ದೇಶಭ್ರಷ್ಟ ಆರ್ಥಿಕ ಅಪರಾಧಿ ಮಸೂದೆಗೆ ಕೇಂದ್ರ ಅಸ್ತು,ಆಸ್ತಿಮುಟ್ಟುಗೋಲು
Team Udayavani, Apr 21, 2018, 6:36 PM IST
ನವದೆಹಲಿ: ಆರ್ಥಿಕ ಅಪರಾಧ ಎಸಗಿ ಸುಸ್ತಿದಾರರಾಗಿ ವಿದೇಶಕ್ಕೆ ಪಲಾಯನ ಮಾಡಿರುವ ಘೋಷಿತ ಅಪರಾಧಿಗಳ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಅವಕಾಶ ಕಲ್ಪಿಸುವ ಸುಗ್ರೀವಾಜ್ಞೆ ಪ್ರಸ್ತಾಪಕ್ಕೆ ಕೇಂದ್ರ ಸಚಿವ ಸಂಪುಟ ಅಂಕಿತ ಹಾಕಿದೆ ಎಂದು ಎಂದು ಮೂಲಗಳು ತಿಳಿಸಿವೆ.
ಈ ಕಾಯ್ದೆ ಈಗಾಗಲೇ ಆರ್ಥಿಕ ಅಪರಾಧ ಎಸಗಿ ದೇಶಬಿಟ್ಟು ಹೋಗಿರುವ ಉದ್ಯಮಿ ವಿಜಯ್ ಮಲ್ಯ, ನೀರವ್ ಮೋದಿಯಂತವರನ್ನು ಗುರಿಯಾಗಿರಿಸಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಶನಿವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ಪ್ರಸ್ತಾಪಕ್ಕೆ ಅಂಕಿತ ಹಾಕಲಾಗಿದೆ ಎಂದು ವರದಿ ವಿವರಿಸಿದೆ.
ಕೇಂದ್ರ ಸರ್ಕಾರ ಮಾರ್ಚ್ 12ರಂದು ಲೋಕಸಭೆಯಲ್ಲಿ ಮೊದಲ ಬಾರಿಗೆ ದೇಶಭ್ರಷ್ಟ ಆರ್ಥಿಕ ಅಪರಾಧಗಳ ಮಸೂದೆ(2018)ಯನ್ನು ಮಂಡಿಸಿತ್ತು. ಆದರೆ ಕೋಲಾಹಲದ ಹಿನ್ನೆಲೆಯಲ್ಲಿ ಈ ಮಸೂದೆ ಪಾಸ್ ಆಗಿರಲಿಲ್ಲವಾಗಿತ್ತು.
ವಿಜಯ್ ಮಲ್ಯ ವಿವಿಧ ಬ್ಯಾಂಕ್ ಗಳಿಗೆ 8,500 ಕೋಟಿ ವಂಚಿಸಿ ದೇಶ ಬಿಟ್ಟು ಪರಾರಿಯಾಗಿದ್ದರೆ, ಇತ್ತೀಚೆಗೆ ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ 12,700 ಕೋಟಿ ವಂಚಿಸಿದ್ದ ನೀರವ್ ಮೋದಿ ಕೂಡಾ ದೇಶ ಬಿಟ್ಟು ಪರಾರಿಯಾಗಿದ್ದ. ದೇಶದಲ್ಲಿ ಹಲವು ಕಾನೂನುಗಳಿದ್ದರೂ ಅವರನ್ನು ಶಿಕ್ಷಿಸಲು ಸಾಧ್ಯವಾಗುತ್ತಿಲ್ಲ. ಅವರ ಆಸ್ತಿ, ಪಾಸ್ತಿ ಜಪ್ತಿ ಮಾಡಲು ಸಾಧ್ಯವಾಗುತ್ತಿಲ್ಲ. ಈ ನಿಟ್ಟಿನಲ್ಲಿ ಮಸೂದೆ ಜಾರಿಗೆ ತರಲು ಕೇಂದ್ರ ಸರ್ಕಾರ ಚಿಂತನೆ ನಡೆಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
MUST WATCH
ಹೊಸ ಸೇರ್ಪಡೆ
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.