ಠೇವಣಿ ಮೇಲಿನ ವಿಮೆ 1 ಲಕ್ಷ ರೂ.ಗಿಂತ ಹೆಚ್ಚಿಸಲು ಕೇಂದ್ರದ ಇಂಗಿತ
Team Udayavani, Nov 15, 2019, 9:55 PM IST
ನವದೆಹಲಿ: ಬಹು ರಾಜ್ಯಗಳಲ್ಲಿ ಕಾರ್ಯವೆಸಗುತ್ತಿರುವ ಸಹಕಾರ ಬ್ಯಾಂಕ್ಗಳ ಮೇಲೆ ನಿಯಂತ್ರಣ ಹೇರುವುದಕ್ಕಾಗಿ ಠೇವಣಿಗಳ ಮೇಲೆ ಇರುವ ವಿಮೆ ಮೊತ್ತವನ್ನು 1 ಲಕ್ಷ ರೂ.ಗಳಿಗಿಂತ ಹೆಚ್ಚು ಮಾಡುವುದರ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಶುಕ್ರವಾರ ನವದೆಹಲಿಯಲ್ಲಿ ಈ ಮಾಹಿತಿ ನೀಡಿದ್ದಾರೆ.
ಅದಕ್ಕೆ ಸಂಬಂಧಿಸಿದ ಮಸೂದೆಯನ್ನು ಸಂಸತ್ನ ಚಳಿಗಾಲದ ಅಧಿವೇಶನದಲ್ಲಿ ಮಂಡಿಸಿ ಅನುಮೋದನೆ ಪಡೆದುಕೊಳ್ಳುವುದಾಗಿ ಹೇಳಿದ್ದಾರೆ. ಪಂಜಾಬ್ ಮತ್ತು ಮಹಾರಾಷ್ಟ್ರ ಸಹಕಾರ ಬ್ಯಾಂಕ್ನಲ್ಲಿ ಉಂಟಾಗಿದ್ದ ಹಗರಣದ ಹಿನ್ನೆಲೆಯಲ್ಲಿ ವಿತ್ತ ಸಚಿವರ ಘೋಷಣೆ ಮಹತ್ವ ಪಡೆದಿದೆ. . ಸದ್ಯ ಬ್ಯಾಂಕ್ಗಳಲ್ಲಿ ಇರಿಸಲಾಗಿರುವ ಠೇವಣಿಯ ಆಧಾರದಲ್ಲಿ 1 ಲಕ್ಷ ರೂ. ವಿಮೆ ನೀಡಲಾಗುತ್ತದೆ.
ವಿವಿಧ ರೀತಿಯ ಕಲ್ಯಾಣ ಕಾರ್ಯಕ್ರಮಗಳಿಗೆ ಸರ್ಕಾರ ವೆಚ್ಚ ಮಾಡುತ್ತಿರುವ ಮೊತ್ತವನ್ನು ಕಡಿತ ಮಾಡುವ ಉದ್ದೇಶ ಇಲ್ಲ ಎಂದು ಹೇಳಿದ್ದಾರೆ. ವಿವಿಧ ಸಚಿವಾಲಯಗಳು ಮತ್ತು ಇಲಾಖೆಗಳು ಅವುಗಳಿಗೆ ನೀಡಿದ ಮೊತ್ತವನ್ನು ಅದೇ ಉದ್ದೇಶಕ್ಕಾಗಿ ಬಳಕೆ ಮಾಡಬೇಕು ಎಂದು ಸಲಹೆ ಮಾಡಿದ್ದಾರೆ. ಯಾವುದೇ ದೂರಸಂಪರ್ಕ ಕಂಪನಿ ನಷ್ಟ ಅಥವಾ ಸಮಸ್ಯೆಗೆ ಒಳಗಾಗುವುದು ಸರ್ಕಾರಕ್ಕೆ ಬೇಕಾಗಿಲ್ಲ ಎಂದೂ ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mukhtar Ansari: ಕುಖ್ಯಾತ ಗ್ಯಾಂಗ್ಸ್ಟರ್, 5 ಬಾರಿ ಶಾಸಕ ಅನ್ಸಾರಿ ಸಾವು
Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
IPL; ಇಂದು ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?
Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್