ಆಸ್ಪತ್ರೆಯಲ್ಲಿ ಮಂತ್ರವೇ ಮದ್ದು
Team Udayavani, Aug 5, 2018, 3:02 PM IST
ಬಿಹಾರದ ಆರೋಗ್ಯ ಕೇಂದ್ರವೊಂದರ ಸ್ಥಿತಿಯಿದು!
ಆಸ್ಪತ್ರೆಗೆ ಪ್ರವೇಶಿಸುವ ಮಂತ್ರವಾದಿ ಗಳಿಂದ ರೋಗಿಗಳಿಗೆ ಚಿಕಿತ್ಸೆ
ಸ್ಥಳೀಯರ ನಂಬಿಕೆಯಿಂದ ಆಸ್ಪತ್ರೆಯೀಗ ಮಂತ್ರವಾದಿಗಳ ಅಡ್ಡ
ಭೀತಿಯಿಂದ ತಡೆಯಲು ಮುಂದೆ ಬಾರದ ಆಸ್ಪತ್ರೆ ಆಡಳಿತ ಮಂಡಳಿ
ಪಟ್ನಾ: ಸಾಮಾನ್ಯವಾಗಿ ಸರಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಕೊಡಲಾಗುವ ಔಷಧಗಳು ಸಕಾಲಕ್ಕೆ ಸಿಗದಿದ್ದರೆ ಜನ ಗಲಾಟೆ ಮಾಡುವುದು ಸಹಜ. ಆದರೆ, ಬಿಹಾರದ ವೈಶಾಲಿ ಜಿಲ್ಲೆಯ ಮನ್ಹಾರ್ ಪ್ರಾಂತ್ಯದ ಲ್ಲೊಂದು ಸಮುದಾಯ ಆರೋಗ್ಯ ಕೇಂದ್ರ ವಿದ್ದು, ಅಲ್ಲಿ ವೈದ್ಯರ ಬದಲಿಗೆ ಮಂತ್ರವಾದಿ ಗಳೇ ರೋಗಿಗಳನ್ನು ವಾಸಿ ಮಾಡುತ್ತಾರೆ! ಜನ ರೋಗಿಗಳನ್ನು ಅಲ್ಲಿಗೆ ದಾಖಲು ಮಾಡಿಸುತ್ತಾರಷ್ಟೇ, ಮುಂದಿನದ್ದೆಲ್ಲ ಮಂತ್ರವಾದಿಗಳೇ ನೋಡಿಕೊಳ್ಳುತ್ತಾರೆ. ಹಾಗಾಗಿ, ಆ ಆಸ್ಪತ್ರೆಯ ಯಾವುದೇ ವಾರ್ಡಿಗೆ ಹೋದರೂ ಹಾಂ… ಹ್ರೀಂ… ಮಂತ್ರ ಅನುರಣಿಸುತ್ತದೆ.
ಇದಕ್ಕೆ ಸಾಕ್ಷಿಯೆಂಬಂತೆ, ಹಾವು ಕಚ್ಚಿದ ಮಹಿಳೆಯೊಬ್ಬರಿಗೆ ಈ ಆಸ್ಪತ್ರೆಯಲ್ಲಿ ಮಂತ್ರವಾದಿಯೊಬ್ಬ ಮಂತ್ರ ಹಾಕುತ್ತಿರುವ ವೀಡಿಯೋವೊಂದು ವೈರಲ್ ಆಗಿದ್ದು, ಇದರಿಂದಾಗಿಯೇ ಈ ವಿಚಾರ ಬೆಳಕಿಗೆ ಬಂದಿದೆ. ಈ ವೀಡಿಯೋದಲ್ಲಿ ಆಸ್ಪತ್ರೆಯ ಮಂಚದ ಮೇಲೆ ಹಾವು ಕಡಿತಕ್ಕೊಳಗಾದ ಮಹಿಳೆಯನ್ನು ಮಲಗಿಸಲಾಗಿದ್ದು, ಆಕೆಯ ಅಕ್ಕಪಕ್ಕದಲ್ಲಿರುವ ಮಂತ್ರವಾದಿಯೊಬ್ಬ ಮಂತ್ರ ಹೇಳುತ್ತಾ, ಬಟ್ಟೆಯೊಂದರಿಂದ ಆಕೆಯ ತಲೆಯಿಂದ ಹಿಡಿದು ಕಾಲಿನವರೆಗೂ ಹೊಡೆಯುತ್ತಾ ಬರುತ್ತಾನೆ.
ಈ ಆಸ್ಪತ್ರೆಯಲ್ಲಿ ವೈದ್ಯರಿದ್ದರೂ ಸ್ಥಳೀ ಯರೇ ಮಂತ್ರವಾದಿಗಳನ್ನು ಕರೆದುಕೊಂಡು ಬರುತ್ತಿರುವುದು ಸಹಜ ಎಂದು ಹೇಳಲಾ ಗುತ್ತಿದೆ. ಆದರೆ, ಇದನ್ನು ತಡೆಯಲು ಆಸ್ಪತ್ರೆ ಆಡಳಿತ ಮಂಡಳಿಯೂ ಹಿಂದೇಟು ಹಾಕುತ್ತಿದೆ. ಅಧಿಕಾರಿಗಳಿಗೆ ಮಂತ್ರವಾದಿಗಳ ಭಯ ಇರುವುದೇ ಕಾರಣ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ