ಕೋವಿಡ್ 19 ವೈರಸ್ ವಿರುದ್ಧ ಹೋರಾಟ ಪಡೆಗೆ ವೈದ್ಯ ವಿದ್ಯಾರ್ಥಿಗಳ ಸೇರ್ಪಡೆ?
Team Udayavani, Mar 31, 2020, 7:52 PM IST
ಹೊಸದಿಲ್ಲಿ: ಭಾರತದಲ್ಲಿ ಕೋವಿಡ್ 19 ವೈರಸ್ ಪೀಡಿತರ ಸಂಖ್ಯೆ ಮಿತಿಮೀರಿದರೆ ಅಂತಿಮ ವರ್ಷದ ಎಂ.ಬಿ.ಬಿ.ಎಸ್. ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು, ವೈದ್ಯಕೀಯ ಸ್ನಾತಕೋತ್ತರ ವಿದ್ಯಾರ್ಥಿಗಳನ್ನು ಈ ಮಾರಕ ವೈರಸ್ ವಿರುದ್ಧದ ಯುದ್ಧಕ್ಕೆ ಅಣಿಗೊಳಿಸಲು ಯೋಚಿಸಲಾಗಿದೆ.
ಇದು ಸಾಲದಾದರೆ, ನರ್ಸಿಂಗ್, ಪ್ಯಾರಾಮೆಡಿಕಲ್ ವಿದ್ಯಾರ್ಥಿಗಳನ್ನೂ ಇದಕ್ಕೆ ಬಳಸಿಕೊಳ್ಳಲು ಚಿಂತನೆ ನಡೆಸಲಾಗಿದೆ. ವೈದ್ಯರ ಕೊರತೆಯನ್ನು ನೀಗಿಸಲು ಭಾರತೀಯ ವೈದ್ಯಕೀಯ ಕೌನ್ಸಿಲ್ (ಎಂಸಿಐ) ಈ ನಿಟ್ಟಿನಲ್ಲಿ ಚಿಂತನೆ ನಡೆಸಿದೆ ಎಂದು “ದ ಹಿಂದುಸ್ತಾನ್ ಟೈಮ್ಸ್’ ವರದಿ ಮಾಡಿದೆ.
ಯಾಕೆ ಈ ಚಿಂತನೆ?: ವಿಶ್ವ ಆರೋಗ್ಯ ಸಂಸ್ಥೆಯ ಸಾಮಾನ್ಯ ಸಲಹೆಗಳ ಪ್ರಕಾರ, ಪ್ರತಿ 1,000 ಜನರಿಗೆ ಒಬ್ಬ ವೈದ್ಯನಾದರೂ ಇರಬೇಕು. ಆದರೆ, ಭಾರತದಲ್ಲಿ 1,500 ಜನಕ್ಕೆ ಒಬ್ಬ ವೈದ್ಯನಿದ್ದಾನೆ. ಗ್ರಾಮೀಣ ಪ್ರದೇಶಗಳಲ್ಲಿ, ಪ್ರತಿ 10,000 ಜನರಿಗೆ ಒಬ್ಬ ವೈದ್ಯನಿದ್ದಾನೆ. ಕೋವಿಡ್ 19 ವೈರಸ್ ಹೆಚ್ಚಾದರೆ ಈ ಕೊರತೆ ಇನ್ನೂ ಅಗಾಧವಾಗುವುದರಿಂದ ಈ ಚಿಂತನೆ ನಡೆಸಲಾಗಿದೆ ಮತ್ತು ಈ ಮೂಲಕ 60 ವರ್ಷ ಮೇಲ್ಪಟ್ಟ ವೈದ್ಯರೂ ಈ ಮಾರಕ ಸೋಂಕಿಗೆ ಒಳಗಾಗುವುದನ್ನು ತಪ್ಪಿಸಲೂ ಇದರಿಂದ ಸಾಧ್ಯವಾಗಲಿದೆ.
ಸದ್ಯದ ಕೋವಿಡ್ 19 ನಿರ್ವಹಣೆಯಲ್ಲೇ ಶೇ. 85ರಷ್ಟು ವೈದ್ಯರ ಕೊರತೆಯಿದೆ. ಸೋಂಕು ಹೆಚ್ಚಾಗುತ್ತಾ ಹೋದರೆ ಹೆಚ್ಚಿನ ಸಂಖ್ಯೆಯಲ್ಲಿ ವೈದ್ಯರು ಬೇಕಾಗುತ್ತದೆ. ಹಾಗಾದಾಗ, ಅಂತಿಮ ವರ್ಷದ ವೈದ್ಯಕೀಯ ವಿದ್ಯಾರ್ಥಿಗಳ ನೆರವು ಪಡೆಯಬೇಕಿದೆ.
– ಡಾ. ದೇವಿ ಶೆಟ್ಟಿ, ನಾರಾಯಣ, ಹೆಲ್ತ್ ಗ್ರೂಪ್ ಮುಖ್ಯಸ್ಥರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ