ಕೇಂದ್ರ ಸರಕಾರಕ್ಕೆ 1.76 ಲಕ್ಷ ಕೋ.ರೂ.: ಆರ್ಬಿಐ ಅಸ್ತು
Team Udayavani, Aug 27, 2019, 6:00 AM IST
ಹೊಸದಿಲ್ಲಿ: ಭಾರತೀಯ ರಿಸರ್ವ್ ಬ್ಯಾಂಕ್ 1.76 ಲಕ್ಷ ಕೋಟಿ ರೂ.ಗಳನ್ನು ಕೇಂದ್ರ ಸರಕಾರಕ್ಕೆ ವರ್ಗಾವಣೆ ಮಾಡಲು ನಿರ್ಧರಿಸಿದೆ. ಈ ಮೊತ್ತದಿಂದ ಸರಕಾರದ ಬೊಕ್ಕಸ ಹಗುರವಾಗಲಿದ್ದು, ಹಲವು ಮೂಲ ಸೌಕರ್ಯ ಯೋಜನೆಗಳಿಗೆ ಅನುದಾನ ಲಭ್ಯವಾಗಲಿದೆ.
ಸದ್ಯ, 2018-19ರ ಹೆಚ್ಚುವರಿ ಮೀಸಲು ನಿಧಿಯಾಗಿ 1.23 ಲಕ್ಷ ಕೋಟಿ ರೂ. ಮತ್ತು ಪರಿಷ್ಕರಿಸಿದ ಆರ್ಥಿಕ ಬಂಡವಾಳ ರೂಪುರೇಷೆ ಅಡಿಯಲ್ಲಿ ಹೆಚ್ಚುವರಿಯಾಗಿರುವ 52,637 ಕೋಟಿ ರೂ. ಅನ್ನು ವರ್ಗಾವಣೆ ಮಾಡಲು ನಿರ್ಧರಿಸಲಾಗಿದೆ. ಆರ್ಬಿಐನಿಂದ ಹೆಚ್ಚುವರಿ ಮೀಸಲು ನಿಧಿಯನ್ನು ಸರಕಾರಕ್ಕೆ ವರ್ಗಾವಣೆ ಮಾಡುವ ವಿಚಾರದಲ್ಲಿ ಕಳೆದ ವರ್ಷ ತೀವ್ರ ವಿವಾದ ಎದ್ದ ಅನಂತರದಲ್ಲಿ ಈ ಬಗ್ಗೆ ಪರಿಶೀಲಿಸಿ ವರದಿ ನೀಡಲು ಪರಿಣತರ ಸಮಿತಿ ರಚಿಸಲಾಗಿತ್ತು. ಸಮಿತಿ ಶಿಫಾರಸಿನ ಮೇರೆಗೆ ಆರ್ಬಿಐ ಈ ನಿರ್ಧಾರ ಕೈಗೊಂಡಿದೆ. ಈ ಹಿಂದೆ ಊರ್ಜಿತ್ ಪಟೇಲ್ ಗವರ್ನರ್ ಆಗಿದ್ದಾಗ ಈ ವಿಚಾರ ತೀವ್ರ ಚರ್ಚೆಗೆ ಒಳಪಟ್ಟಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
MUST WATCH
ಹೊಸ ಸೇರ್ಪಡೆ
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ