ಪೆಟ್ರೋಲ್, ಡೀಸೆಲ್ ವಾಹನ ನಿಷೇಧವಿಲ್ಲ
Team Udayavani, Sep 6, 2019, 5:45 AM IST
ಹೊಸದಿಲ್ಲಿ: ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳನ್ನು ನಿಷೇಧ ಮಾಡುವ ಪ್ರಸ್ತಾವ ಕೇಂದ್ರದ ಮುಂದೆ ಇಲ್ಲ ಎಂದು ರಸ್ತೆ ಮತ್ತು ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ಹೊಸದಿಲ್ಲಿಯಲ್ಲಿ ಗುರುವಾರ ಸೊಸೈಟಿ ಆಫ್ ಇಂಡಿಯನ್ ಅಟೊಮೊಬೈಲ್ ಮ್ಯಾನ್ಯುಫ್ಯಾಕ್ಚರರ್ಸ್ (ಎಸ್ಐಎಎಂ)ನ 59ನೇ ವಾರ್ಷಿಕ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದರು. ಆರ್ಥಿಕ ಕ್ಷೇತ್ರದಲ್ಲಿನ ನಿಧಾನಗತಿಯ ಬೆಳವಣಿಗೆ ಹಿನ್ನೆಲೆಯಲ್ಲಿ ತೊಂದರೆಗೆ ಈಡಾಗಿರುವ ಅಟೊಮೊಬೈಲ್ ಕ್ಷೇತ್ರಕ್ಕೆ ಎಲ್ಲ ರೀತಿಯ ನೆರವು ನೀಡಲಾಗುತ್ತದೆ. ಜಿಎಸ್ಟಿ ಪ್ರಮಾಣದಲ್ಲಿ ಇಳಿಕೆ ಮಾಡುವ ಬಗ್ಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಜತೆ ಮಾತುಕತೆ ನಡೆಸುವುದಾಗಿ ವಾಗ್ಧಾನ ಮಾಡಿದ್ದಾರೆ.
ಮುಂದಿನ 3 ತಿಂಗಳಲ್ಲಿ 5 ಲಕ್ಷ ಕೋಟಿ ರೂ. ಮೌಲ್ಯದ 68 ರಸ್ತೆ ಯೋಜನೆಗಳಿಗೆ ಅನುಮೋದನೆ ನೀಡಲಾಗುತ್ತದೆ ಎಂದಿದ್ದಾರೆ. ಬಿಎಸ್ 6 ವ್ಯವಸ್ಥೆ ಇರಲಿರುವ ವಾಹನಗಳಿಗೆ ಹೆಚ್ಚು ವೆಚ್ಚವಾಗಲಿರುವ ಹಿನ್ನೆಲೆಯಲ್ಲಿ ತೆರಿಗೆ ವಿಚಾರದಲ್ಲೂ ನೆರವಾಗಬೇಕು ಎಂಬ ವಾಹನೋದ್ಯಮಿಗಳ ಬೇಡಿಕೆಗೆ ಉತ್ತರಿಸಿದ ಸಚಿವರು, ಜಿಎಸ್ಟಿ ಪ್ರಮಾಣವನ್ನು ಶೇ.12ರಿಂದ ಶೇ.5ಕ್ಕೆ ಇಳಿಕೆ ಮಾಡುವಂತೆ ವಿತ್ತ ಸಚಿವರ ಜತೆ ಚರ್ಚಿಸುವುದಾಗಿ ಹೇಳಿದ್ದಾರೆ.
ಉದ್ಯೋಗ ನಷ್ಟ ಸಾಧ್ಯತೆ
ಮಂದಗತಿಯ ಆರ್ಥಿಕ ಬೆಳವಣಿಗೆ ಹಿನ್ನೆಲೆಯಲ್ಲಿ ಜಿಎಸ್ಟಿ ಪ್ರಮಾಣದಲ್ಲಿ ಕಡಿಮೆ ಮಾಡಬೇಕು ಎಂದು ಅಟೊಮೊಬೈಲ್ ಉದ್ದಿಮೆಯು ಸರಕಾರಕ್ಕೆ ಮನವಿ ಮಾಡಿದೆ. ಇದರ ಜತೆಗೆ ಆರ್ಥಿಕ ಬಿಕ್ಕಟ್ಟು ಹೀಗೇ ಮುಂದುವರಿದರೆ ಉದ್ಯೋಗ ನಷ್ಟ ಉಂಟಾಗಲಿದೆ ಎಂದು ಸೊಸೈಟಿ ಆಫ್ ಇಂಡಿಯನ್ ಅಟೊ ಮೊಬೈಲ್ ಮ್ಯಾನ್ಯುಫ್ಯಾಕ್ಚರರ್ಸ್ (ಎಸ್ಐಎಎಂ) ಕಳವಳ ವ್ಯಕ್ತಪಡಿಸಿದೆ. ಬಿಎಸ್ 6 ಮಾದರಿಯ ಪರಿಸರ ರಕ್ಷಣೆಯ ವ್ಯವಸ್ಥೆಯನ್ನು ಹೊಸ ವಾಹನ ಗಳಲ್ಲಿ ಅಳವಡಿಸಿಕೊಳ್ಳಲಿರುವ ಹಿನ್ನೆಲೆಯಲ್ಲಿ ದರ ಹೆಚ್ಚಾಗಲಿದೆ ಎಂದೂ ಅದು ಆತಂಕ ವ್ಯಕ್ತಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
MUST WATCH
ಹೊಸ ಸೇರ್ಪಡೆ
Yugadi: ಯುಗಾದಿ
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ