್ಮತಿ ಸೂಚಿಸಿದೆ. ಇದರಿಂದಾಗಿ ಕಾರ್ಪೊರೇಟ್ ಕ್ಷೇತ್ರದ ವಿವಾದಗಳನ್ನು ಸುಲಲಿತವಾಗಿ ಇತ್ಯರ್ಥಗೊಳಿಸಲು ನೆರವಾಗಲಿದೆ. ಹದಿ ನೈದನೇ ಹಣಕಾಸು ಆಯೋಗದ ಅವಧಿಯಲ್ಲಿ ನ.30ರ ವರೆಗೆ ವಿಸ್ತರಿಸುವ ಬಗ್ಗೆಯೂ ಸಂಪುಟ ತೀರ್ಮಾನ ಕೈಗೊಂಡಿದೆ. ಕಂಪನಿ ಕಾಯ್ದೆಗೆ ತಿದ್ದುಪಡಿ ತರುವ ವಿಧೇಯಕಕ್ಕೂ ಅಂಗೀಕಾರ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ