ಪ್ರವಾಹ ಮಾನವ ನಿರ್ಮಿತ ವಿಪತ್ತು: ಚೆನ್ನಿತ್ತಲ


Team Udayavani, Aug 24, 2018, 3:20 AM IST

ramesh-23-8.jpg

ತಿರುವನಂತಪುರ: ಮಹಾ ಮಳೆಗೆ ಸಿಲುಕಿದ ರಾಜ್ಯದಲ್ಲಿನ ಅನೇಕ ಅಣೆಕಟ್ಟುಗಳ ಗೇಟುಗಳನ್ನು ಸೂಕ್ತ ಮುನ್ನೆಚ್ಚರಿಕೆ ನೀಡದೆ ತೆರೆಯಲಾಗಿತ್ತು. ಇದರಿಂದಾಗಿ ಹೆಚ್ಚಿನ ಜಿಲ್ಲೆಗಳು ಪ್ರವಾಹಗ್ರಸ್ತವಾದವು ಮತ್ತು 231 ಮಂದಿ ಬಲಿಯಾಗಿ ಅಗಾಧ ವಿನಾಶವುಂಟಾಯಿತು ಎಂದು ರಾಜ್ಯ ವಿಧಾನ ಸಭೆಯ ವಿಪಕ್ಷ ನಾಯಕ ರಮೇಶ್‌ ಚೆನ್ನಿತ್ತಲ ಅವರು ಆಪಾದಿಸಿದ್ದಾರೆ. ಈ ಕುರಿತು ನ್ಯಾಯಾಂಗ ತನಿಖೆಯೊಂದಕ್ಕೆ ಆದೇಶಿಸಬೇಕೆಂದು ಕೂಡ ಅವರು ಆಗ್ರಹಿಸಿದ್ದಾರೆ. ಅನೇಕ ಜೀವಗಳು ಬಲಿಯಾಗಲು ಕಾರಣವಾದ ಪ್ರವಾಹ ‘ಮಾನವನಿರ್ಮಿತ ವಿಪತ್ತು’ ಆಗಿತ್ತು ಎಂದ ಅವರು, ಎಲ್ಲ ಅಣೆಕಟ್ಟುಗಳ ಗೇಟುಗಳನ್ನು ಯಾವುದೇ ಪೂರ್ವಸೂಚನೆ ನೀಡದೆ ತೆರೆಯಲಾಯಿತು ಮತ್ತು ಇದು ಅಗಾಧ ವಿನಾಶಕ್ಕೆ ಕಾರಣವಾಯಿತು. ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಿರಲಿಲ್ಲ ಎಂದರು.

ಇಸಾಕ್‌ ವಿರುದ್ಧ ಟೀಕಾಪ್ರಹಾರ
ರಾಜ್ಯ ವಿದ್ಯುತ್‌ ಸಚಿವ ಎಂ.ಎಂ. ಮಣಿ ಮತ್ತು ಜಲಸಂಪನ್ಮೂಲ ಸಚಿವ ಟಿಎಂ ಥೋಮಸ್‌ ಇಸಾಕ್‌ ಅವರ ವಿರುದ್ಧ ಟೀಕಾಪ್ರಹಾರ ನಡೆಸಿದ ಅವರು, ಚೆರುತ್ತೋಣಿ ಅಣೆಕಟ್ಟಿನ ಗೇಟುಗಳನ್ನು ಹಾಗೂ ಇಡುಕ್ಕಿ ಜಲಾಶಯದ ಭಾಗವೊಂದನ್ನು ತೆರೆಯುವಾಗ ಎರಡು ಖಾತೆಗಳ ನಡುವೆ ಹೊಂದಾಣಿಕೆ ಇರಲಿಲ್ಲ ಎಂದರು. 

ಪರಿಸ್ಥಿತಿ ಕೈಮೀರಿ ಹೋಗುತ್ತಿದ್ದರೂ ಹೆಚ್ಚಿಗೆ ವಿದ್ಯುತ್‌ ಉತ್ಪಾದಿಸುವ ಮೂಲಕ ಗರಿಷ್ಠ ಲಾಭವನ್ನು ಗಳಿಸುವುದಕ್ಕೆ ಯತ್ನಿಸಿದ ರಾಜ್ಯ ವಿದ್ಯುಚ್ಛಕ್ತಿ ಮಂಡಲಿಯ (ಕೆಎಸ್‌ಇಬಿ) ಅಧಿಕಾರಿಗಳ ವಿರುದ್ಧವೂ ಅವರು ಟೀಕಾದಾಳಿ ನಡೆಸಿದರು. ಅನೇಕ ಗರಿಷ್ಠ ಪೀಡಿತ ಜಿಲ್ಲೆಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿ ಮನೆಗಳನ್ನು ಪ್ರವೇಶಿಸಿದ ವೇಳೆ ಜನರು ಮಲಗಿ ನಿದ್ರಿಸಿದ್ದರು ಎಂದ ಅವರು, ಸರಕಾರ ಎಚ್ಚರಿಕೆಗಳನ್ನು ಕಡೆಗಣಿಸಿತು ಎಂದು ಆರೋಪಿಸಿದರು.

ಯಾವುದೇ ಎಚ್ಚರಿಕೆ ನೀಡುವುದಕ್ಕೆ ಮುನ್ನವೇ ಪತ್ತನಂತಿಟ್ಟದ ರಾನ್ನಿ ಪ್ರದೇಶ ಜಲಾವೃತವಾಗಲಾರಂಭಿಸಿತ್ತು. ಕಾಕ್ಕಿ ಮತ್ತು ಪಂಪಾ ಅಣೆಕಟ್ಟುಗಳ ಗೇಟುಗಳನ್ನು ತೆರೆಯುವ ವೇಳೆ ಲೋಪಗಳು ಸಂಭವಿಸಿದ್ದವು ಎಂದು ಸಿಪಿಐ(ಎಂ) ಶಾಸಕ ರಾಜು ಅಬ್ರಹಾಂ ಹೇಳಿದರು. ವಯನಾಡ್‌ನ‌ ಬಾಣಾಸುರ ಅಣೆಕಟ್ಟಿನ ಮೂರು ಗೇಟುಗಳನ್ನು ಜಿಲ್ಲಾಧಿಕಾರಿಯವರಿಗೆ ಕೂಡ ತಿಳಿಸದೆ ತೆರೆಯಲಾಗಿತ್ತೆಂಬ ಆರೋಪಗಳು ಕೇಳಿಬಂದಿದ್ದವು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.