ರಾಷ್ಟ್ರೀಯ ಆರೋಗ್ಯ ನಿಧಿ : 15 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ
Team Udayavani, Jan 15, 2020, 8:51 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Use
ಹೊಸದಿಲ್ಲಿ: ತುಂಬಾ ಅಪರೂಪದ ಕಾಯಿಲೆಗಳಿಗೆ ತುತ್ತಾಗುವ ನಾಗರಿಕರಿಗೆ ‘ರಾಷ್ಟ್ರೀಯ ಆರೋಗ್ಯ ನಿಧಿ’ ಅಡಿಯಲ್ಲಿ 15 ಲಕ್ಷ ರೂ.ಗಳವರೆಗಿನ ‘ಒಂದು ಬಾರಿಯ ಚಿಕಿತ್ಸಾ ವೆಚ್ಚ’ವನ್ನು ಕೇಂದ್ರ ಸರಕಾರವೇ ಭರಿಸುವ ಮಹತ್ವದ ಪ್ರಸ್ತಾವನೆಯೊಂದನ್ನು ಮಂಗಳವಾರ ಕೇಂದ್ರ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ‘ಅಪರೂಪದ ಕಾಯಿಲೆಗಳ ರಾಷ್ಟ್ರೀಯ ನೀತಿ’ಯ ಕರಡು ಪ್ರತಿಯಲ್ಲಿ ಉಲ್ಲೇಖಿಸಲಾಗಿದೆ.
ದೀರ್ಘಕಾಲದ ಬೇಡಿಕೆಯಾದ ‘ಅಪರೂಪದ ಕಾಯಿಲೆಗಳ ಚಿಕಿತ್ಸಾ ನಿಯಮ’ಗಳನ್ನು ರೂಪಿಸುವತ್ತ ಕೇಂದ್ರ ಸರಕಾರ ಹೆಜ್ಜೆಯಿಟ್ಟಿದ್ದು, ಅದಕ್ಕೆ ಪೂರ್ವಭಾವಿಯಾಗಿ ಕರಡು ಪ್ರತಿಯನ್ನು ಆರೋಗ್ಯ ಇಲಾಖೆಯ ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದೆ. ಈ ಬಗ್ಗೆ ನಾಗರಿಕರು ಫೆ.10ರೊಳಗೆ ಸಲಹೆ, ಸೂಚನೆಗಳನ್ನು ಸಲ್ಲಿಸಲು ಅವಕಾಶವಿದೆ.
ಈ ನೀತಿಯಡಿ, ಸಾಮಾನ್ಯ ಆಸ್ಪತ್ರೆಗಳಲ್ಲಿ ಗುಣವಾಗದ ತೀರಾ ಅಪರೂಪದ ಕಾಯಿಲೆಗಳಿಗೆ ದಿಲ್ಲಿಯ ಏಮ್ಸ್, ಮೌಲಾನಾ ಆಜಾದ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಂಥ ಉನ್ನತದರ್ಜೆಯ ಆಸ್ಪತ್ರೆಗಳಲ್ಲಿ ನಾಗರಿಕರು ಚಿಕಿತ್ಸೆ ಪಡೆಯಬಹುದು.
ಇದಲ್ಲದೆ, ಈ ಯೋಜನೆಯನ್ನು ಬಡತನದ ರೇಖೆಗಿಂತ ಕೆಳಗಿರುವ ಜನರಿಗೆ ಮಾತ್ರ ಸೀಮಿತಗೊಳಿಸದೆ, ಆಯುಷ್ಮಾನ್ ಭಾರತ್-ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆಯಡಿ ನೋಂದಾಯಿಸಲ್ಪಟ್ಟಿರುವ ದೇಶದ ಶೇ. 40ರಷ್ಟು ಜನರಿಗೆ ಇದು ಲಭ್ಯವಾಗುವಂತೆ ನೋಡಿಕೊಳ್ಳಲು ಸರಕಾರ ಚಿಂತನೆ ನಡೆಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!