ಪಲ್ಲಕ್ಕಿ ಉತ್ಸವ ನಿರ್ಬಂಧ ವಾಪಸ್ ಪಡೆದ ತಮಿಳುನಾಡು ಸರಕಾರ
Team Udayavani, May 9, 2022, 12:42 AM IST
ಚೆನ್ನೈ: ಮಠಾಧೀಶರನ್ನು ಪಲ್ಲಕ್ಕಿಯಲ್ಲಿ ಹೊತ್ತು ಸಾಗುವ ಶೈವ ಮಠದ ಸಂಪ್ರದಾಯಕ್ಕೆ ಸ್ಥಳೀಯಾಡಳಿತ ಹೇರಿದ್ದ ನಿರ್ಬಂಧವನ್ನು ಕೊನೆಗೂ ತಮಿಳುನಾಡು ಸರಕಾರ ವಾಪಸ್ ಪಡೆದಿದೆ.
ಭಾರೀ ವಿವಾದ ಸೃಷ್ಟಿಯಾದ ಹಿನ್ನೆಲೆಯಲ್ಲಿ ಸರಕಾರ ಈ ಕ್ರಮ ಕೈಗೊಂಡಿದೆ.ಪಲ್ಲಕ್ಕಿಯನ್ನು ಹೊತ್ತು ಸಾಗುವಂತಿಲ್ಲ ಎಂಬ ಆದೇಶವು ವಿವಾದ ಸೃಷ್ಟಿಸಿದ ಬೆನ್ನಲ್ಲೇ 4 ಶೈವ ಮಠಗಳ ಮಠಾಧೀಶರು ಸಿಎಂ ಎಂ.ಕೆ. ಸ್ಟಾಲಿನ್ರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಅವರ ಮನವಿಗೆ ಸ್ಪಂದಿಸಿದ ಸ್ಟಾಲಿನ್, “ಮೇ 22ರಂದು ನಡೆಯಲಿರುವ ಪಟ್ಟಿಣ ಪ್ರವೇಶಂ ಸಂಪ್ರದಾಯವು ಎಂದಿನಂತೆ ಮುಂದುವರಿಸಬಹುದು’ ಎಂದು ಭರವಸೆ ನೀಡಿದ್ದರು.
ಅದರ ಬೆನ್ನಲ್ಲೇ ಜಿಲ್ಲಾಡಳಿತವೂ ಹೊಸ ಆದೇಶ ಹೊರಡಿಸಿ, ನಿರ್ಬಂಧ ವಾಪಸ್ ಪಡೆದಿರುವುದಾಗಿ ಘೋಷಿಸಿದೆ.
ಎ.27ರಂದು ಪಲ್ಲಕ್ಕಿ ಉತ್ಸವಕ್ಕೆ ನಿರ್ಬಂಧ ಸುದ್ದಿ ಹೊರಬೀಳುತ್ತಿದ್ದಂತೆ ಎಐಎಡಿಎಂಕೆ, ಬಿಜೆಪಿ ಆಕ್ರೋಶ ವ್ಯಕ್ತಪಡಿಸಿತ್ತು. ನಿರ್ಬಂಧ ವಾಪಸ್ ಪಡೆಯದಿದ್ದರೆ ನಾನೇ ಪಲ್ಲಕ್ಕಿ ಹೊರುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಘೋಷಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
MUST WATCH
ಹೊಸ ಸೇರ್ಪಡೆ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
ಕ್ರಿಕೆಟ್ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್11ನಲ್ಲಿ ಒಲಿಯಿತು 1.5 ಕೋಟಿ
IPL; ಸ್ಟಾಯಿನಿಸ್ ಏಟಿಗೆ ತವರಲ್ಲೆ ಚಾಂಪಿಯನ್ ಚೆನ್ನೈ ಠುಸ್!
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ